AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ವೃದ್ಧಿಮಾನ್ ಸಹಾಗೆ ಬೆದರಿಕೆ ಹಾಕಿದ್ದ ಪತ್ರಕರ್ತನಿಗೆ 2 ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ..!

Wriddhiman Saha: ಬೋರಿಯಾ ಮಜುಂದಾರ್ ಅವರು ಭಾರತದಲ್ಲಿ ಅಥವಾ ದೇಶದಲ್ಲಿ ಯಾವುದೇ ಪಂದ್ಯಕ್ಕೆ ಮಾನ್ಯತೆ ಪಡೆಯಲು ಸಾಧ್ಯವಾಗುವುದಿಲ್ಲ. ಅಲ್ಲದೆ, ಬೋರಿಯಾ ಮಜುಂದಾರ್ ಯಾವುದೇ ಬಿಸಿಸಿಐ ಸದಸ್ಯ ಅಥವಾ ರಾಜ್ಯ ಸಂಘಗಳ ಅಧಿಕಾರಿಗಳೊಂದಿಗೆ ಎರಡು ವರ್ಷಗಳವರೆಗೆ ಸಂವಹನ ನಡೆಸಲು ಸಾಧ್ಯವಾಗುವುದಿಲ್ಲ.

Breaking News: ವೃದ್ಧಿಮಾನ್ ಸಹಾಗೆ ಬೆದರಿಕೆ ಹಾಕಿದ್ದ ಪತ್ರಕರ್ತನಿಗೆ 2 ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ..!
wriddhiman saha
TV9 Web
| Updated By: ಪೃಥ್ವಿಶಂಕರ|

Updated on:May 04, 2022 | 4:33 PM

Share

ಟೀಂ ಇಂಡಿಯಾದ ವಿಕೆಟ್‌ಕೀಪರ್ ವೃದ್ಧಿಮಾನ್ ಸಹಾ (Wriddhiman Saha) ಅವರಿಗೆ ಬೆದರಿಕೆ ಹಾಕಿದ ಪತ್ರಕರ್ತ ಬೋರಿಯಾ ಮಜುಂದಾರ್ ( Boria Majumdar) ವಿರುದ್ಧ ಬಿಸಿಸಿಐ (BCCI) ಕಠಿಣ ಕ್ರಮ ಕೈಗೊಂಡಿದೆ. ಬೋರಿಯಾ ಮಜುಂದಾರ್ ಅವರನ್ನು 2 ವರ್ಷಗಳ ಕಾಲ ನಿಷೇಧಿಸಲಾಗಿದೆ. ಬಿಸಿಸಿಐ ರಚಿಸಿದ್ದ ತ್ರಿಸದಸ್ಯ ಸಮಿತಿಯು ಮಜುಂದಾರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದೆ. ಸಂದರ್ಶನ ನೀಡದಿದ್ದಕ್ಕೆ ಸಹಾಗೆ ಮಜುಂದಾರ್ ಬೆದರಿಕೆ ಹಾಕಿದ್ದರು. ಇದನ್ನು ಸಹಾ ಕೂಡ ಟ್ವೀಟ್ ಮೂಲಕ ಬಹಿರಂಗಪಡಿಸಿದ್ದರು. ಆ ಟ್ವೀಟ್‌ನಲ್ಲಿ ಸಹಾ ಪತ್ರಕರ್ತನ ಹೆಸರನ್ನು ಉಲ್ಲೇಖಿಸದಿದ್ದರೂ, ಬಿಸಿಸಿಐ ಈ ವಿಷಯದ ಕುರಿತು ಸಹಾ ಜೊತೆಗೆ ಚರ್ಚೆ ನಡೆಸಿತ್ತು. ಈ ವಿಚಾರಣೆಯ ನಂತರ ಬೋರಿಯಾ ಮಜುಂದಾರ್ ಹೆಸರು ಹೊರಬಿದ್ದಿತ್ತು. ಈ ಬಗ್ಗೆ ತನಿಖೆ ನಡೆಸಲು ಬಿಸಿಸಿಐ ಸಮಿತಿಯೊಂದನ್ನು ರಚಿಸಿದ್ದು, ತಪ್ಪಿತಸ್ಥರೆಂದು ಸಾಬೀತಾದ ನಂತರ, ಈ ಪ್ರಸಿದ್ಧ ಕ್ರೀಡಾ ಪತ್ರಕರ್ತನನ್ನು 2 ವರ್ಷಗಳ ಕಾಲ ಕ್ರಿಕೆಟ್ ವರದಿಗಾರಿಕೆಯಿಂದ ನಿಷೇಧಿಸಲಾಗಿದೆ.

ಬೋರಿಯಾ ಮಜುಂದಾರ್ ವಿರುದ್ಧ ಕ್ರಮ ಬಿಸಿಸಿಐನ ಆದೇಶದ ಪ್ರಕಾರ ಬೋರಿಯಾ ಮಜುಂದಾರ್ ಅವರು 2 ವರ್ಷಗಳ ಕಾಲ ಯಾವುದೇ ಭಾರತೀಯ ಕ್ರಿಕೆಟಿಗರನ್ನು ಸಂದರ್ಶನ ಮಾಡಲು ಸಾಧ್ಯವಿಲ್ಲ. ಬೋರಿಯಾ ಮಜುಂದಾರ್ ಅವರು ಭಾರತದಲ್ಲಿ ಅಥವಾ ದೇಶದಲ್ಲಿ ಯಾವುದೇ ಪಂದ್ಯಕ್ಕೆ ಮಾನ್ಯತೆ ಪಡೆಯಲು ಸಾಧ್ಯವಾಗುವುದಿಲ್ಲ. ಅಲ್ಲದೆ, ಬೋರಿಯಾ ಮಜುಂದಾರ್ ಯಾವುದೇ ಬಿಸಿಸಿಐ ಸದಸ್ಯ ಅಥವಾ ರಾಜ್ಯ ಸಂಘಗಳ ಅಧಿಕಾರಿಗಳೊಂದಿಗೆ ಎರಡು ವರ್ಷಗಳವರೆಗೆ ಸಂವಹನ ನಡೆಸಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ
Image
DC vs SRH IPL 2022 Head To Head: ಎರಡು ತಂಡಗಳಿಗೂ ಗೆಲುವು ಅಗತ್ಯ; ಇಬ್ಬರ ಮುಖಾಮುಖಿ ವರದಿ ಹೀಗಿದೆ
Image
Wriddhiman Saha: ಬಿಸಿಸಿಐ ಕೇಳಿದರೆ ನಾನು ಅವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ: ಸಾಹಾರಿಂದ ಮತ್ತೊಂದು ಬಾಂಬ್
Image
Wriddhiman Saha: ನಿವೃತ್ತಿ ನೀಡು ಎಂದು ದ್ರಾವಿಡ್ ಸೂಚಿಸಿದರು: ತಂಡದಿಂದ ಕೈಬಿಟ್ಟ ಬೆನ್ನಲ್ಲೇ ಸಾಹ ಶಾಕಿಂಗ್ ಹೇಳಿಕೆ

ಏನಿದೆ ಸ್ಕ್ರೀನ್ ಶಾಟ್​ನಲ್ಲಿ?: ಫೆಬ್ರವರಿ 19 ರಂದು ವೃದ್ಧಿಮಾನ್ ಸಹಾ ಅವರು ಟ್ವೀಟ್ ಮಾಡಿ, ಅದರಲ್ಲಿ ಬೋರಿಯಾ ಮಜುಂದಾರ್ ಅವರ ವಾಟ್ಸಾಪ್ ಸಂದೇಶದ ಕೆಲವು ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದರು. ಇದರಲ್ಲಿ ನನ್ನ ಜೊತೆಗೆ ಒಂದು ಸಂದರ್ಶನ ಮಾಡಿ, ಒಳ್ಳೆಯದಾಗುತ್ತದೆ, ನೀವು ಎಲ್ಲರಿಗೂ ಸಂದರ್ಶನ ನೀಡಲು ಬಯಸಿದರೆ, ನಾನೇನು ಬಲವಂತ ಮಾಡುವುದಿಲ್ಲ. ಅವರು(ಆಯ್ಕೆ ಸಮಿತಿ) ಅತ್ಯುತ್ತಮವಾದ ಒಬ್ಬ ವಿಕೆಟ್ ಕೀಪರ್ ಆಯ್ಕೆ ಮಾಡಿದ್ದಾರೆ. ನೀವು ಅತ್ಯುತ್ತಮವಲ್ಲದ 11 ಪತ್ರಕರ್ತರನ್ನು ಆಯ್ಕೆ ಮಾಡಿಕೊಂಡಿರುವುದು ನನ್ನ ಪ್ರಕಾರ ಉತ್ತಮ ನಿರ್ಧಾರವಲ್ಲ. ನೀವು ನಿಮಗೆ ಯಾರು ಸಹಾಯ ಮಾಡಬಲ್ಲರೋ ಅವರನ್ನು ಆಯ್ಕೆ ಮಾಡಿ” ಎಂದು ವಾಟ್ಸ್​ಆ್ಯಪ್​ ಮೂಲಕ ಸರಣಿ ಸಂದೇಶ ಕಳಹಿಸಿದ್ದರು.ಆದರೆ, ಅವರ ಕರೆಯನ್ನು ಸಹಾ ಸ್ವೀಕರಿಸದ್ದಕ್ಕೆ ಕೋಪಗೊಂಡಿರುವ ಆ ಪತ್ರಕರ್ತ, ನೀವು ನನಗೆ ಕರೆ ಮಾಡಿಲ್ಲ, ಇನ್ನು ಯಾವತ್ತೂ ನಾನು ನಿಮ್ಮ ಸಂದರ್ಶನ ಮಾಡುವುದಿಲ್ಲ. ಈ ಅವಮಾನವನ್ನು ನಾನು ಸಾಮಾನ್ಯ ಎಂದು ಪರಿಗಣಿಸುವುದಿಲ್ಲ. ನಾನು ಇದನ್ನು ನೆನಪಿನಲ್ಲಿಟ್ಟುಕೊಂಡಿರುತ್ತೇನೆ. ಇದು ನೀವು ಮಾಡಬೇಕಾದ ಕೆಲಸವಾಗಿರಲಿಲ್ಲ,” ಎಂದು ಕೋಪದಿಂದ ಸಂದೇಶ ಕಳುಹಿಸಿದ್ದರು.

ಈ ಸಂದೇಶಗಳ ಸ್ಕ್ರೀನ್​ ಶಾಟ್​ ತೆಗೆದಿದ್ದ ವೃದ್ಧಿಮಾನ್ ಸಹಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಮಂಡಿದ್ದು “ಭಾರತೀಯ ಕ್ರಿಕೆಟ್​ಗೆ ನಾನು ಇಷ್ಟೆಲ್ಲಾ ಕೊಡುಗೆ ನೀಡಿದ್ದರೂ, ಗೌರವಾನ್ವಿತ ಪತ್ರಕರ್ತ ಎನಿಸಿಕೊಂಡಿರುವ ವ್ಯಕ್ತಿಯಿಂದ ಇದನ್ನು ಎದುರಿಸಿದ್ದೇನೆ. ಪತ್ರಿಕೋದ್ಯಮ ಎತ್ತ ಸಾಗುತ್ತಿದೆ,” ಎಂದು ಟ್ವೀಟ್​ ಮಾಡಿಕೊಂಡಿದ್ದರು.

Published On - 4:33 pm, Wed, 4 May 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್