AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಸಿಸಿಐ ಒತ್ತಡಕ್ಕೆ ಸಿಲುಕಿ ಸಂಜುಗೆ ತಂಡದ ನಾಯಕತ್ವ ವಹಿಸಿದೆ’; ಪಾಕ್ ಕ್ರಿಕೆಟಿಗನ ಗಂಭೀರ ಆರೋಪ

Sanju Samson: ಸಂಜುಗೆ ಅಪಾರ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾದಲ್ಲಿ ಅವರ ಬ್ಯಾಟಿಂಗ್ ಶೈಲಿಯು ಭಾರತದ ಎಕ್ಸ್-ಫ್ಯಾಕ್ಟರ್ ಆಗಿರಬಹುದಾಗಿತ್ತು. ಬೌನ್ಸಿ ವಿಕೆಟ್‌ಗಳಲ್ಲಿ ಸಂಜುಗಿಂತ ಉತ್ತಮವಾಗಿ ಯಾರೂ ಆಡುವುದಿಲ್ಲ ಎಂದಿದ್ದಾರೆ.

‘ಬಿಸಿಸಿಐ ಒತ್ತಡಕ್ಕೆ ಸಿಲುಕಿ ಸಂಜುಗೆ ತಂಡದ ನಾಯಕತ್ವ ವಹಿಸಿದೆ’; ಪಾಕ್ ಕ್ರಿಕೆಟಿಗನ ಗಂಭೀರ ಆರೋಪ
Danish Kaneria, Sanju Samson
TV9 Web
| Edited By: |

Updated on:Sep 18, 2022 | 6:55 PM

Share

ನ್ಯೂಜಿಲೆಂಡ್ ‘ಎ’ ತಂಡ ಇದೇ ತಿಂಗಳ 22 ರಿಂದ ಭಾರತ ‘ಎ’ ತಂಡದ ವಿರುದ್ಧ ಏಕದಿನ ಸರಣಿ ಆಡಲಿದೆ. ಸೆಪ್ಟೆಂಬರ್ 22, 25 ಮತ್ತು 27 ರಂದು ಚೆನ್ನೈನಲ್ಲಿ ಮೂರು ODI ಪಂದ್ಯಗಳು ನಡೆಯಲಿವೆ. ಈ ಸರಣಿಗಾಗಿ ಸಂಜು ಸ್ಯಾಮ್ಸನ್ (Sanju Samson) ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತೀಯ ವಿಕೆಟ್‌ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ. ಬದಲಿಯಾಗಿ ಸಂಜುಗೆ, BCCI ನ್ಯೂಜಿಲೆಂಡ್ ‘ಎ’ ತಂಡದ ವಿರುದ್ಧದ ಸರಣಿಗೆ ನಾಯಕತ್ವ ನೀಡಿದೆ. ಟಿ20 ವಿಶ್ವಕಪ್​ಗೆ (T20 World Cup) ತಂಡದಲ್ಲಿ ಸ್ಥಾನ ಸಿಗದಿದ್ದಕ್ಕೆ ಕೋಪಗೊಂಡಿದ ಸಂಜು ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳು ಈ ಸುದ್ದಿಯಿಂದ ಕೊಂಚ ಸಂಭ್ರಮದಲ್ಲಿದ್ದಾರೆ. ಅಲ್ಲದೆ ಕೆಲವು ನೆಟ್ಟಿಗರು ಬಿಸಿಸಿಐ, ಭಯದಿಂದಲೇ ಸಂಜುಗೆ ನ್ಯೂಜಿಲೆಂಡ್ ‘ಎ’ ತಂಡದ ವಿರುದ್ದದ ಸರಣಿಗೆ ನಾಯಕತ್ವ ವಹಿಸಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇಂತಹವರ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಕೂಡ ಸೇರಿದ್ದಾರೆ.

ಪಾಕ್ ತಂಡದ ಮಾಜಿ ಲೆಗ್‌ಸ್ಪಿನ್ನರ್ ದಾನಿಶ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ, “ಸಂಜುಗೆ ಅಪಾರ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾದಲ್ಲಿ ಅವರ ಬ್ಯಾಟಿಂಗ್ ಶೈಲಿಯು ಭಾರತದ ಎಕ್ಸ್-ಫ್ಯಾಕ್ಟರ್ ಆಗಿರಬಹುದಾಗಿತ್ತು. ಬೌನ್ಸಿ ವಿಕೆಟ್‌ಗಳಲ್ಲಿ ಸಂಜುಗಿಂತ ಉತ್ತಮವಾಗಿ ಯಾರೂ ಆಡುವುದಿಲ್ಲ. ಅಂತಹದರಲ್ಲಿ ಬಿಸಿಸಿಐ ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡದೆ, ಅವರನ್ನು ಈಗ ಭಾರತ ಎ (ನ್ಯೂಜಿಲೆಂಡ್ ವಿರುದ್ಧ) ತಂಡದ ನಾಯಕರನ್ನಾಗಿ ಮಾಡಿದೆ. ಅದು ಕೂಡ ಬಿಸಿಸಿಐ ಒತ್ತಡದಲ್ಲಿ (ಟಿ20 ವಿಶ್ವಕಪ್‌ಗೆ ಸಂಜು ಅವರನ್ನು ಆಯ್ಕೆ ಮಾಡದಿರುವುದು) ಈ ನಿರ್ಧಾರ ತೆಗೆದುಕೊಂಡಿದೆ ಎಂದು ದಾನಿಶ್ ಕನೇರಿಯಾ ಹೇಳಿದ್ದಾರೆ.

ಸಂಜು ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದಿರುವ ದಾನಿಶ್ ಕನೇರಿಯಾ, ನೀವು ಯಾವುದೇ ವಿಭಾಗದಲ್ಲಿ ರಾಷ್ಟ್ರೀಯ ತಂಡದ ನಾಯಕತ್ವ ವಹಿಸಿದಾಗ ಅದು ಹೆಮ್ಮೆಯ ವಿಷಯವಾಗಿದೆ. ಸಂಜು ಸ್ಯಾಮ್ಸನ್‌ಗೆ ಇದು ಉತ್ತಮ ಅವಕಾಶ. ಅವರು ನಾಯಕನಾಗಿ ಭಾರತ ತಂಡಕ್ಕೆ ಸರಣಿಯನ್ನು ಗೆಲ್ಲಲು ಸಾಧ್ಯವಾದರೆ, ಅದು ಅದ್ಭುತ ಸಾಧನೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಭಾರತ ‘ಎ’ ತಂಡ: ಸಂಜು ಸ್ಯಾಮ್ಸನ್ (ನಾಯಕ), ಪೃಥ್ವಿ ಶಾ, ಅಭಿಮನ್ಯು ಈಶ್ವರನ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕೆಎಸ್ ಭರತ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ರಾಹುಲ್ ಚಾಹರ್, ತಿಲಕ್ ವರ್ಮಾ, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ನವದೀಪ್ ಸೈನಿ, ರಾಜ್ ಬಾವಾ.

Published On - 6:55 pm, Sun, 18 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ