AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐ ಕೇಂದ್ರ ಒಪ್ಪಂದ: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಹಿಂಬಡ್ತಿ ಸಾಧ್ಯತೆ

BCCI Central Contract 2025: ಪ್ರತಿ ವರ್ಷ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರ ಜೊತೆ ಒಪ್ಪಂದ ಮಾಡಿಕೊಳ್ಳುತ್ತಾರೆ. ಈ ಒಪ್ಪಂದದ ಅನುಸಾರ ಆಟಗಾರರಿಗೆ ವಾರ್ಷಿಕ ಮೊತ್ತವನ್ನು ಪಾವತಿಸಲಾಗುತ್ತದೆ. ಇಲ್ಲಿ ಆಟಗಾರರನ್ನು ಎ, ಬಿ, ಸಿ ಮತ್ತು ಡಿ ಗ್ರೇಡ್ ಎಂದು ವಿಂಗಡಿಸಲಾಗುತ್ತಿದ್ದು, ಈ ಮೂಲಕ ಕೋಟಿ ರೂ. ಮೊತ್ತದ ವೇತನವನ್ನು ಪಾವತಿಸಲಾಗುತ್ತದೆ.

ಬಿಸಿಸಿಐ ಕೇಂದ್ರ ಒಪ್ಪಂದ: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಹಿಂಬಡ್ತಿ ಸಾಧ್ಯತೆ
Virat Kohli - Rohit Sharma
ಝಾಹಿರ್ ಯೂಸುಫ್
|

Updated on:Mar 12, 2025 | 12:04 PM

Share

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2025ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಹಿಂಬಡ್ತಿ ನೀಡುವ ಸಾಧ್ಯತೆಯಿದೆ.

ಬಿಸಿಸಿಐನ ಪ್ರಸ್ತುತ ಕೇಂದ್ರ ಒಪ್ಪಂದದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಗ್ರೇಡ್ ಎ ಪ್ಲಸ್​ನಲ್ಲಿದ್ದಾರೆ. ಅದರಂತೆ ಈ ನಾಲ್ವರು ಆಟಗಾರರು ವಾರ್ಷಿಕವಾಗಿ ತಲಾ 7 ಕೋಟಿ ರೂ. ಪಡೆಯುತ್ತಿದ್ದಾರೆ.

ಆದರೆ ಇದೀಗ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಹೀಗಾಗಿ ಈ ಮೂವರನ್ನು ಗ್ರೇಡ್ ಎ ಪ್ಲಸ್ ಶ್ರೇಣಿಯಿಂದ ಕೈ ಬಿಡುವ ಸಾಧ್ಯತೆಯಿದೆ. ಅಲ್ಲದೆ ಹೊಸ ಒಪ್ಪಂದದಲ್ಲಿ ಈ ಮೂವರನ್ನು ಎ ಗ್ರೇಡ್‌ಗೆ ಸೇರಿಸುತ್ತಾರೋ ಅಥವಾ ಬಿ ಗ್ರೇಡ್‌ಗೆ ಪರಿಗಣಿಸುತ್ತಾರೋ ಎಂಬುದೇ ಈಗ ಕುತೂಹಲ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಅಶ್ವಿನ್ ಔಟ್, ಸಿರಾಜ್​ಗೆ ಹಿಂಬಡ್ತಿ:

ಬಿಸಿಸಿಐನ ಪ್ರಸ್ತುತ ಕೇಂದ್ರ ಒಪ್ಪಂದದಲ್ಲಿ ಒಟ್ಟು 6 ಆಟಗಾರರು ಎ ಗ್ರೇಡ್​ನಲ್ಲಿದ್ದಾರೆ. ಅವರೆಂದರೆ ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ. ಈ ದರ್ಜೆಯ ಆಟಗಾರರು ಬಿಸಿಸಿಐನಿಂದ ವಾರ್ಷಿಕವಾಗಿ 5 ಕೋಟಿ ರೂ. ಪಡೆಯುತ್ತಿದ್ದಾರೆ. ಆದರೆ ಈಗಾಗಲೇ ನಿವೃತ್ತರಾಗಿರುವ ಅಶ್ವಿನ್ ಅವರನ್ನು ಹೊಸ ಒಪ್ಪಂದದಿಂದ ಕೈ ಬಿಡಲಿದ್ದಾರೆ. ಇನ್ನು ಮೊಹಮ್ಮದ್ ಸಿರಾಜ್ ಅವರನ್ನು ಎ ದರ್ಜೆಯಿಂದ ಬಿ ದರ್ಜೆಗೆ ಇಳಿಸುವ ಸಾಧ್ಯತೆಯಿದೆ.

ಅದೇ ರೀತಿ, ಬಿಸಿಸಿಐನ ಪ್ರಸ್ತುತ ಕೇಂದ್ರ ಒಪ್ಪಂದದಲ್ಲಿ, ಗ್ರೇಡ್ ಬಿ ನಲ್ಲಿ 5 ಆಟಗಾರರು ಮತ್ತು ಗ್ರೇಡ್ ಸಿ ನಲ್ಲಿ ಒಟ್ಟು 15 ಆಟಗಾರರಿದ್ದಾರೆ. ಈ ಎರಡೂ ದರ್ಜೆಗಳಲ್ಲಿ ಒಟ್ಟು 4 ಆಟಗಾರರು ಹೊಸ ಒಪ್ಪಂದದಿಂದ ಹೊರಗುಳಿಯುವ ಸಾಧ್ಯತೆಯಿದೆ. ಅದರಂತೆ ಕೆ.ಎಸ್. ಭರತ್, ಆವೇಶ್ ಖಾನ್, ರಜತ್ ಪಾಟಿದಾರ್ ಮತ್ತು ಜಿತೇಶ್ ಶರ್ಮಾ ಅವರನ್ನು ಕೈ ಬಿಟ್ಟರೂ ಅಚ್ಚರಿಪಡಬೇಕಿಲ್ಲ.

ಯಾರಿಗೆ ಬಂಪರ್?

ಬಿಸಿಸಿಐ ಹೊರಡಿಸಲಿರುವ ಟೀಮ್ ಇಂಡಿಯಾದ ಹೊಸ ಕೇಂದ್ರ ಒಪ್ಪಂದದಲ್ಲಿ ಗ್ರೇಡ್ ಎ ಪ್ಲಸ್​ನಲ್ಲಿ ಸ್ಥಾನ ಪಡೆಯುವವರು ಯಾರು? ಎಂಬುದೇ ಈಗ ಕುತೂಹಲ. ಏಕೆಂದರೆ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಕ್ಷರ್ ಪಟೇಲ್ ಭಾರತ ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಮೂವರಿಗೆ ಮುಂಬಡ್ತಿ ಸಿಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಮುಂದಿನ ವಿಶ್ವಕಪ್​ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ..!

ಇವರಲ್ಲದೆ ಕಳೆದ ಬಾರಿಯ ಒಪ್ಪಂದದಿಂದ ಕೈ ಬಿಡಲಾಗಿದ್ದ, ಶ್ರೇಯಸ್ ಅಯ್ಯರ್ ಅವರನ್ನು ಈ ಬಾರಿ ಸೆಂಟ್ರಲ್ ಕಾಂಟ್ರಾಕ್ಟ್​ಗೆ ಪರಿಗಣಿಸಲಿದ್ದಾರೆ ಎಂದು ತಿಳಿದ ಬಂದಿದೆ. ಇನ್ನು ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಕೂಡ ಹೊಸ ಕೇಂದ್ರ ಒಪ್ಪಂದದಲ್ಲಿ ಸ್ಥಾನ ಪಡೆಯುವುದು ಖಚಿತ ಎನ್ನಬಹುದು.

Published On - 11:55 am, Wed, 12 March 25

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ