AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಹರಾಜಿನ ಬಳಿಕ ಅಂತಿಮ ನಿರ್ಧಾರ: ಐಪಿಎಲ್ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ಬಿಸಿಸಿಐ

IPL Auction: ಇನ್​ಸೈಡ್ ಸ್ಫೋರ್ಟ್ಸ್​ ಮಾಡಿರುವ ವರದಿಯ ಪ್ರಕಾರ, ಐಪಿಎಲ್ 2022 ಎಲ್ಲಿ ಆಯೋಜಿಸಬೇಕು ಮತ್ತು ವೇಳಾಪಟ್ಟಿಯ ಬಗ್ಗೆ ಚರ್ಚೆ ಏನಿದ್ದರೂ ಹರಾಜು ಪ್ರಕ್ರಿಯೆ ಮುಗಿದ ನಂತರ ಎಂದು ಬಿಸಿಸಿಐ ಹೇಳಿದೆಯಂತೆ.

IPL 2022: ಹರಾಜಿನ ಬಳಿಕ ಅಂತಿಮ ನಿರ್ಧಾರ: ಐಪಿಎಲ್ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ಬಿಸಿಸಿಐ
IPL 2022 Mega Auction
TV9 Web
| Edited By: |

Updated on: Jan 10, 2022 | 8:31 AM

Share

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League)​ ಟೂರ್ನಿಗೂ ಕೊರೊನಾ ವಕ್ಕರಿಸಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆಯಬೇಕಿರುವ ಮೆಗಾ ಹರಾಜು (Mega Auction) ಕಾರ್ಯಕ್ರಮಕ್ಕೇ ಅಡೆತಡೆಗಳು ಆಗುತ್ತಿದೆ. ಹೀಗಾಗಿ ಇದನ್ನು ಭಾರತದಲ್ಲಿ ನಡೆಸಲು ಸಾಧ್ಯವೇ ಅಥವಾ ಮತ್ತೆ ವಿದೇಶದತ್ತ ಮುಖ ಮಾಡಲಿದೆಯೇ ಎಂಬ ಪ್ರಶ್ನೆ ಕಾಡತೊಡಗಿದೆ. ಕೋವಿಡ್‌-19 (Covid 19) ಸೋಂಕಿನ ಹಾವಳಿ ಕಾರಣ ಬಿಸಿಸಿಐ (BCCI) ಈಗಾಗಲೇ ಪ್ರತಿಷ್ಠ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯನ್ನು ಮುಂದೂಡಿ ಆಗಿದೆ. ಈ ನಿಟ್ಟಿನಲ್ಲಿ ಐಪಿಎಲ್‌ 2022 ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಲು ಮತ್ತೆ ಯುಎಇ ಆಯ್ಕೆ ಮಾಡಿಕೊಂಡರೆ ಅಚ್ಚರಿ ಪಡುವಹಾಗಿಲ್ಲ. ಇದಕ್ಕೆ ಪುಷ್ಠಿ ಎಂಬಂತೆ ಎರಡು ದಿನಗಳಿಂದ ವಿದೇಶದಲ್ಲಿ ಐಪಿಎಲ್ 2022 (IPL 2022) ಆಯೋಜಿಸಲು ಬಿಸಿಸಿಐ ಆಲೋಚನೆ ನಡೆಸಿದೆ ಎಂದು ಹೇಳಲಾಗಿತ್ತು. ಆದರೀಗ ಬಿಸಿಸಿಐ ಮೂಲಗಳಿಂದ ಅಧಿಕೃತ ಹೇಳಿಕೆಯೊಂದು ಬಂದಿದೆ.

ಇನ್​ಸೈಡ್ ಸ್ಫೋರ್ಟ್ಸ್​ ಮಾಡಿರುವ ವರದಿಯ ಪ್ರಕಾರ, ಐಪಿಎಲ್ 2022 ಎಲ್ಲಿ ಆಯೋಜಿಸಬೇಕು ಮತ್ತು ವೇಳಾಪಟ್ಟಿಯ ಬಗ್ಗೆ ಚರ್ಚೆ ಏನಿದ್ದರೂ ಹರಾಜು ಪ್ರಕ್ರಿಯೆ ಮುಗಿದ ನಂತರ ಎಂದು ಬಿಸಿಸಿಐ ಹೇಳಿದೆಯಂತೆ. ಸದ್ಯಕ್ಕೆ ನಮ್ಮ ಮೊದಲ ಆದ್ಯತೆ ಮೆಗಾ ಹರಾಜಿನ ಮೇಲೆ ಎಂದು ಬಿಸಿಸಿಐಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರಂತೆ.

ಭಾರತದಲ್ಲಿ ಕೊರೊನಾ ವೈರಸ್‌ ಸೋಂಕಿನ ಅಬ್ಬರ ಮತ್ತೆ ಶುರುವಾಗಿದೆ. ಇತ್ತೀಚಿನ ದಾಖಲೆಗಳ ಪ್ರಕಾರ ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಜೊತೆಗೆ ಓಮಿಕ್ರಾನ್‌ ಸೋಂಕು ಕೂಡ ಹೆಚ್ಚಾಗುವ ಭೀತಿ ಇದೆ. ಈ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮುಂಬರುವ 15ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯನ್ನು ವಿದೇಶದಲ್ಲಿ ಆಯೋಜಿಸಲು ಆಲೋಚನೆ ನಡೆಸಿದೆ ಎಂದು ಈ ಹಿಂದೆ ವರದಿಯಾಗಿತ್ತು.

ಹರಾಜು ಪ್ರಕ್ರಿಯೆ ಯಾವಾಗ?:

ಮೊನ್ನೆಯಷ್ಟೆ ಬಿಸಿಸಿಐ ಮುಂದಿನ ತಿಂಗಳು ಫೆಬ್ರವರಿ 12-13ರಂದು ಆಟಗಾರರ ಹರಾಜು ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಿತ್ತು. ಆದರೀಗ ಮೆಗಾ ಆಕ್ಷನ್ ಕೂಡ ಬೆಂಗಳೂರಿನಿಂದ ಸ್ಥಳಾಂತರ ಮತ್ತು ದಿನಾಂಕ ಬದಲಾವಣೆಯ ಆಗುವುದು ಖಚಿತವಾಗಿದೆ. ಬೆಂಗಳೂರು ಸಹಿತ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿಢೀರ್ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ, ಹೊಸ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಇದರನ್ವಯ ನೈಟ್ ಕಫ್ರ್ಯೂ ವೀಕೆಂಡ್ ಲಾಕ್‌ಡೌನ್ ಸಹಿತ ಹಲವು ನಿರ್ಬಂಧಗಳು ಜಾರಿಯಾಗಿದ್ದು, ಹೆಚ್ಚಿನ ಜನರನ್ನು ಸೇರಿಸಿ ಹರಾಜು ಪ್ರಕ್ರಿಯೆಯನ್ನು ಆಯೋಜಿಸಲು ಸಾಧ್ಯವಿಲ್ಲದ ಕಾರಣ ಬಿಸಿಸಿಐ ಈ ತೀರ್ಮಾನಕ್ಕೆ ಬಂದಿದೆ.

ಐಪಿಎಲ್ ಹರಾಜು ಪ್ರಕ್ರಿಯೆಗೆ ಬಿಸಿಸಿಐ ಈಗಾಗಲೆ ಕೋಲ್ಕತ್ತಾ, ಕೊಚ್ಚಿ ಮತ್ತು ಮುಂಬೈಯನ್ನು ಮೀಸಲು ತಾಣಗಳಾಗಿ ಹೆಸರಿಸಿದೆ. ಜೊತೆಗೆ ಮೆಗಾ ಹರಾಜು ಪ್ರಕ್ರಿಯೆಯನ್ನು ಇನ್ನೊಂದಿಷ್ಟು ಸಮಯ ಮುಂದಕ್ಕೆ ಹಾಕಲು ನಿರ್ಧಾರ ಮಾಡಿದೆಯಂತೆ. ಐಪಿಎಲ್ 2022ರ ಸಂಪೂರ್ಣ ಎಲ್ಲ ಪಂದ್ಯಗಳನ್ನು ಮುಂಬೈನಲ್ಲಿ ಆಯೋಜಿಸಲಿದೆ ಎಂಬ ಮಾತುಗಳು ಕೂಡ ಇದೆ.

Virat Kohli: ದ. ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್​ಗೆ ಕೊಹ್ಲಿ ಫಿಟ್: ಕೇಪ್​ಟೌನ್​ನಲ್ಲಿ ಭರ್ಜರಿ ಅಭ್ಯಾಸ

ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ