AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ರಾಹುಲ್ ಫಿಟ್ ಆಗುತ್ತಿದ್ದಂತೆ ನಾಯಕತ್ವದಿಂದ ಧವನ್​ಗೆ ಗೇಟ್ ಪಾಸ್: ಅಭಿಮಾನಿಗಳ ಆಕ್ರೋಶ

India vs Zimbabwe: ವಾರಗಳ ಹಿಂದೆ ಬಿಸಿಸಿಐ ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟ ಮಾಡಿತ್ತು. ಕೆಎಲ್ ರಾಹುಲ್ ಆಗ ಫಿಟ್ ಆಗಿಲ್ಲದ ಕಾರಣ ಇವರ ಹೆಸರನ್ನು ಕೈಬಿಡಲಾಗಿತ್ತು. ಹೀಗಾಗಿ ಶಿಖರ್ ಧವನ್​ಗೆ ನಾಯಕನ ಪಟ್ಟ ನೀಡಿದ್ದರು.

KL Rahul: ರಾಹುಲ್ ಫಿಟ್ ಆಗುತ್ತಿದ್ದಂತೆ ನಾಯಕತ್ವದಿಂದ ಧವನ್​ಗೆ ಗೇಟ್ ಪಾಸ್: ಅಭಿಮಾನಿಗಳ ಆಕ್ರೋಶ
KL Rahul and Shikhar Dhawan
TV9 Web
| Updated By: Vinay Bhat|

Updated on:Aug 12, 2022 | 11:46 AM

Share

ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ತೋರಿದ ಭಾರತ ತಂಡ ಇದೀಗ ಜಿಂಬಾಬ್ವೆ ನಾಡಿಗೆ ತೆರಳಲು ಸಜ್ಜಾಗುತ್ತಿದೆ. ಆಗಸ್ಟ್​ 18, 20 ಹಾಗೂ 22 ರಂದು ಭಾರತ-ಜಿಂಬಾಬ್ವೆ (India vs Zimbabwe) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿವೆ. ರೋಹಿತ್ ಶರ್ಮಾ (Rohit Sharma), ರಿಷಭ್ ಪಂತ್, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಕೆಲ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇದೇ ವೇಳೆ ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ. ಇದರ ಜೊತೆಗೆ ಇಂಜುರಿಯಿಂದ ಗುಣಮುಖರಾಗಿ ಕೆಎಲ್ ರಾಹುಲ್ (KL Rahul) ಕೂಡ ಫಿಟ್ ಆಗಿದ್ದು ಜಿಂಬಾಬ್ವೆ ವಿರುದ್ಧದ ಸರಣಿಗೆ ತಡವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಬಿಸಿಸಿಐ ಇವರನ್ನು ನಾಯಕನಾಗಿ ಹೆಸರು ಘೋಷಣೆ ಮಾಡಿದೆ.

ವಾರಗಳ ಹಿಂದೆ ಬಿಸಿಸಿಐ ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟ ಮಾಡಿತ್ತು. ಕೆಎಲ್ ರಾಹುಲ್ ಆಗ ಫಿಟ್ ಆಗಿಲ್ಲದ ಕಾರಣ ಇವರ ಹೆಸರನ್ನು ಕೈಬಿಡಲಾಗಿತ್ತು. ಹೀಗಾಗಿ ಶಿಖರ್ ಧವನ್​ಗೆ ನಾಯಕನ ಪಟ್ಟ ನೀಡಿದ್ದರು. ಅಲ್ಲದೆ ಧವನ್ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಕ್ಲೀನ್​ಸ್ವೀಪ್ ಸಾಧನೆ ಗೈದಿದ್ದ ಭಾರತದ ಬಹುತೇಕ ಆಟಗಾರರೇ ಇಲ್ಲಿಗೂ ಆಯ್ಕೆಯಾಗಿದ್ದರು. ಆದರೀಗ ರಾಹುಲ್ ತಂಡಕ್ಕೆ ಆಗಮನಿಸುತ್ತಿದ್ದಂತೆ ಧವನ್​ರನ್ನು ಏಕಾಏಕಿ ತಂಡದ ನಾಯಕತ್ವದಿಂದ ಕಿತ್ತೆಸೆಯಲಾಗಿದೆ.

ಇದನ್ನೂ ಓದಿ
Image
Dwayne Bravo: ನೂರಲ್ಲ, ಇನ್ನೂರಲ್ಲ ಬರೋಬ್ಬರಿ 600 ವಿಕೆಟ್: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ಬ್ರಾವೋ
Image
Jasprit Bumrah: ಟೀಮ್ ಇಂಡಿಯಾಕ್ಕೆ ಶಾಕ್ ಮೇಲೆ ಶಾಕ್: ಏಷ್ಯಾಕಪ್ ಬಳಿಕ ಟಿ20 ವಿಶ್ವಕಪ್​ಗೆ ಸ್ಟಾರ್ ಪ್ಲೇಯರ್ ಅನುಮಾನ
Image
Azadi Ka Amrit Mahotsav: ಸ್ವಾತಂತ್ರ್ಯ ನಂತರ ಕ್ರಿಕೆಟ್ ಲೋಕದಲ್ಲಿ ಟೀಂ ಇಂಡಿಯಾದ ಸಾಧನೆಗಳಿವು
Image
IND vs ZIM: ಭಾರತ ವಿರುದ್ಧದ ಏಕದಿನ ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ

ಮೊದಲು ನಾಯಕನಾಗಿ ಆಯ್ಕೆಯಾದ ಹಿರಿಯ ಅನುಭವಿ ಆಟಗಾರನನ್ನು ದಿಢೀರ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಸಿಐ ನಡೆಯ ಬಗ್ಗೆ ಬಿಸಿಬಿಸಿ ಚರ್ಚೆಗಳು ನಡೆಯುತ್ತಿದೆ.

ಬಿಸಿಸಿಐ ವೈದ್ಯಕೀಯ ತಂಡದಿಂದ ಫಿಟ್‌ನೆಸ್‌ ಸರ್ಟಿಫಿಕೆಟ್‌ ಪಡೆದ ಕೆ.ಎಲ್‌. ರಾಹುಲ್‌ ಮರಳಿ ಭಾರತ ತಂಡದ ನಾಯಕತ್ವಕ್ಕೆ ಅಣಿಯಾಗಿದ್ದಾರೆ. ಜಿಂಬಾಬ್ವೆ ಎದುರಿನ ಸರಣಿ ವೇಳೆ ಭಾರತ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ಶಿಖರ್‌ ಧವನ್‌ ಅವರನ್ನು ಉಪ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.

ಐಸಿಸಿ ಸೂಪರ್ ಲೀಗ್​ ಭಾಗವಾಗಿ ಭಾರತಜಿಂಬಾಬ್ವೆ ನಡುವೆ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್​ 18, 20 ಹಾಗೂ 22ರಂದು ಪಂದ್ಯಗಳನ್ನು ಆಯೋಜಿಸಲಾಗಿದೆ. ಐಸಿಸಿ ಪುರುಷರ ಕ್ರಿಕೆಟ್​ ವಿಶ್ವಕಪ್​ ಸೂಪರ್ ಲೀಗ್​ನ ಭಾಗವಾಗಿ ಈ ಸರಣಿ ನಡೆಯಲಿದ್ದು, ವಿಶ್ವಕಪ್​​​ಗೆ ನೇರ ಅರ್ಹತೆ ಪಡೆದುಕೊಳ್ಳಲು ಜಿಂಬಾಬ್ವೆಗೆ ಈ ಸರಣಿ ಮಹತ್ವ ಪಡೆದುಕೊಂಡಿದೆ. ಐಸಿಸಿ ಲೀಗ್​​​ ಶ್ರೇಯಾಂಕದಲ್ಲಿ ಜಿಂಬಾಬ್ವೆ ಪ್ರಸ್ತುತ 12ನೇ ಸ್ಥಾನದಲ್ಲಿದೆ.

ಭಾರತ ತಂಡ: ಕೆ ಎಲ್​ ರಾಹುಲ್​​(ನಾಯಕ), ಶಿಖರ್ ಧವನ್​(ಉಪ ನಾಯಕ​), ಋತುರಾಜ್ ಗಾಯಕ್ವಾಡ, ಶುಬ್ಮನ್ ಗಿಲ್​, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್​(ವಿ.ಕೀ), ಸಂಜು ಸ್ಯಾಮನ್ಸ್​, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್​, ಅಕ್ಷರ್ ಪಟೇಲ್, ಆವೇಶ್ ಖಾನ್​, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

Published On - 11:46 am, Fri, 12 August 22

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ