AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ನಿವೃತ್ತಿ ವದಂತಿಗಳಿಗೆ ಬಿಸಿಸಿಐ ಬ್ರೇಕ್!

ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಕುರಿತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಭಾರಿ ಚರ್ಚೆ ಮತ್ತು ವದಂತಿಗಳು ಹರಿದಾಡುತ್ತಿದ್ದವು. ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯದ ಬಳಿಕ ರೋಹಿತ್ ಶರ್ಮಾ ಅವರು ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದ್ದವು. ಆದರೆ, ಈ ಎಲ್ಲಾ ಊಹಾಪೋಹಗಳಿಗೆ ಬಿಸಿಸಿಐ ಈಗ ಅಧಿಕೃತವಾಗಿ ತೆರೆ ಎಳೆದಿದೆ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗಳಿಗೆ ಬಿಸಿಸಿಐ ಬ್ರೇಕ್!
Rohit SharmaImage Credit source: GettyImages
ಝಾಹಿರ್ ಯೂಸುಫ್
|

Updated on: Jul 18, 2026 | 7:38 AM

Share

ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯಲಿರುವ ಮೂರನೇ ಏಕದಿನ (ODI) ಪಂದ್ಯವೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಎಲ್ಲಾ ವದಂತಿಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತವಾಗಿ ತಳ್ಳಿಹಾಕಿದೆ. ಮಂಡಳಿಯ ಕಾರ್ಯದರ್ಶಿಯಾದ ದೇವಜಿತ್ ಸೈಕಿಯಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರೋಹಿತ್ ಶರ್ಮಾ ಅವರ ನಿವೃತ್ತಿಯ ಕುರಿತು ಯಾವುದೇ ರೀತಿಯ ಚರ್ಚೆಗಳು ನಡೆದಿಲ್ಲ ಮತ್ತು ಅವರು ತಂಡದ ಪ್ರಮುಖ ಭಾಗವಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಲಾರ್ಡ್ಸ್ ಕೊನೆಯ ಪಂದ್ಯವಲ್ಲ!

ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯವು 39 ವರ್ಷದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ವಿದಾಯದ ಪಂದ್ಯವಲ್ಲ ಎಂಬುದನ್ನು ಮಂಡಳಿ ಖಚಿತಪಡಿಸಿದೆ.

ಈ ಬಗ್ಗೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, “ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ವದಂತಿಗಳು ಹರಿದಾಡುತ್ತಿವೆ. ಆದರೆ ಭಾನುವಾರ ಲಾರ್ಡ್ಸ್‌ನಲ್ಲಿ ರೋಹಿತ್ ತಮ್ಮ ಕೊನೆಯ ಪಂದ್ಯವನ್ನು ಆಡಲಿದ್ದಾರೆ ಎಂಬ ಯಾವುದೇ ಚರ್ಚೆ ನಡೆದಿಲ್ಲ ಎಂದು ನಾನು ದೃಢವಾಗಿ ಹೇಳಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಬಿಸಿಸಿಐ ಬೆಂಬಲ:

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಶರ್ಮಾ ಅವರನ್ನು ತಂಡದಿಂದ ಹಂತಹಂತವಾಗಿ ಹೊರಗಿಡಲು ಯೋಚಿಸುತ್ತಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಬಿಸಿಸಿಐ ಈ ಸ್ಪಷ್ಟನೆ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದೆ.

ರೋಹಿತ್ ಶರ್ಮಾ ಅವರು 2027 ರ ಏಕದಿನ ವಿಶ್ವಕಪ್‌ವರೆಗೂ ಆಡುವ ಇಚ್ಛೆಯನ್ನು ಹೊಂದಿದ್ದಾರೆ. ಆದರೆ ಅವರ ಫಾರ್ಮ್ ಮತ್ತು ದೈಹಿಕ ಫಿಟ್‌ನೆಸ್ ಆಧರಿಸಿ ಆಯ್ಕೆ ಮಂಡಳಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ ಬಿಸಿಸಿಐ ಕಾರ್ಯದರ್ಶಿ ತಿಳಿಸಿದ್ದಾರೆ.

ವದಂತಿಗಳು ಹರಡಲು ಕಾರಣವೇನು?

ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿಪಕ್ಷೀಯ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ರೋಹಿತ್ ಕ್ರಮವಾಗಿ 11 ಮತ್ತು 26 ರನ್ ಗಳಿಸಿ ಮಂಕಾಗಿದ್ದರು. ಇದೇ ಸಮಯದಲ್ಲಿ, 2027ರ ವಿಶ್ವಕಪ್ ದೃಷ್ಟಿಯಿಂದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರಿಗೆ ಆರಂಭಿಕನಾಗಿ ದೀರ್ಘಾವಧಿಯ ಅವಕಾಶ ನೀಡಲು ಮಂಡಳಿ ಚಿಂತಿಸುತ್ತಿದೆ ಎಂಬ ಮಾಧ್ಯಮ ವರದಿಗಳು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದವು.

ರೋಹಿತ್ ಶರ್ಮಾ ಈಗಾಗಲೇ 2024 ರ ಟಿ20 ವಿಶ್ವಕಪ್ ಗೆಲುವಿನ ನಂತರ ಟಿ20 ಮಾದರಿಗೆ ಹಾಗೂ ಮೇ 2025 ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಇತ್ತ ಕೆಲ ಪಂದ್ಯಗಳಲ್ಲಿ ಕಳಪೆ ಫಾರ್ಮ್​ ಪ್ರದರ್ಶಿಸಿರುವ ಕಾರಣ ಅವರನ್ನು ತಂಡದಿಂದ ಕೈಬಿಡಲಿದ್ದಾರೆ ಎಂಬ ವದಂತಿ ಹರಡಲಾರಂಭಿಸಿದೆ.,

ಈ ಬಗ್ಗೆ ಮಾತನಾಡಿದ ಭಾರತದ ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್, ರೋಹಿತ್ ಶರ್ಮಾ ಲಾರ್ಡ್ಸ್‌ನಲ್ಲಿ ಅವರು ಭರ್ಜರಿ ಕಂಬ್ಯಾಕ್ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಲಾರ್ಡ್ಸ್​ ಪಂದ್ಯದೊಂದಿಗೆ ಹಿಟ್​ಮ್ಯಾನ್ ನಿವೃತ್ತಿಯಾಗಲಿದ್ದಾರೆ ಎಂಬ ವದಂತಿಯನ್ನು ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ವೈಭವ್ ವಿಷಯದಲ್ಲಿ ಎಡವಿತೇ ಟೀಮ್ ಇಂಡಿಯಾ? ದಿನೇಶ್ ಕಾರ್ತಿಕ್ ಕಿಡಿ!

ಒಟ್ಟಾರೆಯಾಗಿ ಹೇಳುವುದಾದರೆ ರೋಹಿತ್ ಶರ್ಮಾ ಅವರ ನಿವೃತ್ತಿಯ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಬಿಸಿಸಿಐ  ಅಧಿಕೃತ ಸ್ಪಷ್ಟನೆ ನೀಡುವ ಮೂಲಕ ಸಂಪೂರ್ಣ ಬ್ರೇಕ್ ಹಾಕಿದೆ. ಸದ್ಯಕ್ಕೆ ಲಾರ್ಡ್ಸ್ ಏಕದಿನ ಪಂದ್ಯವೇ ಅವರ ಕೊನೆಯ ಅಂತರರಾಷ್ಟ್ರೀಯ ಪಂದ್ಯವಲ್ಲ ಎಂಬುದು ಸಾಬೀತಾಗಿದ್ದು, ‘ಹಿಟ್‌ಮ್ಯಾನ್’ ಅಭಿಮಾನಿಗಳಿಗೆ ಭಾರಿ ನೆಮ್ಮದಿ ತಂದಿದೆ.

Follow Us
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?