AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI : ಅ.18 ರಂದು ಬಿಸಿಸಿಐ ಚುನಾವಣೆ; ಜೈ ಶಾಗೆ ಅಧ್ಯಕ್ಷಗಿರಿ ಖಚಿತ..! ಐಸಿಸಿಯಲ್ಲಿ ಗಂಗೂಲಿ ದಾದಾಗಿರಿ?

BCCI : ಬಿಸಿಸಿಐ ಮುಂದಿನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 4 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 18 ರಂದು ಮತದಾನ ನಡೆಯಲಿದೆ.

BCCI : ಅ.18 ರಂದು ಬಿಸಿಸಿಐ ಚುನಾವಣೆ; ಜೈ ಶಾಗೆ ಅಧ್ಯಕ್ಷಗಿರಿ ಖಚಿತ..! ಐಸಿಸಿಯಲ್ಲಿ ಗಂಗೂಲಿ ದಾದಾಗಿರಿ?
ಜೈ ಶಾ, ಗಂಗೂಲಿ
TV9 Web
| Edited By: |

Updated on: Sep 26, 2022 | 10:44 PM

Share

ಬಿಸಿಸಿಐ (BCCI) ಮುಂದಿನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 4 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 18 ರಂದು ಮತದಾನ ನಡೆಯಲಿದೆ. ಅಲ್ಲದೆ ಅದೇ ದಿನ ಮತ ಎಣಿಕೆ ನಡೆಯಲಿದೆ. ಆದರೆ ಬಿಸಿಸಿಐನ ಮುಂದಿನ ಅಧ್ಯಕ್ಷರು ಯಾರು ಎಂಬ ಬಗ್ಗೆ ಈಗಾಗಲೇ ಸ್ಪಷ್ಟತೆ ಸಿಕ್ಕಿದೆ. ಬಿಸಿಸಿಐ ಕಾರ್ಯದರ್ಶಿಯಾಗಿರುವ ಅಮಿತ್ ಶಾ ಪುತ್ರ ಜೈ ಶಾ (Jai Shah) ಮುಂದಿನ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಈಗಾಗಲೇ 22 ರಾಜ್ಯ ಕ್ರಿಕೆಟ್ ಸಂಸ್ಥೆಗಳು ಜೈ ಶಾಗೆ ಬೆಂಬಲ ಘೋಷಿಸಿವೆ. ಇದರೊಂದಿಗೆ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ಜೈ ಶಾ ವಹಿಸಿಕೊಳ್ಳುವುದು ಖಚಿತವಾಗಿದೆ.

ಮತ್ತೊಂದೆಡೆ, ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿಗೆ ಕಳುಹಿಸಲಾಗುವುದು ಎಂದು ವರದಿಯಾಗಿದೆ. ಸೌರವ್ ಗಂಗೂಲಿ ಅವರನ್ನು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳುಹಿಸುವ ಮೂಲಕ ಬಿಸಿಸಿಐ ಅಧ್ಯಕ್ಷರಾಗಿ ಜೈ ಶಾ ಆಯ್ಕೆಗೆ ವೇದಿಕೆ ಸಿದ್ಧವಾಗುತ್ತಿದೆಯಂತೆ. ಇತ್ತೀಚೆಗೆ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜೀನಾಮೆ ನೀಡಿದ್ದು, ಜಯ್ ಶಾ ಮುಂದಿನ ಅಧ್ಯಕ್ಷರಾಗುತ್ತಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಆದರೆ ಬಿಸಿಸಿಐ ಅಧಿಕೃತವಾಗಿ ಈ ಮಾಹಿತಿಯನ್ನು ನಿರಾಕರಿಸಿತ್ತು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಬಿಸಿಸಿಐ ಆಡಳಿತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

ಸೌರವ್ ಗಂಗೂಲಿ ಇನ್ನು ಎರಡು ತಿಂಗಳಲ್ಲಿ ಅಂದರೆ ನವೆಂಬರ್‌ನಲ್ಲಿ ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹಾಲಿ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲಿ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉನ್ನತ ಹುದ್ದೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೌರವ್ ಗಂಗೂಲಿ ಉಮೇದುವಾರಿಕೆಗೆ ಬಿಸಿಸಿಐ ಬೆಂಬಲ ನೀಡುತ್ತಿದೆ ಎಂದು ವರದಿಯಾಗಿದೆ. ಬಿಸಿಸಿಐ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನವನ್ನು ಹಾಲಿ ಬಿಸಿಸಿಐ ಕಾರ್ಯದರ್ಶಿ ಜೈಶಾ ಬದಲಿಸುವ ಸಾಧ್ಯತೆ ಇದೆ.

ಹಾಲಿ ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ಕಾರ್ಯದರ್ಶಿಯಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಪ್ರಸ್ತುತ 22 ರಾಜ್ಯ ಸಂಘಗಳು ಜೈ ಶಾಗೆ ಬೆಂಬಲ ನೀಡುತ್ತಿವೆ. ಮಂಡಳಿಯ ಸಂವಿಧಾನದಲ್ಲಿನ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದ ನಂತರ ಅಕ್ಟೋಬರ್ 18 ರಂದು ಬಿಸಿಸಿಐ ಚುನಾವಣೆ ನಡೆಯಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲೂ ಜಯ್ ಶಾ ಮಾಡಿದ ತಂತ್ರಗಾರಿಕೆಯಿಂದ ಐಪಿಎಲ್ ಅಷ್ಟೂ ಯಶಸ್ವಿಗೊಳ್ಳಲು ಕಾರಣವಾಯಿತು ಎಂಬುದು ಎಲ್ಲಾ ರಾಜ್ಯ ಕ್ರಿಕೆಟ್​ ಮಂಡಳಿಗಳ ವಾದವಾಗಿದ್ದು, ಹೀಗಾಗಿ ಎಲ್ಲಾ ಮಂಡಳಿಗಳು ಜೈ ಶಾ ಅವರನ್ನು ಅಧ್ಯಕ್ಷ ಹುದ್ದೆಯಲ್ಲಿ ಕೂರಿಸಲು ಮುಂದಾಗಿವೆ.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!