AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI : ಅ.18 ರಂದು ಬಿಸಿಸಿಐ ಚುನಾವಣೆ; ಜೈ ಶಾಗೆ ಅಧ್ಯಕ್ಷಗಿರಿ ಖಚಿತ..! ಐಸಿಸಿಯಲ್ಲಿ ಗಂಗೂಲಿ ದಾದಾಗಿರಿ?

BCCI : ಬಿಸಿಸಿಐ ಮುಂದಿನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 4 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 18 ರಂದು ಮತದಾನ ನಡೆಯಲಿದೆ.

BCCI : ಅ.18 ರಂದು ಬಿಸಿಸಿಐ ಚುನಾವಣೆ; ಜೈ ಶಾಗೆ ಅಧ್ಯಕ್ಷಗಿರಿ ಖಚಿತ..! ಐಸಿಸಿಯಲ್ಲಿ ಗಂಗೂಲಿ ದಾದಾಗಿರಿ?
ಜೈ ಶಾ, ಗಂಗೂಲಿ
TV9 Web
| Updated By: ಪೃಥ್ವಿಶಂಕರ|

Updated on: Sep 26, 2022 | 10:44 PM

Share

ಬಿಸಿಸಿಐ (BCCI) ಮುಂದಿನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 4 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 18 ರಂದು ಮತದಾನ ನಡೆಯಲಿದೆ. ಅಲ್ಲದೆ ಅದೇ ದಿನ ಮತ ಎಣಿಕೆ ನಡೆಯಲಿದೆ. ಆದರೆ ಬಿಸಿಸಿಐನ ಮುಂದಿನ ಅಧ್ಯಕ್ಷರು ಯಾರು ಎಂಬ ಬಗ್ಗೆ ಈಗಾಗಲೇ ಸ್ಪಷ್ಟತೆ ಸಿಕ್ಕಿದೆ. ಬಿಸಿಸಿಐ ಕಾರ್ಯದರ್ಶಿಯಾಗಿರುವ ಅಮಿತ್ ಶಾ ಪುತ್ರ ಜೈ ಶಾ (Jai Shah) ಮುಂದಿನ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಈಗಾಗಲೇ 22 ರಾಜ್ಯ ಕ್ರಿಕೆಟ್ ಸಂಸ್ಥೆಗಳು ಜೈ ಶಾಗೆ ಬೆಂಬಲ ಘೋಷಿಸಿವೆ. ಇದರೊಂದಿಗೆ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ಜೈ ಶಾ ವಹಿಸಿಕೊಳ್ಳುವುದು ಖಚಿತವಾಗಿದೆ.

ಮತ್ತೊಂದೆಡೆ, ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿಗೆ ಕಳುಹಿಸಲಾಗುವುದು ಎಂದು ವರದಿಯಾಗಿದೆ. ಸೌರವ್ ಗಂಗೂಲಿ ಅವರನ್ನು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳುಹಿಸುವ ಮೂಲಕ ಬಿಸಿಸಿಐ ಅಧ್ಯಕ್ಷರಾಗಿ ಜೈ ಶಾ ಆಯ್ಕೆಗೆ ವೇದಿಕೆ ಸಿದ್ಧವಾಗುತ್ತಿದೆಯಂತೆ. ಇತ್ತೀಚೆಗೆ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜೀನಾಮೆ ನೀಡಿದ್ದು, ಜಯ್ ಶಾ ಮುಂದಿನ ಅಧ್ಯಕ್ಷರಾಗುತ್ತಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಆದರೆ ಬಿಸಿಸಿಐ ಅಧಿಕೃತವಾಗಿ ಈ ಮಾಹಿತಿಯನ್ನು ನಿರಾಕರಿಸಿತ್ತು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಬಿಸಿಸಿಐ ಆಡಳಿತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

ಸೌರವ್ ಗಂಗೂಲಿ ಇನ್ನು ಎರಡು ತಿಂಗಳಲ್ಲಿ ಅಂದರೆ ನವೆಂಬರ್‌ನಲ್ಲಿ ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹಾಲಿ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲಿ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉನ್ನತ ಹುದ್ದೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೌರವ್ ಗಂಗೂಲಿ ಉಮೇದುವಾರಿಕೆಗೆ ಬಿಸಿಸಿಐ ಬೆಂಬಲ ನೀಡುತ್ತಿದೆ ಎಂದು ವರದಿಯಾಗಿದೆ. ಬಿಸಿಸಿಐ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನವನ್ನು ಹಾಲಿ ಬಿಸಿಸಿಐ ಕಾರ್ಯದರ್ಶಿ ಜೈಶಾ ಬದಲಿಸುವ ಸಾಧ್ಯತೆ ಇದೆ.

ಹಾಲಿ ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ಕಾರ್ಯದರ್ಶಿಯಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಪ್ರಸ್ತುತ 22 ರಾಜ್ಯ ಸಂಘಗಳು ಜೈ ಶಾಗೆ ಬೆಂಬಲ ನೀಡುತ್ತಿವೆ. ಮಂಡಳಿಯ ಸಂವಿಧಾನದಲ್ಲಿನ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದ ನಂತರ ಅಕ್ಟೋಬರ್ 18 ರಂದು ಬಿಸಿಸಿಐ ಚುನಾವಣೆ ನಡೆಯಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲೂ ಜಯ್ ಶಾ ಮಾಡಿದ ತಂತ್ರಗಾರಿಕೆಯಿಂದ ಐಪಿಎಲ್ ಅಷ್ಟೂ ಯಶಸ್ವಿಗೊಳ್ಳಲು ಕಾರಣವಾಯಿತು ಎಂಬುದು ಎಲ್ಲಾ ರಾಜ್ಯ ಕ್ರಿಕೆಟ್​ ಮಂಡಳಿಗಳ ವಾದವಾಗಿದ್ದು, ಹೀಗಾಗಿ ಎಲ್ಲಾ ಮಂಡಳಿಗಳು ಜೈ ಶಾ ಅವರನ್ನು ಅಧ್ಯಕ್ಷ ಹುದ್ದೆಯಲ್ಲಿ ಕೂರಿಸಲು ಮುಂದಾಗಿವೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ