AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Awards: ಇಬ್ಬರು ಕನ್ನಡಿಗರು ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

BCCI Awards: ಬಿಸಿಸಿಐ ತನ್ನ ವಾರ್ಷಿಕ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಭಾರತದ ಮೂವರು ಕ್ರಿಕೆಟ್ ದಂತಕಥೆಗಳಾದ ರೋಜರ್ ಬಿನ್ನಿ, ರಾಹುಲ್ ದ್ರಾವಿಡ್ ಮತ್ತು ಮಿಥಾಲಿ ರಾಜ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಕನ್ನಡಿಗರಾದ ಬಿನ್ನಿ ಮತ್ತು ದ್ರಾವಿಡ್ ಅವರಿಗೆ ಕರ್ನಲ್ ಸಿ.ಕೆ. ನಾಯುಡು ಪ್ರಶಸ್ತಿ, ಹಾಗೂ ಮಿಥಾಲಿ ರಾಜ್ ಅವರಿಗೆ ಮಹಿಳಾ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗಿದ್ದು, ತಲಾ 25 ಲಕ್ಷ ರೂ. ನಗದು ಬಹುಮಾನವೂ ಸೇರಿದೆ.

BCCI Awards: ಇಬ್ಬರು ಕನ್ನಡಿಗರು ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ
Bcci
ಪೃಥ್ವಿಶಂಕರ
|

Updated on: Mar 14, 2026 | 3:38 PM

Share

ಭಾರತ ಕ್ರಿಕೆಟ್​ನ ಮೂವರು ದಿಗ್ಗಜ ಆಟಗಾರರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ (BCCI Lifetime Achievement Award) ಘೋಷಿಸಿದೆ. ಈ ಪ್ರಶಸ್ತಿಗೆ ಭಾಜನರಾದವರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದರೆ, ಮತ್ತೊಬ್ಬರು ಭಾರತ ಮಹಿಳಾ ತಂಡದ ಮಾಜಿ ನಾಯಕಿಯಾಗಿದ್ದಾರೆ. ವಾಸ್ತವವಾಗಿ ಬಿಸಿಸಿಐ ಮಾರ್ಚ್ 15 ರಂದು ನವದೆಹಲಿಯಲ್ಲಿ ನಮನ್ ವಾರ್ಷಿಕ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಿದ್ದು, ಈ ಸಮಾರಂಭದಲ್ಲಿ 2024-25 ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಿದೆ. ಹೆಚ್ಚುವರಿಯಾಗಿ, ಬಿಸಿಸಿಐ ಮೂವರು ಭಾರತೀಯ ಕ್ರಿಕೆಟ್ ದಂತಕಥೆಗಳಿಗೆ ಬಿಸಿಸಿಐನ ಅತ್ಯುನ್ನತ ಗೌರವವಾದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ.

ಈ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬಿಸಿಸಿಐ, 1983 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಕನ್ನಡಿಗ ರೋಜರ್ ಬಿನ್ನಿ ಹಾಗೂ ಮತ್ತೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿದೆ. ಇವರಿಬ್ಬರ ಜೊತೆಗೆ ಮಹಿಳಾ ಕ್ರಿಕೆಟ್ ದಂತಕಥೆ ಮಿಥಾಲಿ ರಾಜ್ ಅವರಿಗೆ ಬಿಸಿಸಿಐ ಮಹಿಳಾ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಿದೆ. ಬಿಸಿಸಿಐ ಈ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನೂ ನೀಡಲಿದ್ದು, ವರದಿಗಳ ಪ್ರಕಾರ ಈ ಮೂವರು ಪ್ರಶಸ್ತಿ ವಿಜೇತರಿಗೆ ತಲಾ 25 ಲಕ್ಷ ರೂ. ನಗದು ಬಹುಮಾನ ನೀಡಲಿದೆ.

ಭಾರತಕ್ಕೆ ಮೊದಲ ವಿಶ್ವಕಪ್

ಮೇಲೆ ಹೇಳಿದಂತೆ ರೋಜರ್ ಬಿನ್ನಿ 1983 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಭಾರತದ ಮೊದಲ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿನ್ನಿ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿದ್ದರು. ಹಾಗೆಯೇ 1985 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಕ್ರಿಕೆಟ್‌ನಲ್ಲಿಯೂ ಬಿನ್ನಿ ತಂಡದ ಭಾಗವಾಗಿದ್ದರು. ವೃತ್ತಿಜೀವನಕ್ಕೆ ವಿದಾಯ ಹೇಳಿದ ನಂತರ ಬಿನ್ನಿ ತರಬೇತಿ, ಆಯ್ಕೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2000 ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ತಂಡಕ್ಕೆ ಅವರು ತರಬೇತುದಾರರಾಗಿದ್ದರು. ಹಾಗೆಯೇ ಅವರು 2012 ರಿಂದ 2016 ರವರೆಗೆ ರಾಷ್ಟ್ರೀಯ ಆಯ್ಕೆದಾರರಾಗಿಯೂ ಸೇವೆ ಸಲ್ಲಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ, ಅವರು 2022 ರಿಂದ 2025 ರವರೆಗೆ ಬಿಸಿಸಿಐನ 36 ನೇ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ರಾಹುಲ್ ದ್ರಾವಿಡ್ ಕೊಡುಗೆ ಅಪಾರ

‘ದಿ ವಾಲ್’ ಎಂದೇ ಖ್ಯಾತಿ ಪಡೆದ ರಾಹುಲ್ ದ್ರಾವಿಡ್, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24,000 ಕ್ಕೂ ಹೆಚ್ಚು ರನ್ ಗಳಿಸಿದ್ದು, ಒಂದು ದಶಕಕ್ಕೂ ಹೆಚ್ಚು ಕಾಲ ಭಾರತದ ಬ್ಯಾಟಿಂಗ್‌ನ ಬೆನ್ನೆಲುಬಾಗಿದ್ದವರು. ಹಾಗೆಯೇ ನಾಯಕನಾಗಿ ಭಾರತವನ್ನು ಅನೇಕ ಸ್ಮರಣೀಯ ವಿಜಯಗಳಿಗೆ ಕರೆದೊಯ್ದವರು. ನಿವೃತ್ತಿಯ ನಂತರ, ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟ್ ಮುಖ್ಯಸ್ಥರಾಗಿ ಯುವ ಆಟಗಾರರಿಗೆ ತರಬೇತಿ ನೀಡಿದರು. 2018 ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ತಂಡಕ್ಕೂ ಅವರು ತರಬೇತಿ ನೀಡಿದರು. ಭಾರತೀಯ ಪುರುಷರ ತಂಡದ ಮುಖ್ಯ ತರಬೇತುದಾರರಾಗಿ, ಅವರು 2024 ರ ಟಿ20 ವಿಶ್ವಕಪ್‌ನಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ

ಮಹಿಳಾ ಕ್ರಿಕೆಟ್‌ನ ಐಕಾನ್

ಮಿಥಾಲಿ ರಾಜ್ ಅವರನ್ನು ಮಹಿಳಾ ಕ್ರಿಕೆಟ್‌ನ ಐಕಾನ್ ಎಂದು ಪರಿಗಣಿಸಲಾಗಿದೆ. 20 ವರ್ಷಗಳ ವೃತ್ತಿಜೀವನದಲ್ಲಿ ಏಕದಿನದಲ್ಲಿ 7805 ರನ್ ಕಲೆಹಾಕಿರುವ ಮಿಥಾಲಿ ಈ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿರುವ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ನಾಯಕಿಯಾಗಿ, ಅವರು ಭಾರತವನ್ನು ಎರಡು ವಿಶ್ವಕಪ್ ಫೈನಲ್‌ಗಳಿಗೆ ಮುನ್ನಡೆಸಿದರಾದರೂ ತಂಡವನ್ನು ಚಾಂಪಿಯನ್ ಮಾಡಲು ಸಾಧ್ಯವಾಗಿರಲಿಲ್ಲ. ಆದಾಗ್ಯೂ ಬಲಿಷ್ಠ ಭಾರತ ಮಹಿಳಾ ತಂಡವನ್ನು ನಿರ್ಮಿಸುವಲ್ಲಿ ಮಿಥಾಲಿ ಪಾತ್ರ ಅಪಾರವಾಗಿದೆ. ಹೀಗಾಗಿ ಮಹಿಳಾ ಕ್ರಿಕೆಟ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದ ಮಿಥಾಲಿಗೆ ಅರ್ಹ ಗೌರವ ಧಕ್ಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ