AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ಎನ್​ಸಿಎ ಹುದ್ದೆಗೆ ಅರ್ಜಿ ಆಹ್ವಾನ: ಟೀಮ್ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್?

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಎಲ್ಲಾ ರೀತಿಯ ಕ್ರಿಕೆಟ್ ಕೋಚಿಂಗ್ ಕಾರ್ಯಕ್ರಮಗಳನ್ನು ನಡೆಸುವ ಜವಾಬ್ದಾರಿಯನ್ನು NCA ಮುಖ್ಯಸ್ಥರು ಹೊಂದಿರುತ್ತಾರೆ.

Rahul Dravid: ಎನ್​ಸಿಎ ಹುದ್ದೆಗೆ ಅರ್ಜಿ ಆಹ್ವಾನ: ಟೀಮ್ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್?
ರಾಹುಲ್ ದ್ರಾವಿಡ್​
TV9 Web
| Updated By: ಝಾಹಿರ್ ಯೂಸುಫ್|

Updated on: Aug 10, 2021 | 6:44 PM

Share

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥನ ಹುದ್ದೆಗೆ ಭಾರತೀಯ ಕ್ರಿಕೆಟ್ ಮಂಡಳಿ (BCCI) ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಹುದ್ದೆಯಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ (Rahul Dravid) ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರ ಕಾರ್ಯಾವಧಿ ಪೂರ್ಣಗೊಳ್ಳಲಿದ್ದು, ಹೀಗಾಗಿ ಬಿಸಿಸಿಐ (BCCI) ಅರ್ಜಿಗಳನ್ನು ಆಹ್ವಾನಿಸಿದೆ. ಇದರ ಬೆನ್ನಲ್ಲೇ ಈ ಹುದ್ದೆಯಲ್ಲಿ ದ್ರಾವಿಡ್ ಅವರು ಮುಂದುವರೆಯಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ (Team India) ಕೋಚ್ ರವಿ ಶಾಸ್ತ್ರಿ ಕಾರ್ಯಾವಧಿ ಪೂರ್ಣಗೊಳ್ಳಲಿದೆ. ಆನಂತರದ ಭಾರತದ ತಂಡದ ಕೋಚ್ ಆಗಿ ಯಾರು ಆಯ್ಕೆ ಆಗಲಿದ್ದಾರೆ ಎಂಬುದು ಕೂಡ ಕುತೂಹಲವನ್ನು ಹುಟ್ಟುಹಾಕಿದೆ.

ಏಕೆಂದರೆ ಇತ್ತೀಚಿಗೆ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಕೋಚ್ ಜವಾಬ್ದಾರಿಯನ್ನು ರಾಹುಲ್ ದ್ರಾವಿಡ್ ವಹಿಸಿಕೊಂಡಿದ್ದರು. ಇದರ ಬೆನ್ನಲ್ಲೇ ದ್ರಾವಿಡ್ ಭಾರತ ತಂಡದ ಮುಂದಿನ ಕೋಚ್ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ಈಗೇನು ನಾನು ಹೇಳುವುದಿಲ್ಲ. ಲಂಕಾ ಸರಣಿ ವೇಳೆ ನೀಡಲಾದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ತೃಪ್ತಿ ಇದೆ ಎಂದು ದ್ರಾವಿಡ್ ತಿಳಿಸಿದ್ದರು.

ಇದೀಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥನ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದರ ಬೆನ್ನಲ್ಲೇ ದ್ರಾವಿಡ್ ಟೀಮ್ ಇಂಡಿಯಾಗೆ ಕೋಚ್ ಆಗಲಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ ಮೊದಲು ದ್ರಾವಿಡ್ ಅಂಡರ್ -19 ಮತ್ತು ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಭಾರತೀಯ ತಂಡದಲ್ಲಿ ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಅನೇಕ ಆಟಗಾರರಿದ್ದಾರೆ. ಹೀಗಾಗಿ ಅವರನ್ನೇ ಟೀಮ್ ಇಂಡಿಯಾ ಕೋಚ್ ಆಗಿಸುವ ಸಾಧ್ಯತೆಯಿದೆ.

ಸದ್ಯ ದ್ರಾವಿಡ್ ಅವರ ಎನ್​ಸಿಎ ಮುಖ್ಯಸ್ಥ ಹುದ್ದೆಯ ಎರಡು ವರ್ಷದ ಒಪ್ಪಂದ ಮುಗಿದಿದೆ. ಇನ್ನು ಮತ್ತೆರಡು ವರ್ಷಗಳ ಅವಧಿ ವಿಸ್ತರಣೆಗಾಗಿ ಮರು ಅರ್ಜಿ ಸಲ್ಲಿಸಲು ದ್ರಾವಿಡ್ ಅವರಿಗೆ ಆಗಸ್ಟ್ 15 (11.59 PM ವರೆಗೆ) ಕೊನೆಯ ದಿನಾಂಕ. ಹೀಗಾಗಿ ಆಗಸ್ಟ್ 15 ರ ಬಳಿಕ ದ್ರಾವಿಡ್ ಅವರ ಮುಂದಿನ ನಡೆಯೇನು ಎಂಬುದು ತಿಳಿಯಲಿದೆ.

“ರಾಹುಲ್ ದ್ರಾವಿಡ್ ಈ ಹುದ್ದೆಗೆ ಮರು ಅರ್ಜಿ ಸಲ್ಲಿಸಬಹುದು. ಆದರೆ ಟಿ 20 ವಿಶ್ವಕಪ್​ ನಂತರ ರವಿಶಾಸ್ತ್ರಿ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಆ ಬಳಿಕ ರಾಹುಲ್ ಅವರನ್ನು ಮುಖ್ಯ ಕೋಚ್ ಸ್ಥಾನಕ್ಕೆ ಏರಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎನ್‌ಸಿಎ ಮುಖ್ಯಸ್ಥರ ಕಾರ್ಯವೇನು? ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಎಲ್ಲಾ ರೀತಿಯ ಕ್ರಿಕೆಟ್ ಕೋಚಿಂಗ್ ಕಾರ್ಯಕ್ರಮಗಳನ್ನು ನಡೆಸುವ ಜವಾಬ್ದಾರಿಯನ್ನು NCA ಮುಖ್ಯಸ್ಥರು ಹೊಂದಿರುತ್ತಾರೆ. ಇದರ ಹೊರತಾಗಿ ಅಕಾಡೆಮಿಯ ತರಬೇತಿಯಲ್ಲಿ ಭಾಗವಹಿಸುವ ಎಲ್ಲ ಕ್ರಿಕೆಟಿಗರ ತಯಾರಿ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಗಾಗಿ ಮಾರ್ಗದರ್ಶನ ನೀಡುತ್ತಾರೆ. NCA ಮುಖ್ಯಸ್ಥರು ರಾಷ್ಟ್ರೀಯ ಮಹಿಳಾ ಮತ್ತು ಪುರುಷರ ತಂಡಗಳ ಮುಖ್ಯ ತರಬೇತುದಾರರು ಮತ್ತು ಇತರ ಕ್ರಿಕೆಟ್ ತರಬೇತುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ. ಇದು ಭಾರತ ಎ, ಅಂಡರ್ 19, ಅಂಡರ್ 23, ಭಾರತ ಮಹಿಳಾ ತಂಡವನ್ನು ಒಳಗೊಂಡಿದೆ. ತಂಡಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಎನ್​ಸಿಎ ಮುಖ್ಯಸ್ಥರು ಹೊಂದಿರುತ್ತಾರೆ. ಹಾಗೆಯೇ ಟೀಮ್ ಇಂಡಿಯಾ ಪುರುಷರ ಮತ್ತು ಮಹಿಳಾ ಮುಖ್ಯ ತರಬೇತುದಾರರಿಗೆ ಆಟಗಾರರ ಕುರಿತಾದ ಅಗತ್ಯ ಮಾಹಿತಿಯನ್ನು ಒದಗಿಸುತ್ತಾರೆ.

ಇದನ್ನೂ ಓದಿ: IPL 2021: ಐಪಿಎಲ್​ಗಾಗಿ 2 ತಂಡ ಕಟ್ಟಿದ್ದ ನ್ಯೂಜಿಲೆಂಡ್..!

ಇದನ್ನೂ ಓದಿ: IPL 2021: ಐಪಿಎಲ್​ನ ಹೊಸ ನಿಯಮದಿಂದ ಯಾರಿಗೆ ಅನುಕೂಲ?

(BCCI invites applications for NCA Head role, Rahul Dravid likely to reapply)

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?