AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

#HarGharTiranga: ಪ್ರಧಾನಿ ಕರೆಗೆ ಓಗೊಟ್ಟು ಟ್ವಿಟರ್​ನಲ್ಲಿ ಬ್ಲ್ಯೂ ಟಿಕ್ ಕಳೆದುಕೊಂಡ ಬಿಸಿಸಿಐ

BCCI: 77ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ಪ್ರಧಾನಿ ಮೋದಿಯವರು #HarGharTiranga (ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ) ಅಭಿಯಾನ ಆರಂಭಿಸಿದ್ದು, ಈ ಅಭಿಯಾನದಡಿ ಪ್ರತಿಯೊಬ್ಬ ಭಾರತೀಯರು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತ್ರಿವರ್ಣ ಧ್ವಜವನ್ನು ಪ್ರೊಫೈಲ್ ಫೋಟೋವನ್ನಾಗಿ ಇರಿಸಲು ಮನವಿ ಮಾಡಿದ್ದರು. ಹಾಗಾಗಿ ಪ್ರಧಾನಿ ಮೋದಿಯವರ ಕರೆಗೆ ಬೆಂಬಲ ಸೂಚಿಸಿದ ಬಿಸಿಸಿಐ ತನ್ನ ಪ್ರೊಫೈಲ್ ಫೋಟೋವನ್ನು ಬದಲಾಯಿಸಿತ್ತು.

#HarGharTiranga: ಪ್ರಧಾನಿ ಕರೆಗೆ ಓಗೊಟ್ಟು ಟ್ವಿಟರ್​ನಲ್ಲಿ ಬ್ಲ್ಯೂ ಟಿಕ್ ಕಳೆದುಕೊಂಡ ಬಿಸಿಸಿಐ
ಬಿಸಿಸಿಐ ಟ್ವಿಟರ್ ಖಾತೆ, ಪ್ರಧಾನಿ ಮೋದಿ.
ಪೃಥ್ವಿಶಂಕರ
|

Updated on:Aug 14, 2023 | 9:10 AM

Share

77ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ದೇಶವಾಸಿಗಳಿಗೆ ಕೊಟ್ಟಿರುವ ಕರೆಗೆ ಓಗೊಟ್ಟ ಬಿಸಿಸಿಐ (BCCI), ಏಷ್ಯಾಕಪ್​ಗೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ತನ್ನ ಅಧಿಕೃತ ಖಾತೆಯಾದ ಟ್ವಿಟರ್​ನಲ್ಲಿ (Twitter) ಬ್ಯ್ಲೂ ಟಿಕ್ (Blue Tick) ನಷ್ಟ ಅನುಭವಿಸಿದೆ. ವಾಸ್ತವವಾಗಿ 77ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ಪ್ರಧಾನಿ ಮೋದಿಯವರು #HarGharTiranga (ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ) ಅಭಿಯಾನ ಆರಂಭಿಸಿದ್ದು, ಈ ಅಭಿಯಾನದಡಿ ಪ್ರತಿಯೊಬ್ಬ ಭಾರತೀಯರು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತ್ರಿವರ್ಣ ಧ್ವಜವನ್ನು ಪ್ರೊಫೈಲ್ ಫೋಟೋವನ್ನಾಗಿ ಇರಿಸಲು ಮನವಿ ಮಾಡಿದ್ದರು. ಹಾಗಾಗಿ ಪ್ರಧಾನಿ ಮೋದಿಯವರ ಕರೆಗೆ ಬೆಂಬಲ ಸೂಚಿಸಿದ ಬಿಸಿಸಿಐ ತನ್ನ ಪ್ರೊಫೈಲ್ ಫೋಟೋವನ್ನು ಬದಲಾಯಿಸಿತ್ತು. ಹೀಗಾಗಿ ಎಕ್ಸ್ (ಟ್ವಿಟರ್) ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಬಿಸಿಸಿಐಗೆ ಈ ಹಿಂದೆ ನೀಡಿದ ಬ್ಲ್ಯೂಟಿಕ್ ಅನ್ನು ಎಕ್ಸ್ (ಟ್ವಿಟರ್) ತೆಗೆದುಹಾಕಿದೆ.

ಹೊಸ ನಿಯಮಗಳ ಪ್ರಕಾರ, ಬ್ಲ್ಯೂಟಿಕ್ ಸೌಲಭ್ಯ ಪಡೆದುಕೊಂಡ ಟ್ವಿಟರ್ ಬಳಕೆದಾರರು ತಮ್ಮ ಪ್ರೊಫೈಲ್ ಫೋಟೋವನ್ನು ಬದಲಾಯಿಸಿದರೆ, ಅವರಿಗೆ ನೀಡಲಾಗಿದ್ದ ಬ್ಲೂ ಟಿಕ್‌ ಅನ್ನು ತೆಗೆದುಹಾಕಲಾಗುತ್ತದೆ. ಈ ಕಾರಣದಿಂದಾಗಿ ಇದೀಗ ತನ್ನ ಪ್ರೊಫೈಲ್ ಫೋಟೋವನ್ನು ತ್ರಿವಣ ಧ್ವಜಕ್ಕೆ ಬದಲಿಸಿರುವ ಬಿಸಿಸಿಐನ ಬ್ಲೂ ಟಿಕ್ ಅನ್ನು ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ. ವಾಸ್ತವವಾಗಿ ಎಕ್ಸ್ (ಟ್ವಿಟರ್) ನೀಡುವ ಈ ಬ್ಲೂ ಟಿಕ್, ಸೋಶಿಯಲ್ ಮೀಡಿಯಾದಲ್ಲಿ ಇದು ಬಳಕೆದಾರರ ಅಧಿಕೃತ ಖಾತೆ ಎಂಬುದನ್ನು ಸೂಚಿಸುತ್ತದೆ. ಇದೀಗ ಬ್ಲೂ ಟಿಕ್ ಕಳೆದುಕೊಂಡಿರುವ ಬಿಸಿಸಿಐಗೆ, ಟ್ವಿಟರ್​ನಲ್ಲಿ ಕೊಂಚ ಹಿನ್ನಡೆಯುಂಟಾಗಿದೆ.

2021-22ರ ಹಣಕಾಸು ವರ್ಷದಲ್ಲಿ ಬಿಸಿಸಿಐ ಕಟ್ಟಿದ ತೆರಿಗೆ ಎಷ್ಟು ಸಾವಿರ ಕೋಟಿ ಗೊತ್ತಾ? ಇಲ್ಲಿದೆ ಕಳೆದ 5 ವರ್ಷಗಳ ಆದಾಯದ ಲೆಕ್ಕ

ಮೂರು ಖಾತೆಗಳ ನೀಲಿ ಟಿಕ್ ಮಾಯ

ಪ್ರಧಾನಿಯವರ ಅಭಿಯಾನದಡಿಯಲ್ಲಿ ಬಿಸಿಸಿಐ, ಪುರುಷ, ಮಹಿಳಾ ಮತ್ತು ದೇಶೀಯ ಕ್ರಿಕೆಟ್‌ನ ಅಧಿಕೃತ ಟ್ವಿಟರ್ ಖಾತೆಯ ಪ್ರೊಫೈಲ್ ಫೋಟೋವನ್ನು ಬದಲಾಯಿಸಿದೆ. ಹೀಗಾಗಿ ಈ ಮೂರು ಖಾತೆಗಳ ನೀಲಿ ಟಿಕ್ ಅನ್ನು ತೆಗೆದುಹಾಕಲಾಗಿದೆ. ಅದಾಗ್ಯೂ ಇನ್ನು ನಾಲ್ಕೈದು ದಿನಗಳಲ್ಲಿ ಈ ಬ್ಲ್ಯೂಟಿಕ್ ಮತ್ತೆ ಬಿಸಿಸಿಐ ಖಾತೆಯಲ್ಲಿ ಕಾಣಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

ಟ್ವಿಟರ್​ ನಿಯಮ ಹೇಳುವುದೇನು?

ಹೊಸ ನೀತಿಯ ಪ್ರಕಾರ, ಬ್ಯ್ಲೂ ಟಿಕ್ ಪಡೆದುಕೊಂಡಿರುವ ಟ್ವಿಟರ್ ಖಾತೆಯ ಬಳಕೆದಾರರು ತಮ್ಮ ಖಾತೆಯಲ್ಲಿ ಸೇರಿಸುವ ಇಮೇಲ್ ವಿಳಾಸ, ಮೊಬೈಲ್ ಸಂಖ್ಯೆ ಅಥವಾ ಪ್ರೊಫೈಲ್ ಹೆಸರು, ಪ್ರೊಫೈಲ್ ಫೋಟೋವನ್ನು ಬದಲಾಯಿಸಿದರೆ ನೀಲಿ ಟಿಕ್ ಅನ್ನು ತೆಗೆದುಹಾಕಲಾಗುತ್ತದೆ. ಅಲ್ಲದೆ, ಅಧಿಕೃತ ಬಳಕೆದಾರರ ಟ್ವಿಟರ್ ಖಾತೆ ಆರು ತಿಂಗಳವರೆಗೆ ಸಕ್ರಿಯವಾಗಿಲ್ಲದಿದ್ದರೆ, ಆ ಖಾತೆಯಿಂದ ನೀಲಿ ಟಿಕ್ ಅನ್ನು ತೆಗೆದುಹಾಕಲಾಗುತ್ತದೆ.

ಈ ಮೊದಲು ಸರ್ಕಾರಗಳು, ಕಂಪನಿಗಳು ಅಥವಾ ಸೆಲೆಬ್ರಿಟಿಗಳು ತಮ್ಮ ಟ್ವಿಟರ್ ಖಾತೆಯಲ್ಲಿ ನೀಲಿ ಟಿಕ್ ಅನ್ನು ಪಡೆಯುತ್ತಿದ್ದರು. ಆದರೆ ಎಲಾನ್ ಮಾಸ್ಕ್ ಟ್ವಿಟರ್ ಅನ್ನು ಖರೀದಿಸಿದ ಬಳಿಕ ಟ್ವಿಟರ್ ಖಾತೆಯಲ್ಲಿ ನೀಲಿ ಟಿಕ್ ಪಡೆಯಬೇಕೆಂದರೆ ಇಂತಿಷ್ಟು ಹಣ ಪಾವತಿಸಬೇಕೆಂಬ ನಿಯಮ ಹೊರಡಿಸಿದರು. ಹಾಗಾಗಿ ಹಣ ಪಾವತಿಸಿ ಯಾರು ಬೇಕಾದರೂ ಈಗ ಬ್ಲೂ ಟಿಕ್ ಪಡೆಯಬಹುದಾಗಿದೆ. ಟ್ವಿಟರ್​ನ ಈ ನಿರ್ಧಾರದ ಬಳಿಕ ಇನ್​​ಸ್ಟಾಗ್ರಾಮ್​ನಲ್ಲಿ ಈ ನಿಯಮವನ್ನು ಅಳವಡಿಸಲಾಗಿದೆ. ಆದರೆ ಫೇಸ್‌ಬುಕ್ ಮಾತ್ರ ಇನ್ನೂ ಕಲಾವಿದರು ಮತ್ತು ಕ್ರೀಡಾಪಟುಗಳಿಗೆ ಉಚಿತವಾಗಿ ನೀಲಿ ಟಿಕ್‌ಗಳನ್ನು ಪಡೆಯಲು ಅನುಮತಿಸುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:07 am, Mon, 14 August 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?