AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 WC squad: ಟಿ20 ವಿಶ್ವಕಪ್ 2021 ರಲ್ಲಿ ಸ್ಥಾನ ಪಡೆದಿದ್ದ 6 ಆಟಗಾರರು ಈ ಬಾರಿ ಮಿಸ್: ಯಾರೆಲ್ಲ..?

BCCI: ಈ ಬಾರಿ ಐಸಿಸಿ ಟಿ20 ವಿಶ್ವಕಪ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಬಿಸಿಸಿಐ (BCCI) ಕಳೆದ ವರ್ಷ ಆಯ್ಕೆ ಮಾಡಿದ ತಂಡದಿಂದ 6 ಆಟಗಾರರು ಕೈಬಿಟ್ಟು ಹೊಸ ಪ್ಲೇಯರ್ಸ್ ಅನ್ನು ಸೇರಿಸಿದೆ.

India T20 WC squad: ಟಿ20 ವಿಶ್ವಕಪ್ 2021 ರಲ್ಲಿ ಸ್ಥಾನ ಪಡೆದಿದ್ದ 6 ಆಟಗಾರರು ಈ ಬಾರಿ ಮಿಸ್: ಯಾರೆಲ್ಲ..?
India Squad T20 World Cup
TV9 Web
| Edited By: |

Updated on:Sep 13, 2022 | 9:06 AM

Share

ಬಹುನಿರೀಕ್ಷಿತ ಟಿ20 ವಿಶ್ವಕಪ್ (ICC T20 World Cup) ಮಹಾ ಟೂರ್ನಿಗೆ ಬಿಸಿಸಿಐ 15 ಸದಸ್ಯರ ಭಾರತ ಕ್ರಿಕೆಟ್ ತಂಡವನ್ನು (Team India) ಪ್ರಕಟ ಮಾಡಿದೆ. ಕಳೆದ ವರ್ಷ ಕೊರೊನಾ ಕಾರಣದಿಂದ ಯುಎಇನಲ್ಲಿ ನಡೆದಿದ್ದ ಟೂರ್ನಿ ಈ ಬಾರಿ ಕಾಂಗರೂಗಳ ನಾಡಿನಲ್ಲಿ ಆಯೋಜಿಸಲಾಗಿದೆ. ಆಸ್ಟ್ರೇಲಿಯಾ ವಾತವರಣಕ್ಕೆ ತಕ್ಕಂತೆ ಆಟಗಾರರು ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ಟಿ20 ವಿಶ್ವಕಪ್​ನಲ್ಲಿ ಭಾರತ ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರಲಿಲ್ಲ. ಹೀಗಾಗಿ ಈ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಬಿಸಿಸಿಐ (BCCI) ಕಳೆದ ವರ್ಷ ಆಯ್ಕೆ ಮಾಡಿದ ತಂಡದಿಂದ 6 ಆಟಗಾರರು ಕೈಬಿಟ್ಟು ಹೊಸ ಪ್ಲೇಯರ್ಸ್ ಅನ್ನು ಸೇರಿಸಿದೆ.

ಐಸಿಸಿ ಟಿ20 ವಿಶ್ವಕಪ್ 2021 ರಲ್ಲಿ ಸ್ಥಾನ ಪಡೆದಿದ್ದ ಇಶಾನ್ ಕಿಶನ್, ರಾಹುಲ್ ಚಹರ್,, ವರುಣ್ ಚಕ್ರವರ್ತಿ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಈ ಬಾರಿ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಇದರಲ್ಲಿ ರವೀಂದ್ರ ಜಡೇಜಾ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದರೆ, ಉಳಿದ ಆಟಗರರನ್ನು ಕೈಬಿಡಲಾಗಿದೆ. ಶಮಿ ನೇರವಾಗಿ ತಂಡಕ್ಕೆ ಆಯ್ಕೆಯಾಗದೆ ಸ್ಟ್ಯಾಂಡ್‌ಬೈ ಆಟಗಾರರ ಪಟ್ಟಟಿಯಲ್ಲಷ್ಟೆ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
Dinesh Karthik: ಟಿ20 ವಿಶ್ವಕಪ್​ಗೆ ಆಯ್ಕೆಯಾದ ತಕ್ಷಣ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ
Image
ICC Award: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಜಿಂಬಾಬ್ವೆ ಆಟಗಾರ..!
Image
ರಿಜ್ವಾನ್ ಬದಲಿಗೆ ಸರ್ಫರಾಜ್​ಗೆ ಅವಕಾಶ; ಪಾಕ್ ತಂಡದ ಅರ್ಧದಷ್ಟು ಆಟಗಾರರಿಗೆ ಕೋಕ್..!
Image
ರಾಂಚಿ ಕ್ರಿಕೆಟ್ ಕ್ರೀಡಾಂಗಣದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕೋಚ್; ಸ್ಥಿತಿ ಗಂಭೀರ

ಇಳಿದಂತೆ ಕಳೆದ ವರ್ಷದ ತಂಡಕ್ಕೆ ಹೋಲಿಸಿದರೆ ಈ ಬಾರಿ ದಿನೇಶ್ ಕಾರ್ತಿಕ್, ದೀಪಕ್ ಹೂಡ, ಯುಜ್ವೇಂದ್ರ ಚಹಲ್, ಹರ್ಷಲ್ ಪಟೇಲ್, ಅರ್ಶ್​ದೀಪ್ ಸಿಂಗ್ ಹಾಗೂ ಅಕ್ಷರ್ ಪಟೇಲ್15 ಸದಸ್ಯರ ತಂಡಲ್ಲಿ ಕಾಣಿಸಿಕೊಂಡಿದ್ದಾರೆ.

ಕನಸು ನನಸಾದಾಗ:

2007 ರಲ್ಲಿ ನಡೆದ ಟಿ20 ವಿಶ್ವಕಪ್​ನ ಉದ್ಘಾಟನಾ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿದ್ದ ದಿನೇಶ್ ಕಾರ್ತಿಕ್ ಈ ಬಾರಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಕಾರ್ತಿಕ್ ಬಹಳ ಸಮಯದ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಕಾರ್ತಿಕ್ ಟ್ವಿಟರ್​ನಲ್ಲಿ ‘ಕನಸುಗಳು ನನಸಾಗುತ್ತವೆ‘ ಎಂದು ಬರೆದು ಬ್ಲೂ ಹಾರ್ಟ್ ಎಮೋಜಿಯೊಂದಿಗೆ ಹಂಚಿಕೊಂಡಿದ್ದಾರೆ. ಇದು ದಿನೇಶ್ ಕಾರ್ತಿಕ್‌ಗೆ ಮಾತ್ರವಲ್ಲ ಅವರ ಆಟವನ್ನು ಮೆಚ್ಚಿಕೊಂಡ ಅಭಿಮಾನಿಗಳಿಗೂ ಖುಷಿ ನೀಡಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್​ಪ್ರೀತ್ ತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್​ದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ಮೊಹಮ್ಮದ್ ಶಮಿ, ದೀಪಕ್ ಚಹಾರ್, ರವಿ ಬಿಷ್ಣೋಯ್.

Published On - 9:06 am, Tue, 13 September 22

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ