AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Naman Awards: ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

BCCI Naman Awards 2025: ಬಿಸಿಸಿಐ ಪ್ರತಿ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ನಮನ್ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಈ ಬಾರಿ ಒಟ್ಟು 27 ಪ್ರಶಸ್ತಿಗಳನ್ನು ನೀಡಲಾಗಿದ್ದು, ಈ ಮೂಲಕ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಿದೆ. ಈ ಪ್ರಶಸ್ತಿ ಪಡೆದ ಭಾರತೀಯ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ..

BCCI Naman Awards: ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ
Team India
ಝಾಹಿರ್ ಯೂಸುಫ್
|

Updated on:Feb 02, 2025 | 7:40 AM

Share

ಮುಂಬೈನಲ್ಲಿ ಶನಿವಾರ (ಫೆಬ್ರವರಿ 1) ನಡೆದ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಸಮಾರಂಭದಲ್ಲಿ ದಿಗ್ಗಜ ಸಚಿನ್ ತೆಂಡೂಲ್ಕರ್‌ಗೆ ಪ್ರತಿಷ್ಠಿತ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇನ್ನು ಭಾರತ ಟೆಸ್ಟ್ ತಂಡದ ಉಪನಾಯಕ ಜಸ್ಪ್ರೀತ್ ಬುಮ್ರಾ, ಟೀಮ್ ಇಂಡಿಯಾ ಬ್ಯಾಟರ್​ ಸ್ಮೃತಿ ಮಂಧಾನ ಸೇರಿದಂತೆ ಹಲವರಿಗೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಕೆಳಗಿನಂತಿದೆ…

2025ರ ನಮನ್ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ:

  • ಮಹಿಳಾ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್‌ ಪಡೆದ ಪ್ರಶಸ್ತಿ – ದೀಪ್ತಿ ಶರ್ಮಾ
  • ಮಹಿಳಾ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ ರನ್‌ಗಳಿಸಿದ ಪ್ರಶಸ್ತಿ – ಸ್ಮೃತಿ ಮಂಧಾನ
  • ಅತ್ಯುತ್ತಮ ಅಂತಾರಾಷ್ಟ್ರೀಯ ಪಾದಾರ್ಪಣೆ (ಮಹಿಳೆ) – ಆಶಾ ಸೊಬ್ನಾ
  • ಅತ್ಯುತ್ತಮ ಅಂತಾರಾಷ್ಟ್ರೀಯ ಪದಾರ್ಪಣೆ (ಪುರುಷ) – ಸರ್ಫರಾಝ್ ಖಾನ್
  • ಅತ್ಯುತ್ತಮ ಅಂತಾರಾಷ್ಟ್ರೀಯ ಆಟಗಾರ್ತಿ – ಸ್ಮೃತಿ ಮಂಧಾನ
  • ಅತ್ಯುತ್ತಮ ಅಂತಾರಾಷ್ಟ್ರೀಯ ಆಟಗಾರ (ಪಾಲಿ ಉಮ್ರಿಗರ್ ಪ್ರಶಸ್ತಿ) – ಜಸ್ಪ್ರೀತ್ ಬುಮ್ರಾ
  • ಬಿಸಿಸಿಐ ವಿಶೇಷ ಪ್ರಶಸ್ತಿ – ರವಿಚಂದ್ರನ್ ಅಶ್ವಿನ್
  • ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ – ಸಚಿನ್ ತೆಂಡೂಲ್ಕರ್
  • ದೇಶೀಯ ಪಂದ್ಯಾವಳಿಗಳಲ್ಲಿ ಅತ್ಯುತ್ತಮ ಪ್ರದರ್ಶನ – ಮುಂಬೈ ಕ್ರಿಕೆಟ್ ಸಂಸ್ಥೆ
  • ಅತ್ಯುತ್ತಮ ಮಹಿಳಾ ದೇಶೀಯ ಆಟಗಾರ್ತಿ (ಜೂನಿಯರ್) – ಈಶ್ವರಿ ಅವಸರೆ (ಮಹಾರಾಷ್ಟ್ರ)
  • ಅತ್ಯುತ್ತಮ ಮಹಿಳಾ ದೇಶೀಯ ಆಟಗಾರ್ತಿ- ಪ್ರಿಯಾ ಮಿಶ್ರಾ (ದೆಹಲಿ)
  • U16 ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ – ಹೇಮಚೂಡೇಶನ್ ಜೆಗನಾಥನ್ (ತಮಿಳುನಾಡು)
  • U16 ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ – ಲಕ್ಷ ರಾಯಚಂದನಿ (ಉತ್ತರಾಖಂಡ)
  • U19 ಕೂಚ್ ಬೆಹಾರ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ- ವಿಷ್ಣು ಭಾರದ್ವಾಜ್ (ಮಧ್ಯಪ್ರದೇಶ)
  • U19 ಕೂಚ್ ಬೆಹಾರ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ- ಕಾವ್ಯಾ ಟಿಯೋಟಿಯಾ (ಉತ್ತರ ಪ್ರದೇಶ)
  • U23 CK ನಾಯುಡು ಟ್ರೋಫಿ (ಪ್ಲೇಟ್ ಗ್ರೂಪ್) ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಆಟಗಾರ- ನೀಜೆಖೋ ರುಪ್ರಿಯೊ (ನಾಗಲ್ಯಾಂಡ್)
  • U23 CK ನಾಯುಡು ಟ್ರೋಫಿ (ಪ್ಲೇಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ- ಹೇಮ್ ಚೆಟ್ರಿ (ನಾಗಲ್ಯಾಂಡ್)
  • U23 CK ನಾಯುಡು ಟ್ರೋಫಿ (ಎಲೈಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ- P. ವಿದ್ಯುತ್ (ತಮಿಳುನಾಡು)
  • U23 CK ನಾಯುಡು ಟ್ರೋಫಿ (ಎಲೈಟ್ ಗ್ರೂಪ್) ನಲ್ಲಿ ಅತಿ ಹೆಚ್ಚು ರನ್​ಗಳಿಸಿದ ಆಟಗಾರ- ಅನೀಶ್ ಕೆವಿ (ಕರ್ನಾಟಕ)
  • ರಣಜಿ ಟ್ರೋಫಿಯಲ್ಲಿ ಅತ್ಯಧಿಕ ವಿಕೆಟ್ ಆಟಗಾರ(ಪ್ಲೇಟ್ ಗ್ರೂಪ್) – ಮೋಹಿತ್ ಜಾಂಗ್ರಾ (ಮಿಜೋರಾಂ)
  • ರಣಜಿ ಟ್ರೋಫಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಆಟಗಾರ (ಎಲೈಟ್ ಗ್ರೂಪ್) – ತನಯ್ ತ್ಯಾಗರಾಜನ್ (ಹೈದರಾಬಾದ್)
  • ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ (ಪ್ಲೇಟ್ ಗ್ರೂಪ್) – ಅಗ್ನಿ ಚೋಪ್ರಾ (ಮಿಜೋರಾಂ)
  • ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ (ಎಲೈಟ್ ಗ್ರೂಪ್) – ರಿಕಿ ಭುಯಿ (ಆಂಧ್ರ ಪ್ರದೇಶ)
  • ದೇಶೀಯ ಸೀಮಿತ ಓವರ್‌ಗಳ ಸ್ಪರ್ಧೆಗಳಲ್ಲಿ ಅತ್ಯುತ್ತಮ ಆಲ್‌ರೌಂಡರ್‌ ಪ್ರಶಸ್ತಿ – ಶಶಾಂಕ್ ಸಿಂಗ್ (ಛತ್ತೀಸ್‌ಗಢ)
  • ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಆಲ್​ರೌಂಡರ್ ಪ್ರಶಸ್ತಿ – ತನುಷ್ ಕೋಟ್ಯಾನ್ (ಮುಂಬೈ)
  • ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಅಂಪೈರ್ – ಅಕ್ಷಯ್ ಟೋಟ್ರೆ

Published On - 7:38 am, Sun, 2 February 25

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ