AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಅಫ್ಘಾನಿಸ್ತಾನ್ ಕನಸಿಗೆ ತಣ್ಣೀರು: ನ್ಯೂಝಿಲೆಂಡ್ ವಿರುದ್ಧ ಶುರುವಾಗದ ಪಂದ್ಯ

Afghanistan vs New Zealand: ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕಾಗಿ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್​ಗೆ ಬಿಸಿಸಿಐ ಮೂರು ಸ್ಟೇಡಿಯಂಗಳ ಆಯ್ಕೆ ನೀಡಿದ್ದರು. ಅದರಂತೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಹಾಗೂ ಗ್ರೇಟರ್ ನೋಯ್ಡಾದಲ್ಲಿನ ಕಾಂಪ್ಲೆಕ್ಸ್ ಸ್ಟೇಡಿಯಂನಲ್ಲಿ ಪಂದ್ಯವನ್ನು ಆಯೋಜಿಸಬಹುದು ಎಂದು ತಿಳಿಸಲಾಗಿತ್ತು.

ಭಾರತದಲ್ಲಿ ಅಫ್ಘಾನಿಸ್ತಾನ್ ಕನಸಿಗೆ ತಣ್ಣೀರು: ನ್ಯೂಝಿಲೆಂಡ್ ವಿರುದ್ಧ ಶುರುವಾಗದ ಪಂದ್ಯ
Noid Ground
ಝಾಹಿರ್ ಯೂಸುಫ್
|

Updated on: Sep 11, 2024 | 8:23 AM

Share

ಭಾರತದ ಗ್ರೇಟರ್ ನೋಯ್ಡಾ ಕಾಂಪ್ಲೆಕ್ಸ್ ಸ್ಟೇಡಿಯಂನಲ್ಲಿ ಶುರುವಾಗಬೇಕಿದ್ದ ಅಫ್ಘಾನಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯವು 2ನೇ ದಿನದಾಟದಲ್ಲೂ ಆರಂಭವಾಗಿಲ್ಲ. ಮೊದಲ ದಿನವು ಮಳೆಗೆ ಅಹುತಿಯಾದರೆ, ಎರಡನೇ ದಿನವು ಒದ್ದೆ ಮೈದಾನದ ಕಾರಣ ಪಂದ್ಯವನ್ನು ನಡೆಸಲು ಸಾಧ್ಯವಾಗಿಲ್ಲ. ಇನ್ನು ಮೂರನೇ ದಿನದಾಟದಲ್ಲಿ ಪಂದ್ಯ ಶುರುವಾಗುವ ನಿರೀಕ್ಷೆಯಲ್ಲಿದೆ ಉಭಯ ತಂಡಗಳು.

ಭಾರತದಲ್ಲಿ ಪಂದ್ಯವೇಕೆ?

ಅಫ್ಘಾನಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವಣ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಭಾರತವು ಆತಿಥ್ಯವಹಿಸುತ್ತಿದೆ. ಇದಕ್ಕೆ ಮುಖ್ಯ ಕಾರಣ ಅಫ್ಘಾನಿಸ್ತಾನಕ್ಕೆ ನ್ಯೂಝಿಲೆಂಡ್ ತಂಡ ತೆರಳದಿರುವುದು. ತಾಲಿಬಾನಿಗಳ ಆಡಳಿತದಲ್ಲಿರುವ ಅಫ್ಘಾನಿಸ್ತಾನದಲ್ಲಿ ಪಂದ್ಯವಾಡಲು ನ್ಯೂಝಿಲೆಂಡ್ ಹಿಂದೇಟು ಹಾಕಿದೆ. ಹೀಗಾಗಿ ಅಫ್ಘಾನಿಸ್ತಾನ್ ಭಾರತವನ್ನು 2ನೇ ಹೋಮ್ ಗ್ರೌಂಡ್ ಆಗಿ ಆಯ್ಕೆ ಮಾಡಿಕೊಂಡಿತು. ಅದರಂತೆ ಗ್ರೇಟರ್ ನೋಯ್ಡಾ ಮೈದಾನದಲ್ಲಿ ಏಕೈಕ ಟೆಸ್ಟ್ ಪಂದ್ಯ ನಡೆಯುವ ನಿರೀಕ್ಷೆಯಿದೆ.

ಎಸಿಬಿ ಎಡವಟ್ಟು..!

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕಾಗಿ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್​ಗೆ ಬಿಸಿಸಿಐ ಮೂರು ಸ್ಟೇಡಿಯಂಗಳ ಆಯ್ಕೆ ನೀಡಿದ್ದರು. ಅದರಂತೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಹಾಗೂ ಗ್ರೇಟರ್ ನೋಯ್ಡಾದಲ್ಲಿನ ಕಾಂಪ್ಲೆಕ್ಸ್ ಸ್ಟೇಡಿಯಂನಲ್ಲಿ ಪಂದ್ಯವನ್ನು ಆಯೋಜಿಸಬಹುದು ಎಂದು ತಿಳಿಸಲಾಗಿತ್ತು. ಆದರೆ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ನೋಯ್ಡಾವನ್ನು ಆಯ್ಕೆ ಮಾಡಿಕೊಂಡಿದ್ದರು.

ಇದಕ್ಕೆ ಮುಖ್ಯ ಕಾರಣ ಗ್ರೇಟರ್ ನೋಯ್ಡಾ ಕಾಂಪ್ಲೆಕ್ಸ್ ಸೇಡಿಯಂ ದೆಹಲಿಗೆ ಹತ್ತಿರದಲ್ಲಿರುವುದು. ಕಾಬೂಲ್​ನಿಂದ ದೆಹಲಿಗೆ ಬಂದಿಳಿದ ಆಟಗಾರರು ನೇರವಾಗಿ ಗ್ರೇಟರ್ ನೋಯ್ಡಾಗೆ ತೆರಳಬಹುದು ಎಂಬ ಉದ್ದೇಶದೊಂದಿಗೆ ಈ ಸ್ಟೇಡಿಯಂ ಅನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೀಗ ಮಳೆಯ ಕಾರಣ ಸಮಸ್ಯೆ ಎದುರಾಗಿದೆ.

ಅಂದರೆ ಈ ಸ್ಟೇಡಿಯಂ ಅಂತಾರಾಷ್ಟ್ರೀಯ ಪಂದ್ಯವಾಡಲು ಸೂಕ್ತವಾಗಿದ್ದರೂ, ಉತ್ತಮ ಒಳಚರಂಡಿ ವ್ಯವಸ್ಥೆಯನ್ನು ಹೊಂದಿಲ್ಲ. ಇತ್ತ ಮಳೆ ಬರುವ ನಿರೀಕ್ಷೆಯಲ್ಲಿರದ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ನೋಯ್ದಾ ಸ್ಟೇಡಿಯಂ ಅನ್ನು ಆಯ್ಕೆ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿದೆ.

ಏಕೆಂದರೆ ಮೊದಲ ದಿನದಾಟವು ಮಳೆಗೆ ಅಹುತಿಯಾದರೆ, 2ನೇ ದಿನದಾಟವು ಮೈದಾನವನ್ನು ಸಿದ್ಧಗೊಳಿಸುವುದರಲ್ಲೇ ಕಳೆದು ಹೋಗಿದೆ. ಇದೀಗ ಮೂರನೇ ದಿನದಾಟದಲ್ಲಿ ಪಂದ್ಯ ಆರಂಭವಾಗುವ ನಿರೀಕ್ಷೆಯಲ್ಲಿದೆ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್.

ಅಫ್ಘಾನಿಸ್ತಾನ್ ಟೆಸ್ಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ) , ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ , ರಹಮತ್ ಷಾ , ರಿಯಾಝ್ ಹಸನ್ , ಬಹಿರ್ ಶಾ , ಶಾಹಿದುಲ್ಲಾ ಕಮಾಲ್ , ಅಜ್ಮತುಲ್ಲಾ ಒಮರ್ಜಾಯ್ , ಖೈಸ್ ಅಹ್ಮದ್ , ಜಹೀರ್ ಖಾನ್ , ಖಲೀಲ್ ಅಹ್ಮದ್ , ಜಿಯಾ ಉರ್ ರೆಹಮಾನ್, ಅಫ್ಸರ್ ಝಝೈ, ನಿಜಾತ್ ಮಸೂದ್, , ಅಬ್ದುಲ್ ಮಲಿಕ್.

ಇದನ್ನೂ ಓದಿ: CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!

ನ್ಯೂಝಿಲೆಂಡ್ ಟೆಸ್ಟ್ ತಂಡ: ಟಾಮ್ ಲ್ಯಾಥಮ್ (ವಿಕೆಟ್ ಕೀಪರ್) , ಟಿಮ್ ಸೌಥಿ (ನಾಯಕ) , ಡೆವೊನ್ ಕಾನ್ವೇ , ಕೇನ್ ವಿಲಿಯಮ್ಸನ್ , ಡೇರಿಲ್ ಮಿಚೆಲ್ , ವಿಲ್ ಯಂಗ್ , ಗ್ಲೆನ್ ಫಿಲಿಪ್ಸ್ , ಮೈಕೆಲ್ ಬ್ರೇಸ್‌ವೆಲ್ , ಮಿಚೆಲ್ ಸ್ಯಾಂಟ್ನರ್ , ಅಜಾಜ್ ಪಟೇಲ್ , ಮ್ಯಾಟ್ ಹೆನ್ರಿ , ಟಾಮ್ ಬ್ಲುಂಡೆಲ್ , ರಚಿನ್ ರವೀಂದ್ರ, ಬೆನ್ ಸೀರ್ಸ್.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ