AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ‘ಕಪ್’ ಚುಕ್ಕೆ… ಐಪಿಎಲ್​​ನಿಂದ RCB ಬ್ಯಾನ್?

RCB: ಐಪಿಎಲ್​ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿತು. ಈ ಭರ್ಜರಿ ಗೆಲುವಿನ ಮರುದಿನ, ಅಂದರೆ ಜೂನ್ 4 ರಂದು ಬೆಂಗಳೂರಿನ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ತಂಡದ ವಿಜಯೋತ್ಸವವನ್ನು ಆಯೋಜಿಸಿತ್ತು. ಈ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿ ಮೃತಪಟ್ಟಿದ್ದರು. ಇದನ್ನು ಈಗ ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.

IPL 2026: 'ಕಪ್' ಚುಕ್ಕೆ… ಐಪಿಎಲ್​​ನಿಂದ RCB ಬ್ಯಾನ್?
Rcb
ಝಾಹಿರ್ ಯೂಸುಫ್
|

Updated on:Jun 09, 2025 | 10:33 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ 2026 ರಿಂದ ಬ್ಯಾನ್ ಆಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ ಹೇಳಿಕೆ. ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ ತಂಡವು ಚೊಚ್ಚಲ ಬಾರಿ ಕಪ್ ಗೆದ್ದುಕೊಂಡಿದೆ. ಈ ಕಪ್ ಗೆಲುವಿನ ಬೆನ್ನಲ್ಲೇ ನಡೆದ ದಾರುಣ ಘಟನೆಯು ಇದೀಗ ಐಪಿಎಲ್​ ಪಾಲಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ಇದನ್ನೇ ಈಗ ಬಿಸಿಸಿಐ ಗಂಭೀರವಾಗಿ ಪರಿಗಣಿಸುವ ಸೂಚನೆ ನೀಡಿದೆ.

ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದಾಗಿ 11 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಇಂತಹ ಘಟನೆಗಳು ನಡೆದಾಗ  ಭಾರತೀಯ ಕ್ರಿಕೆಟ್ ಮಂಡಳಿಯು ‘ಮೂಕ ಪ್ರೇಕ್ಷಕರಾಗಿ’ ಇರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಐಪಿಎಲ್‌ನಲ್ಲಿ ಭವಿಷ್ಯದ ಚಾಂಪಿಯನ್‌ಶಿಪ್ ನಂತರದ ಆಚರಣೆಗಳನ್ನು ನಿಯಂತ್ರಿಸಲು ಮಂಡಳಿಯು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಯೋಜಿಸುತ್ತಿದೆ. ಈ ಆಚರಣೆಯನ್ನು ಆರ್‌ಸಿಬಿ ಖಾಸಗಿಯಾಗಿ ಆಯೋಜಿಸಿದ್ದರೂ, ಇದೇ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ತಡೆಯಲು ಬಿಸಿಸಿಐ ಬದ್ಧವಾಗಿದೆ.

ಆರ್​ಸಿಬಿ ವಿಜಯೋತ್ಸವದ ವೇಳೆ ನಡೆದ ಘಟನೆಗೆ ಬಿಸಿಸಿಐ ಏನನ್ನಾದರೂ ಮಾಡಬೇಕಾಗುತ್ತದೆ. ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಸೈಕಿಯಾ ಹೇಳಿದ್ದಾರೆ. ಈ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ.

ಆರ್​ಸಿಬಿ ಬ್ಯಾನ್ ಆಗುತ್ತಾ?

ದೇವಜಿತ್ ಸೈಕಿಯಾ ಅವರ ಈ ಹೇಳಿಕೆ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಿಂದ ಬ್ಯಾನ್ ಆಗುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಆರ್​ಸಿಬಿಯ ವಿಜಯೋತ್ಸವದ ದುರಂತವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಇದು ಐಪಿಎಲ್​ ಪಾಲಿನ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿದೆ.

ಇದಕ್ಕೂ ಮುನ್ನ ಐಪಿಎಲ್ ಟ್ರೋಫಿ ಗೆದ್ದಾಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ, ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ವಿಜಯೋತ್ಸವವನ್ನು ಆಚರಿಸಿತ್ತು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಆದರೆ ಆರ್​ಸಿಬಿ ಫ್ರಾಂಚೈಸಿಯ ಗೆಲುವಿನ ಸಂಭ್ರಮದಿಂದಾಗಿ 11 ಮಂದಿ ಜೀವ ತೆತ್ತಿದ್ದಾರೆ. ಅಲ್ಲದೆ ಹಲವರು ಗಾಯಗೊಂಡಿದ್ದಾರೆ.

ಇಂತಹ ಘಟನೆಗಳು ಐಪಿಎಲ್​ನ ಬ್ರ್ಯಾಂಡ್ ವ್ಯಾಲ್ಯೂ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿಯೇ ಇದೀಗ ಬಿಸಿಸಿಐ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸುತ್ತಿದೆ. ಒಂದು ವೇಳೆ ಈ ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ನೇರ ಕಾರಣ ಎಂಬುದು ಕಂಡು ಬಂದರೆ, ಆರ್​ಸಿಬಿ ತಂಡಕ್ಕೆ ಒಂದು ವರ್ಷದ ನಿಷೇಧ ಹೇರಬಹುದು.

ಬಿಸಿಸಿಐ ಮುಂದಿನ ನಡೆಯೇನು?

ಆರ್​ಸಿಬಿ ವಿಜಯೋತ್ಸವದ ಕಾಲ್ತುಳಿತ ದುರಂತದ ತನಿಖೆಗಾಗಿ ಹೈಕೋರ್ಟ್​ನ ನಿವೃತ್ತ ನ್ಯಾಯಾಧೀಶರಾದ ಮೖಕಲ್ ಕುನ್ಹಾ ನೇತೃತ್ವದಲ್ಲಿ ‘ಒನ್ ಮ್ಯಾನ್ ಕಮಿಷನ್’ ರಚನೆ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ಅಲ್ಲದೆ ಆರ್​ಸಿಬಿ ಮೇಲೆ, ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಡಿಎನ್​ಎ, ಕೆಎಸ್​ಸಿಎ ಅನ್ನು ಯಾರೆಲ್ಲ ಪ್ರತಿನಿಧಿಸುತ್ತಾರೋ ಅವರ ಬಂಧನಕ್ಕೆ ಸರ್ಕಾರ ಸೂಚನೆ ನೀಡಿದೆ.

ಅದರಂತೆ ಈಗಾಗಲೇ RCB, DNA, KSCA ವಿರುದ್ಧ ಕಬ್ಬನ್ ಪಾರ್ಕ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಇದರ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಲಾಗಿದೆ. ಈ ತನಿಖಾ ವರದಿ ಬಂದ ಮೇಲೆ ಭಾರತೀಯ ಕ್ರಿಕೆಟ್ ಮಂಡಳಿ ಸಭೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2025 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

ಒಂದು ವೇಳೆ ಸಿಐಡಿ ತನಿಖಾ ವರದಿಯಲ್ಲಿ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮ್ಯಾನೇಜ್ಮೆಂಟ್ ನೇರ ಕಾರಣ ಎಂಬುದು ಕಂಡು ಬಂದರೆ, ಬಿಸಿಸಿಐ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ. ಈ ಕಠಿಣ ಕ್ರಮದೊಂದಿಗೆ ಒಂದು ವರ್ಷದವರೆಗೆ ಫ್ರಾಂಚೈಸಿ ಮೇಲೆ ನಿಷೇಧ ಹೇರಿದರೂ ಅಚ್ಚರಿಪಡಬೇಕಿಲ್ಲ.

Published On - 10:33 am, Mon, 9 June 25

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ