AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್

Team India: ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ.

BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್
TV9 Web
| Edited By: |

Updated on: Aug 02, 2021 | 5:57 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದೇಶೀಯ ಕ್ರಿಕೆಟ್ ಸ್ಟ್ರೆಕ್ಚರ್​ ಬದಲಿಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ, ಇಂಡಿಯನ್ ಡೊಮೆಸ್ಟಿಕ್ ಸರ್ಕ್ಯೂಟ್​ನ ಅಂಡರ್ -23 ಚಾಂಪಿಯನ್‌ಶಿಪ್ ಬದಲಿಗೆ ಅಂಡರ್ -25 ಟೂರ್ನಮೆಂಟ್ ಆಯೋಜಿಸುವ ವಿಚಾರವನ್ನು ಚರ್ಚಿಸಲಾಗಿದೆ. ಇದರಿಂದ ಹೆಚ್ಚಿನ ಆಟಗಾರರಿಗೆ ಪ್ರಥಮ ದರ್ಜೆ ಕ್ರಿಕೆಟ್ ಆಡುವ ಅವಕಾಶ ಸಿಗಲಿದೆ ಎಂಬ ಅಭಿಪ್ರಾಯ ಮೂಡಿ ಬಂದಿದೆ.

ಏಕೆಂದರೆ ಅಂಡರ್ 25 ಟೂರ್ನಮೆಂಟ್ ಆಯೋಜಿಸಿದರೆ, ರಾಜ್ಯದ ರಣಜಿ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ಯುವ ಆಟಗಾರರಿಗೆ, ಈ ಪಂದ್ಯಾವಳಿ ಮೂಲಕ ಅವಕಾಶ ಪಡೆಯಬಹುದು. ಇದರಿಂದ ಅತ್ತ ರಣಜಿ ತಂಡ ಕೂಡ ಬಲಿಷ್ಠವಾಗಿರಲಿದೆ. ಹಾಗೆಯೇ ಅಂಡರ್​-25 ತಂಡಗಳ ಮೂಲಕ ಯುವ ಪ್ರತಿಭೆಗಳನ್ನು ಸಜ್ಜುಗೊಳಿಸಬಹುದು. ಹೀಗಾಗಿ ಅಂಡರ್-23 ಚಾಂಪಿಯನ್​ಶಿಪ್ ಬದಲಿಗೆ 25 ವರ್ಷದೊಳಗಿನ ಟೂರ್ನಿ ನಡೆಸಲು ಬಿಸಿಸಿಐ ಚಿಂತಿಸಿದೆ. ಆದಾಗ್ಯೂ, ಬಿಸಿಸಿಐ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಅದಕ್ಕೂ ಮುನ್ನ ರಾಜ್ಯ ಕ್ರಿಕೆಟ್​ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ನು ಈ ಹಿಂದೆ ಅಂಡರ್ -16 ಟೂರ್ನಮೆಂಟ್ ಅನ್ನು ಆಯೋಜಿಸುವ ಬಗ್ಗೆ ಊಹಾಪೋಹಗಳು ಕೇಳಿ ಬಂದಿದ್ದವು. ಆದರೆ ಪ್ರಸ್ತುತ ಕೊರೋನಾ ಪರಿಸ್ಥಿತಿಯನ್ನು ಗಮನಿಸಿದರೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ಇನ್ನೂ ಲಭ್ಯವಿಲ್ಲ. ಈ ಕಾರಣದಿಂದಾಗಿ, ಈ ಟೂರ್ನುಯನ್ನು ಕೈ ಬಿಡುವ ಸಾಧ್ಯತೆಗಳಿವೆ.

ಐಪಿಎಲ್​ಗೂ ಸಿದ್ದತೆ: ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಎರಡನೇ ಹಂತದ ಐಪಿಎಲ್​ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಲಿದೆ. ದ್ವಿತಿಯಾರ್ಧದಲ್ಲಿ ಕೆಲವು ವಿದೇಶಿ ಆಟಗಾರರು ಭಾಗಿಯಾಗುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರವಾಗಿ ವಿದೇಶಿ ಕ್ರಿಕೆಟ್ ಮಂಡಳಿಗಳೊಂದಿಗೆ ಬಿಸಿಸಿಐ ಮಾತುಕತೆ ನಡೆಸುತ್ತಿದೆ.

ಟಿ20 ವಿಶ್ವಕಪ್ ತಯಾರಿ: ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ. ಈಗಾಗಲೇ ಗ್ರೂಪ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಶೀಘ್ರದಲ್ಲೇ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಲಿದೆ.

ಇದನ್ನೂ ಓದಿ: Virat Kohli: ಇಂಗ್ಲೆಂಡ್ ವಿರುದ್ದ ಸಿಡಿಸಿದ್ರೆ ಈ 5 ದಾಖಲೆಗಳು ಕೊಹ್ಲಿ ಪಾಲಾಗುವುದು ಪಕ್ಕಾ

ಇದನ್ನೂ ಓದಿ: IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ

ಇದನ್ನೂ ಓದಿ: PV Sindhu: ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!

(BCCI planning to change U-23 championship to U-25 tournament)

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು