AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್

Team India: ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ.

BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್
TV9 Web
| Edited By: |

Updated on: Aug 02, 2021 | 5:57 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದೇಶೀಯ ಕ್ರಿಕೆಟ್ ಸ್ಟ್ರೆಕ್ಚರ್​ ಬದಲಿಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ, ಇಂಡಿಯನ್ ಡೊಮೆಸ್ಟಿಕ್ ಸರ್ಕ್ಯೂಟ್​ನ ಅಂಡರ್ -23 ಚಾಂಪಿಯನ್‌ಶಿಪ್ ಬದಲಿಗೆ ಅಂಡರ್ -25 ಟೂರ್ನಮೆಂಟ್ ಆಯೋಜಿಸುವ ವಿಚಾರವನ್ನು ಚರ್ಚಿಸಲಾಗಿದೆ. ಇದರಿಂದ ಹೆಚ್ಚಿನ ಆಟಗಾರರಿಗೆ ಪ್ರಥಮ ದರ್ಜೆ ಕ್ರಿಕೆಟ್ ಆಡುವ ಅವಕಾಶ ಸಿಗಲಿದೆ ಎಂಬ ಅಭಿಪ್ರಾಯ ಮೂಡಿ ಬಂದಿದೆ.

ಏಕೆಂದರೆ ಅಂಡರ್ 25 ಟೂರ್ನಮೆಂಟ್ ಆಯೋಜಿಸಿದರೆ, ರಾಜ್ಯದ ರಣಜಿ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ಯುವ ಆಟಗಾರರಿಗೆ, ಈ ಪಂದ್ಯಾವಳಿ ಮೂಲಕ ಅವಕಾಶ ಪಡೆಯಬಹುದು. ಇದರಿಂದ ಅತ್ತ ರಣಜಿ ತಂಡ ಕೂಡ ಬಲಿಷ್ಠವಾಗಿರಲಿದೆ. ಹಾಗೆಯೇ ಅಂಡರ್​-25 ತಂಡಗಳ ಮೂಲಕ ಯುವ ಪ್ರತಿಭೆಗಳನ್ನು ಸಜ್ಜುಗೊಳಿಸಬಹುದು. ಹೀಗಾಗಿ ಅಂಡರ್-23 ಚಾಂಪಿಯನ್​ಶಿಪ್ ಬದಲಿಗೆ 25 ವರ್ಷದೊಳಗಿನ ಟೂರ್ನಿ ನಡೆಸಲು ಬಿಸಿಸಿಐ ಚಿಂತಿಸಿದೆ. ಆದಾಗ್ಯೂ, ಬಿಸಿಸಿಐ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಅದಕ್ಕೂ ಮುನ್ನ ರಾಜ್ಯ ಕ್ರಿಕೆಟ್​ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ನು ಈ ಹಿಂದೆ ಅಂಡರ್ -16 ಟೂರ್ನಮೆಂಟ್ ಅನ್ನು ಆಯೋಜಿಸುವ ಬಗ್ಗೆ ಊಹಾಪೋಹಗಳು ಕೇಳಿ ಬಂದಿದ್ದವು. ಆದರೆ ಪ್ರಸ್ತುತ ಕೊರೋನಾ ಪರಿಸ್ಥಿತಿಯನ್ನು ಗಮನಿಸಿದರೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ಇನ್ನೂ ಲಭ್ಯವಿಲ್ಲ. ಈ ಕಾರಣದಿಂದಾಗಿ, ಈ ಟೂರ್ನುಯನ್ನು ಕೈ ಬಿಡುವ ಸಾಧ್ಯತೆಗಳಿವೆ.

ಐಪಿಎಲ್​ಗೂ ಸಿದ್ದತೆ: ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಎರಡನೇ ಹಂತದ ಐಪಿಎಲ್​ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಲಿದೆ. ದ್ವಿತಿಯಾರ್ಧದಲ್ಲಿ ಕೆಲವು ವಿದೇಶಿ ಆಟಗಾರರು ಭಾಗಿಯಾಗುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರವಾಗಿ ವಿದೇಶಿ ಕ್ರಿಕೆಟ್ ಮಂಡಳಿಗಳೊಂದಿಗೆ ಬಿಸಿಸಿಐ ಮಾತುಕತೆ ನಡೆಸುತ್ತಿದೆ.

ಟಿ20 ವಿಶ್ವಕಪ್ ತಯಾರಿ: ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ. ಈಗಾಗಲೇ ಗ್ರೂಪ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಶೀಘ್ರದಲ್ಲೇ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಲಿದೆ.

ಇದನ್ನೂ ಓದಿ: Virat Kohli: ಇಂಗ್ಲೆಂಡ್ ವಿರುದ್ದ ಸಿಡಿಸಿದ್ರೆ ಈ 5 ದಾಖಲೆಗಳು ಕೊಹ್ಲಿ ಪಾಲಾಗುವುದು ಪಕ್ಕಾ

ಇದನ್ನೂ ಓದಿ: IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ

ಇದನ್ನೂ ಓದಿ: PV Sindhu: ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!

(BCCI planning to change U-23 championship to U-25 tournament)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ