AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್

Team India: ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ.

BCCI: ಯುವ ಕ್ರಿಕೆಟಿಗರತ್ತ ಬಿಸಿಸಿಐ ಚಿತ್ತ: ಶೀಘ್ರದಲ್ಲೇ ಅಂಡರ್-25 ಟೂರ್ನಮೆಂಟ್
TV9 Web
| Edited By: |

Updated on: Aug 02, 2021 | 5:57 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದೇಶೀಯ ಕ್ರಿಕೆಟ್ ಸ್ಟ್ರೆಕ್ಚರ್​ ಬದಲಿಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ, ಇಂಡಿಯನ್ ಡೊಮೆಸ್ಟಿಕ್ ಸರ್ಕ್ಯೂಟ್​ನ ಅಂಡರ್ -23 ಚಾಂಪಿಯನ್‌ಶಿಪ್ ಬದಲಿಗೆ ಅಂಡರ್ -25 ಟೂರ್ನಮೆಂಟ್ ಆಯೋಜಿಸುವ ವಿಚಾರವನ್ನು ಚರ್ಚಿಸಲಾಗಿದೆ. ಇದರಿಂದ ಹೆಚ್ಚಿನ ಆಟಗಾರರಿಗೆ ಪ್ರಥಮ ದರ್ಜೆ ಕ್ರಿಕೆಟ್ ಆಡುವ ಅವಕಾಶ ಸಿಗಲಿದೆ ಎಂಬ ಅಭಿಪ್ರಾಯ ಮೂಡಿ ಬಂದಿದೆ.

ಏಕೆಂದರೆ ಅಂಡರ್ 25 ಟೂರ್ನಮೆಂಟ್ ಆಯೋಜಿಸಿದರೆ, ರಾಜ್ಯದ ರಣಜಿ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ಯುವ ಆಟಗಾರರಿಗೆ, ಈ ಪಂದ್ಯಾವಳಿ ಮೂಲಕ ಅವಕಾಶ ಪಡೆಯಬಹುದು. ಇದರಿಂದ ಅತ್ತ ರಣಜಿ ತಂಡ ಕೂಡ ಬಲಿಷ್ಠವಾಗಿರಲಿದೆ. ಹಾಗೆಯೇ ಅಂಡರ್​-25 ತಂಡಗಳ ಮೂಲಕ ಯುವ ಪ್ರತಿಭೆಗಳನ್ನು ಸಜ್ಜುಗೊಳಿಸಬಹುದು. ಹೀಗಾಗಿ ಅಂಡರ್-23 ಚಾಂಪಿಯನ್​ಶಿಪ್ ಬದಲಿಗೆ 25 ವರ್ಷದೊಳಗಿನ ಟೂರ್ನಿ ನಡೆಸಲು ಬಿಸಿಸಿಐ ಚಿಂತಿಸಿದೆ. ಆದಾಗ್ಯೂ, ಬಿಸಿಸಿಐ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಅದಕ್ಕೂ ಮುನ್ನ ರಾಜ್ಯ ಕ್ರಿಕೆಟ್​ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ನು ಈ ಹಿಂದೆ ಅಂಡರ್ -16 ಟೂರ್ನಮೆಂಟ್ ಅನ್ನು ಆಯೋಜಿಸುವ ಬಗ್ಗೆ ಊಹಾಪೋಹಗಳು ಕೇಳಿ ಬಂದಿದ್ದವು. ಆದರೆ ಪ್ರಸ್ತುತ ಕೊರೋನಾ ಪರಿಸ್ಥಿತಿಯನ್ನು ಗಮನಿಸಿದರೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ಇನ್ನೂ ಲಭ್ಯವಿಲ್ಲ. ಈ ಕಾರಣದಿಂದಾಗಿ, ಈ ಟೂರ್ನುಯನ್ನು ಕೈ ಬಿಡುವ ಸಾಧ್ಯತೆಗಳಿವೆ.

ಐಪಿಎಲ್​ಗೂ ಸಿದ್ದತೆ: ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಎರಡನೇ ಹಂತದ ಐಪಿಎಲ್​ಗಾಗಿ ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಲಿದೆ. ದ್ವಿತಿಯಾರ್ಧದಲ್ಲಿ ಕೆಲವು ವಿದೇಶಿ ಆಟಗಾರರು ಭಾಗಿಯಾಗುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರವಾಗಿ ವಿದೇಶಿ ಕ್ರಿಕೆಟ್ ಮಂಡಳಿಗಳೊಂದಿಗೆ ಬಿಸಿಸಿಐ ಮಾತುಕತೆ ನಡೆಸುತ್ತಿದೆ.

ಟಿ20 ವಿಶ್ವಕಪ್ ತಯಾರಿ: ಅಕ್ಟೋಬರ್ ತಿಂಗಳಲ್ಲಿ ಯುಎಇಯಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಚುಟುಕು ವಿಶ್ವಕಪ್ ಕೊರೋನಾ ಕಾರಣದಿಂದ ಯುಎಇಗೆ ಸ್ಥಳಾಂತರಗೊಂಡಿದೆ. ಈಗಾಗಲೇ ಗ್ರೂಪ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಶೀಘ್ರದಲ್ಲೇ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಲಿದೆ.

ಇದನ್ನೂ ಓದಿ: Virat Kohli: ಇಂಗ್ಲೆಂಡ್ ವಿರುದ್ದ ಸಿಡಿಸಿದ್ರೆ ಈ 5 ದಾಖಲೆಗಳು ಕೊಹ್ಲಿ ಪಾಲಾಗುವುದು ಪಕ್ಕಾ

ಇದನ್ನೂ ಓದಿ: IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ

ಇದನ್ನೂ ಓದಿ: PV Sindhu: ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!

(BCCI planning to change U-23 championship to U-25 tournament)

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ