AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI: ಎರಡು ಪ್ರಮುಖ ದೇಶೀ ಕ್ರಿಕೆಟ್ ಪಂದ್ಯಾವಳಿಗಳು ಪುನರಾರಂಭ: ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ ಬಿಸಿಸಿಐ

BCCI: ಸೆಪ್ಟೆಂಬರ್ 8 ರಿಂದ ಆಡುವ ಸಾಧ್ಯತೆಯಿರುವ ದುಲೀಪ್ ಟ್ರೋಫಿಯೊಂದಿಗೆ ಪುರುಷರ ಸೀನಿಯರ್ ಸೀಸನ್ ಅನ್ನು ಪ್ರಾರಂಭಿಸಲು ಮಂಡಳಿಯು ನೋಡುತ್ತಿದೆ. ಇದರೊಂದಿಗೆ, ಇರಾನಿ ಕಪ್ ಅನ್ನು ಅಕ್ಟೋಬರ್ 1 ರಿಂದ 5 ರವರೆಗೆ ಆಯೋಜಿಸಲು BCCI ಚಿಂತಿಸುತ್ತಿದೆ.

BCCI: ಎರಡು ಪ್ರಮುಖ ದೇಶೀ ಕ್ರಿಕೆಟ್ ಪಂದ್ಯಾವಳಿಗಳು ಪುನರಾರಂಭ: ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ ಬಿಸಿಸಿಐ
BCCI
TV9 Web
| Edited By: |

Updated on:Jul 22, 2022 | 4:07 PM

Share

ಭಾರತಕ್ಕೆ ಕೋವಿಡ್ ಆಗಮನದ ನಂತರ ದೇಶೀಯ ಕ್ರಿಕೆಟ್ ಸಾಕಷ್ಟು ನಷ್ಟ ಅನುಭವಿಸಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಹೇಗೋ ಶುರುವಾಗಿತ್ತು ಆದರೆ ದೇಶೀಯ ಪಂದ್ಯಾವಳಿಗಳನ್ನು ಪ್ರಾರಂಭಿಸಲು ವಿಳಂಬವಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಒಂದು ವರ್ಷದ ನಂತರ ಈ ವರ್ಷ ರಣಜಿ ಟ್ರೋಫಿ (Ranji Trophy)ಯನ್ನು ಆಯೋಜಿಸಿತ್ತು. ಈಗ ಅದೇ ರೀತಿ, ಬಿಸಿಸಿಐ ಎರಡು ದೊಡ್ಡ ದೇಶೀಯ ಪಂದ್ಯಾವಳಿಗಳನ್ನು ಪುನರಾರಂಭಿಸಲು ಯೋಜನೆ ನಡೆಸುತ್ತಿದೆ. ಪ್ರತಿಷ್ಠಿತ ದುಲೀಪ್ ಟ್ರೋಫಿ ಮತ್ತು ಇರಾನಿ ಕಪ್ (Duleep Trophy and Irani Cup) ಅನ್ನು ಪುನರಾರಂಭಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಅದೇ ಸಮಯದಲ್ಲಿ, ಮುಂಬರುವ ದೇಶೀಯ ಸೀಸನ್​ನಲ್ಲಿ ರಣಜಿ ಟ್ರೋಫಿಯನ್ನು ಮೊದಲು ಆಯೋಜಿಸಲು ಪ್ಲಾನ್ ಮಾಡುತ್ತಿದೆ.

ದುಲೀಪ್ ಟ್ರೋಫಿ ಮತ್ತು ಇರಾನಿ ಕಪ್ ಅನ್ನು ಕಳೆದ ಮೂರು ಸೀಸನ್‌ಗಳಿಂದ ನಡೆಸಲಾಗಿಲ್ಲ. ಆದರೆ COVID-19 ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಬಿಸಿಸಿಐ ಮೊದಲ ಬಾರಿಗೆ ರಣಜಿ ಪಂದ್ಯಾವಳಿಯನ್ನು ರದ್ದುಗೊಳಿಸಬೇಕಾಯಿತು. ಗುರುವಾರ ನಡೆದ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಬಿಸಿಸಿಐ ಈ ವಿಷಯಗಳ ಬಗ್ಗೆ ಚರ್ಚೆ ನಡೆಸಿದೆ. ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರು 2022-23 ರಲ್ಲಿ ಇಡೀ ದೇಶೀಯ ಪಂದ್ಯಾವಳಿಗಳನ್ನು ಆಯೋಜಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಈ ಬಾರಿ ನಡೆದ ರಣಜಿಯಲ್ಲಿ ಮಧ್ಯಪ್ರದೇಶ ಮೊದಲ ಬಾರಿಗೆ ರಣಜಿ ಚಾಂಪಿಯನ್ ಆಗಿತ್ತು.

ಇದು ಸಂಪೂರ್ಣ ಯೋಜನೆಯಾಗಿದೆ

ಇದನ್ನೂ ಓದಿ
Image
ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯ-ದಕ್ಷಿಣ ಆಫ್ರಿಕಾಗೆ ಆತಿಥ್ಯ ವಹಿಸಲಿದೆ ಭಾರತ; ಸಂಪೂರ್ಣ ವೇಳಾಪಟ್ಟಿ ಹೀಗಿದೆ
Image
Asia Cup2022: ಏಷ್ಯಾ ಕಪ್ ಆಯೋಜನೆಗೆ ಅಧಿಕೃತ ಸ್ಥಳ ನಿಗದಿ! ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Image
Virat Kohli: ಕ್ರಿಕೆಟ್​ಗೆ ಬ್ರೇಕ್; ಮಡದಿಯೊಂದಿಗೆ ಈ ರೊಮ್ಯಾಂಟಿಕ್ ಸಿಟಿಯಲ್ಲಿ ಒಂದು ತಿಂಗಳು ಕಳೆಯಲಿದ್ದಾರೆ ಕೊಹ್ಲಿ

ಸೆಪ್ಟೆಂಬರ್ 8 ರಿಂದ ಆಡುವ ಸಾಧ್ಯತೆಯಿರುವ ದುಲೀಪ್ ಟ್ರೋಫಿಯೊಂದಿಗೆ ಪುರುಷರ ಸೀನಿಯರ್ ಸೀಸನ್ ಅನ್ನು ಪ್ರಾರಂಭಿಸಲು ಮಂಡಳಿಯು ನೋಡುತ್ತಿದೆ. ಇದರೊಂದಿಗೆ, ಇರಾನಿ ಕಪ್ ಅನ್ನು ಅಕ್ಟೋಬರ್ 1 ರಿಂದ 5 ರವರೆಗೆ ಆಯೋಜಿಸಲು BCCI ಚಿಂತಿಸುತ್ತಿದೆ. ಇದಕ್ಕೂ ಮೊದಲು ದುಲೀಪ್ ಟ್ರೋಫಿಯನ್ನು ನಾಕೌಟ್ ಮೂಲಕ ಐದು ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಆದರೆ ನಂತರ ಇದು ಮೂರು-ತಂಡಗಳ ಪಂದ್ಯವಾಯಿತು, ರೌಂಡ್-ರಾಬಿನ್ ಸ್ವರೂಪದ ಆಧಾರದ ಮೇಲೆ ಅಗ್ರ ಎರಡು ತಂಡಗಳು ಫೈನಲ್‌ಗೆ ಮುನ್ನಡೆಯುತ್ತವೆ. ಇರಾನಿ ಕಪ್‌ನಲ್ಲಿ ಪ್ರಸ್ತುತ ರಣಜಿ ಟ್ರೋಫಿ ಚಾಂಪಿಯನ್ ರೆಸ್ಟ್ ಆಫ್ ಇಂಡಿಯಾ ತಂಡವನ್ನು ಎದುರಿಸಲಿದೆ.

ಈ ವಿಷಯಗಳ ಬಗ್ಗೆ ಚರ್ಚೆ

ಸೈಯದ್ ಮುಷ್ತಾಕ್ ಅಲಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಮತ್ತು ರಣಜಿ ಟ್ರೋಫಿಯನ್ನು ಆಯೋಜಿಸುವ ಆಯ್ಕೆಯ ಬಗ್ಗೆಯೂ ಚರ್ಚಿಸಲಾಗಿದೆ. ಮುಷ್ತಾಕ್ ಅಲಿ ಟ್ರೋಫಿ (T20) ಯನ್ನು ಅಕ್ಟೋಬರ್ 11 ರಿಂದ ಪ್ರಾರಂಭಿಸುತ್ತಿದ್ದು, ವಿಜಯ್ ಹಜಾರೆ ಟ್ರೋಫಿ (ODI ಸ್ವರೂಪ) ನವೆಂಬರ್ 12 ರಿಂದ ನಿರೀಕ್ಷಿಸಲಾಗಿದೆ. ರಣಜಿ ಟ್ರೋಫಿ ಡಿಸೆಂಬರ್ 13 ರಿಂದ ಪ್ರಾರಂಭವಾಗಬಹುದು, ನಾಕೌಟ್ ಪಂದ್ಯಗಳು ಫೆಬ್ರವರಿ 1 ರಿಂದ ಆಡಲ್ಪಡುತ್ತವೆ. ಮುಂಬರುವ ಸೀಸನ್​ನಿಂದ 16 ವರ್ಷದೊಳಗಿನ ಯುವತಿಯರ ಕ್ರಿಕೆಟ್​ ಪ್ರಾರಂಭಿಸಲಾಗುವುದು ಎಂದು ಗಂಗೂಲಿ ಹೇಳಿದರು.

Published On - 4:07 pm, Fri, 22 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ