AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ

BCCI Plans Dual T20 Teams for India: ಐಪಿಎಲ್ ನಂತರ ಭಾರತದಲ್ಲಿ ಅಗಾಧ ಕ್ರಿಕೆಟ್ ಪ್ರತಿಭೆಗಳು ಹುಟ್ಟಿಕೊಂಡಿವೆ. ಟೀಂ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಹೆಚ್ಚಿದ ಪೈಪೋಟಿ ಗಮನಿಸಿ, ಬಿಸಿಸಿಐ ಐಪಿಎಲ್ 2026ರ ನಂತರ ಏಕಕಾಲದಲ್ಲಿ ಎರಡು ಟಿ20 ಅಂತರರಾಷ್ಟ್ರೀಯ ತಂಡಗಳನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದೆ. ಇದರಿಂದ 30-35 ಆಟಗಾರರ ಗುಂಪನ್ನು ಅಭಿವೃದ್ಧಿಪಡಿಸಿ, ಹೆಚ್ಚು ಆಟಗಾರರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಗಲಿದೆ. ಇದು ಭಾರತೀಯ ಕ್ರಿಕೆಟ್‌ನ ಭವಿಷ್ಯವನ್ನು ಬಲಪಡಿಸಲಿದೆ.

ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ
Team India
ಪೃಥ್ವಿಶಂಕರ
|

Updated on:Apr 20, 2026 | 7:51 PM

Share

ಭಾರತದಲ್ಲಿ ಐಪಿಎಲ್ (IPL) ಆರಂಭವಾದ ಬಳಿಕ ಕ್ರಿಕೆಟ್​ನಲ್ಲಿ ಕ್ರಾಂತಿ ಶುರುವಾಯಿತು. ಇದರ ಪರಿಣಾಮವಾಗಿ ದೇಶದಲ್ಲಿ ಸಾಕಷ್ಟು ಪ್ರತಿಭೆಗಳು ಹುಟ್ಟಿಕೊಂಡಿವೆ. ಹೀಗಾಗಿಯೇ ಟೀಂ ಇಂಡಿಯಾ, ಐಸಿಸಿ (ICC) ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸುತ್ತಿದೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಸಾಕಷ್ಟು ಪ್ರತಿಭೆಗಳು ಬೆಂಚ್ ಮೇಲೆಯೇ ಕಾಲ ಕಳೆಯುತ್ತಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ (BCCI), ಎರಡು ಟಿ20 ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸಲು ಸಜ್ಜಾಗಿದೆ.

ಬಿಸಿಸಿಐ ಇದಕ್ಕಾಗಿ ಈಗಾಗಲೇ ಯೋಜನೆ ರೂಪಿಸಲು ಪ್ರಾರಂಭಿಸಿದೆ. ವರದಿಯ ಪ್ರಕಾರ, ಭಾರತದಲ್ಲಿರುವ ಸಾಕಷ್ಟು ಪ್ರತಿಭೆಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಈಗ 30 ರಿಂದ 35 ಆಟಗಾರರ ಗುಂಪನ್ನು ಅಭಿವೃದ್ಧಿಪಡಿಸುವ ಬಗ್ಗೆ ಯೋಚಿಸುತ್ತಿದೆ. ಎರಡು ಅಂತರರಾಷ್ಟ್ರೀಯ ಟಿ20 ತಂಡಗಳನ್ನು ರಚಿಸುವುದು ಇದರ ಉದ್ದೇಶವಾಗಿದೆ. ಬಿಸಿಸಿಐನ ಈ ಯೋಜನೆಯನ್ನು ಐಪಿಎಲ್ 2026 ರ ನಂತರ ಜಾರಿಗೆ ತರಲಿದ್ದು, ಇದರಿಂದ ಹೆಚ್ಚಿನ ಆಟಗಾರರಿಗೆ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಗುತ್ತದೆ.

2 ತಂಡಗಳನ್ನು ಕಣಕ್ಕಿಳಿಸಲು ಕಾರಣವೇನು?

ಈಗ ಪ್ರಶ್ನೆ ಏನೆಂದರೆ, ಈ ಯೋಜನೆಯ ಹಿಂದಿನ ಬಿಸಿಸಿಐ ಉದ್ದೇಶವೇನು?. ಈ ವರ್ಷದ ಕೊನೆಯಲ್ಲಿ ಭಾರತವು ಏಷ್ಯನ್ ಕ್ರೀಡಾಕೂಟ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಬಿಸಿಸಿಐ ಇದನ್ನು ಗಮನದಲ್ಲಿಟ್ಟುಕೊಂಡು ಎರಡು ತಂಡಗಳನ್ನು ಕಟ್ಟಲು ಗಮನಹರಿಸುತ್ತಿದೆ. ಈ ವರ್ಷದ ಏಷ್ಯನ್ ಕ್ರೀಡಾಕೂಟ ಮತ್ತು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ಏಕಕಾಲದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಆದ್ದರಿಂದ, ನಾವು ಎರಡು ತಂಡಗಳನ್ನು ಕಣಕ್ಕಿಳಿಸುವತ್ತ ಗಮನಹರಿಸುತ್ತಿದ್ದು, 30 ರಿಂದ 35 ಕ್ರಿಕೆಟಿಗರ ಗುಂಪನ್ನು ಅಭಿವೃದ್ಧಿಪಡಿಸುವುದು ಈಗ ಮುಖ್ಯವಾಗಿದೆ ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಯಾವ ಆಟಗಾರರಿಗೆ ಅವಕಾಶ ಸಿಗಬಹುದು?

ಈಗ ಪ್ರಶ್ನೆ ಏನೆಂದರೆ, 30-35 ಆಟಗಾರರ ಗುಂಪಿನಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು?. ಈ ಪಟ್ಟಿಯಲ್ಲಿ ಯಾವ ಆಟಗಾರನ ಹೆಸರು ಇರಲಿದೆ ಎಂಬುದನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಲಾಗಿಲ್ಲ. ಆದಾಗ್ಯೂ, ಐಪಿಎಲ್ 2026 ರಲ್ಲಿ ಅವರ ಪ್ರದರ್ಶನ ಮತ್ತು ಪ್ರಸ್ತುತ ಫಾರ್ಮ್ ಅನ್ನು ಪರಿಗಣಿಸಿ, ಕೆಲವು ಆಟಗಾರರ ಹೆಸರುಗಳು ಖಂಡಿತವಾಗಿಯೂ ಚರ್ಚೆಗೆ ಬರಲು ಪ್ರಾರಂಭಿಸಿವೆ. ಬ್ಯಾಟಿಂಗ್‌ನಲ್ಲಿ, ವೈಭವ್ ಸೂರ್ಯವಂಶಿ, ಪ್ರಿಯಾಂಶ್ ಆರ್ಯ, ಯಶಸ್ವಿ ಜೈಸ್ವಾಲ್ ಮತ್ತು ರಜತ್ ಪಾಟಿದಾರ್ ಅವರಂತಹ ಆಟಗಾರರು ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಬೌಲಿಂಗ್‌ನಲ್ಲಿ, ಅಶೋಕ್ ಶರ್ಮಾ, ಕಾರ್ತಿಕ್ ತ್ಯಾಗಿ ಮತ್ತು ರವಿ ಬಿಷ್ಣೋಯ್ ಅವರಂತಹ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ. ಧ್ರುವ್ ಜುರೆಲ್ ಅವರನ್ನು ವಿಕೆಟ್ ಕೀಪಿಂಗ್ ವಿಭಾಗದಲ್ಲಿ ಸೇರಿಸಬಹುದು. ಹಾಗೆಯೇ ಶಶಾಂಕ್ ಸಿಂಗ್ ಮತ್ತು ಅನುಕುಲ್ ರಾಯ್ ಅವರಂತಹ ಹೆಸರುಗಳು ಆಲ್-ರೌಂಡರ್ ಪಟ್ಟಿಯಲ್ಲಿ ಕಾಣಿಸಿಕೊಳ್ಳಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Mon, 20 April 26

Follow Us
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!