ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಸಂಗೀತ ಸಮಾರಂಭ; ಸಚಿನ್, ರಜನಿಕಾಂತ್, ಅಮಿತಾಬ್​ ಉಪಸ್ಥಿತಿ..!

India vs Pakistan, ODI World Cup 2023: ಅಕ್ಟೋಬರ್​ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಆರಂಭವಾಗುವುದಕ್ಕೂ ಮುನ್ನ ಸಂಗೀತ ಸಮಾರಂಭವನ್ನು ನಡೆಸಲು ಬಿಸಿಸಿಐ ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಸಂಗೀತ ಸಮಾರಂಭ; ಸಚಿನ್, ರಜನಿಕಾಂತ್, ಅಮಿತಾಬ್​ ಉಪಸ್ಥಿತಿ..!
ಸಂಗೀತ ಸಮಾರಂಭImage Credit source: insidesport
Follow us
|

Updated on:Oct 11, 2023 | 12:13 PM

ಏಕದಿನ ವಿಶ್ವಕಪ್​ನಲ್ಲಿ (ICC world cup 2023)​ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ್ದ ಕಾರಣ ನಿರಾಸೆಗೊಳಗಾಗಿದ್ದ ಅಭಿಮಾನಿಗಳಿಗೆ ಈಗ ಸಂತಸದ ಸುದ್ದಿಯೊಂದು ಸಿಕ್ಕಿದೆ. ಇದೇ ಅಕ್ಟೋಬರ್​ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi stadium) ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನ ಆರಂಭವಾಗುವುದಕ್ಕೂ ಮುನ್ನ ಸಂಗೀತ ಸಮಾರಂಭವನ್ನು (Musical Ceremony) ನಡೆಸಲು ಬಿಸಿಸಿಐ ತೀರ್ಮಾನಿಸಿದೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಭಾರತ-ಪಾಕಿಸ್ತಾನ  ಪಂದ್ಯದ ವೇಳೆ ಅಹಮದಾಬಾದ್‌ನಲ್ಲಿ ಬಿಸಿಸಿಐ, ಅಭಿಮಾನಿಗಳಿಗೆ ಸಂಗೀತ ಸಮಾರಂಭವನ್ನು ಆಯೋಜಿಸಲಿದೆ. ಈ ಸಮಯದಲ್ಲಿ ಲಘು ಪ್ರದರ್ಶನ ಮತ್ತು ನೃತ್ಯ ಪ್ರದರ್ಶನಗಳು ಇರಲ್ಲಿದ್ದು, ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.

ಲೆಜೆಂಡ್​ಗಳ ಉಪಸ್ಥಿತಿ

ವಾಸ್ತವವಾಗಿ ವಿಶ್ವಕಪ್ ಆರಂಭಕ್ಕೂ ಮುನ್ನ ಬಿಸಿಸಿಐ, ಸಚಿನ್ ತೆಂಡೂಲ್ಕರ್, ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿತ್ತು. ಹೀಗಾಗಿ ಈ ಮೂವರಿಗೆ ಉದ್ಘಾಟನಾ ಸಮಾರಂಭಕ್ಕೆ  ಆಹ್ವಾನ ನೀಡಲಾಗಿದೆ. ವರದಿಗಳ ಪ್ರಕಾರ, ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ ಪಂದ್ಯ ಪ್ರಾರಂಭವಾಗುವ ಮೊದಲು ಸಂಗೀತ ಸಮಾರಂಭ ನಡೆಯಲಿದೆ. ಈ ಪಂದ್ಯವನ್ನು ವೀಕ್ಷಿಸಲು ಗೋಲ್ಡನ್ ಟಿಕೆಟ್ ಹೊಂದಿರುವವರು ಕ್ರೀಡಾಂಗಣದಲ್ಲಿ ಹಾಜರಿರುತ್ತಾರೆ ಎಂದು ಗುಜರಾತ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಅನಿಲ್ ಪಟೇಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Asia cup 2022: ‘ಟೆನ್ಷನ್ ತೆಗೆದುಕೊಳ್ಳಬೇಡಿ, ಭಾರತ- ಪಾಕಿಸ್ತಾನ ಫೈನಲ್ ಆಡಲಿವೆ’; ರೋಹಿತ್ ಶರ್ಮಾ

25 ಪಾಕಿಸ್ತಾನಿ ಮಾಧ್ಯಮಗಳು

ಇವರಲ್ಲದೆ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಹಲವು ವಿಐಪಿಗಳು ಆಗಮಿಸುವ ಸಾಧ್ಯತೆ ಇದೆ. ಅಂದು ಬಾಲಿವುಡ್ ಸ್ಟಾರ್ಸ್ ಈವೆಂಟ್ ಮಧ್ಯಾಹ್ನ 12:40 ಕ್ಕೆ ಪ್ರಾರಂಭವಾಗಿ 1:10 ಕ್ಕೆ ಕೊನೆಗೊಳ್ಳುತ್ತದೆ. ಹಾಗೆಯೇ ಭಾರತ-ಪಾಕಿಸ್ತಾನ ಪಂದ್ಯಕ್ಕೆ 20 ರಿಂದ 25 ಪಾಕಿಸ್ತಾನಿ ಮಾಧ್ಯಮಗಳ ಪ್ರತಿನಿಧಿಗಳು ಬರಲಿದ್ದಾರೆ. ಇದಕ್ಕಾಗಿ ಅವರಿಗೆ ಅನುಮತಿ ನೀಡಲಾಗಿದ್ದು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಪಟೇಲ್ ಹೇಳಿದ್ದಾರೆ. ಈ ಪಂದ್ಯಕ್ಕೆ ಪಿಸಿಬಿಯ ಕೆಲವು ಅಧಿಕಾರಿಗಳು ಕೂಡ ಬರುವ ಸಾಧ್ಯತೆ ಇದೆ.

ಭಾರತದ್ದೇ ಮೇಲುಗೈ

ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪೈಪೋಟಿ ಇಡೀ ವಿಶ್ವದ ಗಮನ ಸೆಳೆಯುತ್ತಿರುವುದು ಇದೇ ಮೊದಲಲ್ಲ. ಈ ಉಭಯ ತಂಡಗಳ ಕಾಳಗವನ್ನು ನೋಡಲು ಇಡೀ ವಿಶ್ವವೇ ಎದುರು ನೋಡುತ್ತಿರುತ್ತದೆ. ಹೀಗಾಗಿ ಈ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ. ಇನ್ನು ಏಕದಿನ ವಿಶ್ವಕಪ್‌ನಲ್ಲಿ ಇದುವರೆಗೆ ನಡೆದ ಪಂದ್ಯಗಳಲ್ಲಿ ಭಾರತವೇ ಮೇಲುಗೈ ಸಾಧಿಸಿದ್ದು, ಈ ಎರಡು ತಂಡಗಳ ನಡುವೆ ಇದುವರೆಗೆ ನಡೆದ ಏಳು ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಗೆದ್ದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Wed, 11 October 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ