AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 2ನೇ ಟೆಸ್ಟ್ ಪಂದ್ಯಕ್ಕೂ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅನುಮಾನ

Washington Sundar injury news: ಶ್ರೀಲಂಕಾ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗಾಯದ ಸಮಸ್ಯೆ ತೀವ್ರವಾಗಿದೆ. ಜಸ್ಪ್ರೀತ್ ಬುಮ್ರಾ ಮತ್ತು ಸಾಯಿ ಸುದರ್ಶನ್ ಈಗಾಗಲೇ ಹೊರಗುಳಿದಿದ್ದು, ಈಗ ವಾಷಿಂಗ್ಟನ್ ಸುಂದರ್ ಕೂಡ ಸರಣಿಯಿಂದ ಹೊರಬೀಳುವ ಸಾಧ್ಯತೆಯಿದೆ. ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳದ ಸುಂದರ್ ವಿಚಾರದಲ್ಲಿ ಬಿಸಿಸಿಐ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಲು ಸಿದ್ಧವಿಲ್ಲ. ಹೀಗಾಗಿ ಅವರಿಗೆ ಮತ್ತಷ್ಟು ಸಮಯ ನೀಡಲು ಬಿಸಿಸಿಐ ಚಿಂತಿಸಿದೆ.

IND vs SL: 2ನೇ ಟೆಸ್ಟ್ ಪಂದ್ಯಕ್ಕೂ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅನುಮಾನ
Washington Sundar
ಪೃಥ್ವಿಶಂಕರ
|

Updated on: Aug 12, 2026 | 4:55 PM

Share

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗುವ ಮೊದಲೇ ಭಾರತ ತಂಡಕ್ಕೆ (Team India) ಆಘಾತದ ಮೇಲೆ ಆಘಾತ ಎದುರಾಗುತ್ತಿದೆ. ಗಾಯದಿಂದಾಗಿ ಟೀಂ ಇಂಡಿಯಾ ಈಗಾಗಲೇ ಇಬ್ಬರು ಆಟಗಾರರನ್ನು ಕಳೆದುಕೊಂಡಿದೆ. ಶ್ರೀಲಂಕಾಕ್ಕೆ ಆಗಮಿಸುವ ಮೊದಲೇ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಯುವ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಅವರನ್ನು ಪ್ರವಾಸದಿಂದ ಹೊರಗಿಡಲಾಗಿತ್ತು. ಇದೀಗ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಸ್ಪಿನ್-ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ( Washington Sundar) ಕೂಡ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆಗಳಿಲ್ಲ ಎಂದು ವರದಿಯಾಗಿದೆ. ಅಂದರೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಸುಂದರ್ ಕೂಡ ಈ ಸರಣಿಯಿಂದ ಹೊರುಗಳಿಯಲಿದ್ದಾರೆ.

ಸುಂದರ್ ಸರಣಿಯಿಂದ ಔಟ್

ವಾಷಿಂಗ್ಟನ್ ಸುಂದರ್ ಕೂಡ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಅವರನ್ನು ಮೊದಲ ಟೆಸ್ಟ್​ನಿಂದ ಹೊರಗಿಟ್ಟು, ಆಗಸ್ಟ್ 23 ರಿಂದ ಕೊಲಂಬೊದಲ್ಲಿ ನಡೆಯುವ ಎರಡನೇ ಟೆಸ್ಟ್‌ ಪಂದ್ಯಕ್ಕೆ ಮಾತ್ರ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೀಗ ಸುಂದರ್ ಎರಡನೇ ಟೆಸ್ಟ್‌ ವೇಳೆಗೆ ಫಿಟ್ ಆಗುವ ಸಾಧ್ಯತೆಗಳಿಲ್ಲ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ತಂಡದ ಆಡಳಿತ ಮಂಡಳಿ ಸುಂದರ್ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವ ಇರಾದೆಯಲ್ಲಿಲ್ಲ. ಹೀಗಾಗಿ ಸುಂದರ್​ಗೆ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಕೊಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಅಂದಿನಿಂದ ಚೇತರಿಕೆಯ ಹಾದಿಯಲ್ಲಿರುವ ಸುಂದರ್ ಅವರನ್ನು ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಆದರೆ, ಅವರನ್ನು ಎರಡನೇ ಟೆಸ್ಟ್‌ಗೆ ಆಯ್ಕೆ ಮಾಡಲಾಗಿದೆ. ಆದರೀಗ ಸುಂದರ್ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅಲ್ಲದೆ ಸುಂದರ್ ಅವರನ್ನು ಇಷ್ಟು ಬೇಗ ತಂಡದಲ್ಲಿ ಆಡಿಸಲು ಬಿಸಿಸಿಐಗೆ ಇಷ್ಟವಿಲ್ಲ. ಏಕೆಂದರೆ ಈ ಹಿಂದೆ ಇಂಜುರಿಯಿಂದ ಚೇತರಿಸಿಕೊಂಡು ತಂಡವನ್ನು ಸೇರಿಕೊಂಡಿದ್ದ ಆಟಗಾರರು ಕೇವಲ ಒಂದೆರಡು ಪಂದ್ಯಗಳನ್ನು ಆಡಿದ ಬಳಿಕ ಮತ್ತೆ ಗಾಯಕ್ಕೆ ತುತ್ತಾಗಿದ್ದರು. ಇದು ಬಿಸಿಸಿಐಗೆ ಸಾಕಷ್ಟು ಮುಜುಗರವನ್ನುಂಟು ಮಾಡಿತ್ತು.

IND vs SL: ಟೆಸ್ಟ್‌ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ಟೀಂ ಇಂಡಿಯಾ

ಬಿಸಿಸಿಐ ಆತುರ ಪಡದಿರಲು ಕಾರಣವಿದು

ಈ ಹಿನ್ನೆಲೆಯಲ್ಲಿ, ಸುಂದರ್ ಪೂರ್ಣ ಫಿಟ್ನೆಸ್ ಮರಳಿ ಪಡೆದು ಮೈದಾನಕ್ಕೆ ಇಳಿಯುವ ಮೊದಲು ಅವರನ್ನು ಎಲ್ಲಾ ರೀತಿಯಲ್ಲೂ ಪರೀಕ್ಷಿಸಲು ಬಿಸಿಸಿಐ ಚಿಂತಿಸಿದೆ. ಇದರಿಂದ ಸುಂದರ ತಂಡಕ್ಕೆ ಮರಳಿದ ತಕ್ಷಣ ಗಾಯಗೊಳ್ಳುವುದನ್ನು ತಡೆಯುವುದು ಇದರ ಉದ್ದೇಶವಾಗಿದೆ. ಹಾಗೆಯೇ ಆಟಗಾರರ ಫಿಟ್ನೆಸ್ ವಿಚಾರದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ವಿರುದ್ಧ ಎದ್ದಿರುವ ಅನುಮಾನಗಳನ್ನು ಶಮನಗೊಳಿಸುವುದು ಬಿಸಿಸಿಐ ಯೋಜನೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us