AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೊರೊನಾ ಪಾಸಿಟಿವ್: ಐಸೋಲೇಷನ್ ದಾದಾ

Sourav Ganguly COVID Positive : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ, ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ.

Sourav Ganguly: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೊರೊನಾ ಪಾಸಿಟಿವ್: ಐಸೋಲೇಷನ್ ದಾದಾ
Sourav Ganguly
TV9 Web
| Updated By: Vinay Bhat|

Updated on:Dec 28, 2021 | 10:26 AM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ, ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಸದ್ಯ ಇವರು ಐಸೋಲೇಷನ್​ನಲ್ಲಿದ್ದಾರೆ. ಈ ಬಗ್ಗೆ ಪಿಟಿಐ ವರದಿ ಮಾಡಿದ್ದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರಿಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರೋದಾಗಿ ಹೇಳಿದೆ. ಇತ್ತೀಚೆಗಷ್ಟೆ ಸೌರವ್ ಹಿರಿಯ ಸಹೋದರ ಮತ್ತು ಬೆಂಗಾಲ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಾಶೀಷ್ ಗಂಗೂಲಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿತ್ತು.

ಗಂಗೂಲಿ ಅವರಿಗೆ ಕೋವಿಡ್ ವೈರಸ್‌ನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಬಂದಿದ್ದು ವರದಿ ಪಾಸಿಟಿವ್ ಕಂಡುಬಂದಿದೆ. ಇದು ಎರಡನೇ ಬಾರಿಗೆ ಗಂಗೂಲಿಗೆ ಕೊರೋನಾ ಸೋಂಕು ತಗುಲಿರುವುದು. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ತಲೆ ಸುತ್ತು, ವಾಕರಿಕೆ ಇರುವ ಕಾರಣ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇಶಾದ್ಯಂತ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿದ್ದರೂ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಅದರಲ್ಲೂ ಒಮೈಕ್ರಾನ್ ರೂಪಾಂತರಿಯ ಆತಂಕ ಈಗ ವಿಶ್ವದೆಲ್ಲೆಡೆಯಿದ್ದು ಭಾರತಲ್ಲಿಯೂ ಒಮಿಕ್ರಾನ್ ರೂಪಾಂತರಿ ವೈರಸ್ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಅತಂಕವಿದೆ.

India vs South Africa: ಮೂರನೇ ದಿನಕ್ಕೂ ಇದೆಯೇ ಮಳೆಯ ಕಾಟ?: ಸೆಂಚುರಿಯನ್ ವಾತಾವರಣ ಹೇಗಿದೆ?

(BCCI president Sourav Ganguly has tested positive for COVID-19)

Published On - 9:57 am, Tue, 28 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ