AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಶಾಕಿಂಗ್ ನಿರ್ಧಾರ: ಸ್ಟಾರ್ ಆಲ್​ರೌಂಡರ್​ನನ್ನೇ ಕೈ ಬಿಟ್ರಾ ಟೀಮ್ ಇಂಡಿಯಾ..?

India vs Pakistan: ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.

IND vs PAK: ಶಾಕಿಂಗ್ ನಿರ್ಧಾರ: ಸ್ಟಾರ್ ಆಲ್​ರೌಂಡರ್​ನನ್ನೇ ಕೈ ಬಿಟ್ರಾ ಟೀಮ್ ಇಂಡಿಯಾ..?
Team India
TV9 Web
| Updated By: ಝಾಹಿರ್ ಯೂಸುಫ್|

Updated on:Aug 27, 2022 | 8:24 PM

Share

Asia Cup 2022: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೊಲ್ಟೇಜ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ದುಬೈ ಇಂಟರ್​ನ್ಯಾಷನ್ ಮೈದಾನದಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಪ್ರಶ್ನೆ. ಏಕೆಂದರೆ ಬಿಸಿಸಿಐ ಹಂಚಿಕೊಂಡಿರುವ ಫೋಟೋವೊಂದರಲ್ಲಿ 11 ಆಟಗಾರರನ್ನು ಹೆಸರಿಸಲಾಗಿದೆ.

ಇದೇ ಆಟಗಾರರು ಪಾಕ್ ವಿರುದ್ದ ಕೂಡ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಅಂದರೆ ಬಿಸಿಸಿಐ ಟೀಮ್ ಇಂಡಿಯಾದ 11 ಆಟಗಾರರು ಅಭ್ಯಾಸ ಮಾಡುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಮೂಲಕ ಪ್ಲೇಯಿಂಗ್ ಇಲೆವೆನ್​ನ ಸುಳಿವು ನೀಡಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ

ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.

ಆಲ್​ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದರೆ, 7ನೇ ಕ್ರಮಾಂಕದಲ್ಲಿ ಫಿನಿಶರ್​ ಪಾತ್ರದಲ್ಲಿ ದಿನೇಶ್ ಕಾರ್ತಿಕ್ ಬ್ಯಾಟ್ ಬೀಸಲಿದ್ದಾರೆ.

ಹಾಗೆಯೇ ಬೌಲರ್​ಗಳಾಗಿ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಹಾಗೂ ಯುಜ್ವೇಂದ್ರ ಚಹಾಲ್ ಅವರನ್ನು ಹೆಸರಿಸಲಾಗಿದೆ. ಈ ಮೂಲಕ 7 ಬ್ಯಾಟ್ಸ್​ಮನ್​ಗಳು ಹಾಗೂ ನಾಲ್ವರು ಬೌಲರ್​ಗಳನ್ನು ಕಣಕ್ಕಿಳಿಸುವ ಸುಳಿವು ನೀಡಿದೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್.

ಆದರೆ ಟೀಮ್ ಇಂಡಿಯಾದ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ಫೋಟೋದಲ್ಲಿ ಆಲ್​ರೌಂಡರ್ ರವೀಂದ್ರ ಜಡೇಜಾ ಇಲ್ಲ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಜಡೇಜಾ ಅವರನ್ನು ಪ್ಲೇಯಿಂಗ್ ಇಲೆವೆನ್​ಗೆ ಪರಿಗಣಿಸಲ್ವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಟೀಮ್ ಇಂಡಿಯಾ ಮೂವರು ಪರಿಪೂರ್ಣ ವೇಗಿಗಳೊಂದಿಗೆ ಕಣಕ್ಕಿಳಿಯಬೇಕಿದ್ದರೆ ಓರ್ವ ಆಲ್​ರೌಂಡರ್ ಅಥವಾ ವಿಕೆಟ್ ಕೀಪರ್ ಹೊರಗುಳಿಯಬೇಕಾಗುತ್ತದೆ. ಅದರಂತೆ ಇದೀಗ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ಪ್ಲೇಯಿಂಗ್ ಇಲೆವೆನ್​​ನಲ್ಲಿ ಪರಿಗಣಿಸಿ, ರವೀಂದ್ರ ಜಡೇಜಾ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ.

ಆದರೆ ಟೀಮ್ ಇಂಡಿಯಾ ಪರ ಡೆತ್ ಓವರ್​ಗಳಲ್ಲಿ ಸ್ಪೋಟಕ ಬ್ಯಾಟ್​ ಬೀಸಬಲ್ಲ, ಅತ್ಯುತ್ತಮ ಫೀಲ್ಡಿಂಗ್ ಮಾಡಬಲ್ಲ, ಸ್ಪಿನ್ ಮೋಡಿ ಮೂಲಕ ಎದುರಾಳಿಗಳನ್ನು ಕಟ್ಟಿಹಾಕಬಲ್ಲ ರವೀಂದ್ರ ಜಡೇಜಾರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಟ್ಟರೆ ಅದು ಎದುರಾಳಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಡೌಟೇ ಇಲ್ಲ ಎನ್ನಬಹುದು.

ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋದಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್​ ಇಲೆವೆನ್:

  1. ರೋಹಿತ್ ಶರ್ಮಾ
  2. ಕೆಎಲ್ ರಾಹುಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ಹಾರ್ದಿಕ್ ಪಾಂಡ್ಯ
  6. ರಿಷಭ್ ಪಂತ್
  7. ದಿನೇಶ್ ಕಾರ್ತಿಕ್
  8. ಭುವನೇಶ್ವರ್ ಕುಮಾರ್
  9. ಯುಜ್ವೇಂದ್ರ ಚಹಾಲ್
  10. ಅವೇಶ್ ಖಾನ್
  11. ಅರ್ಷದೀಪ್ ಸಿಂಗ್

Published On - 6:32 pm, Sat, 27 August 22

ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ