AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಏಕದಿನ ವಿಶ್ವಕಪ್‌ಗಾಗಿ ಕ್ರಿಕೆಟ್ ದೇವರಿಗೆ ಗೋಲ್ಡನ್ ಟಿಕೆಟ್ ನೀಡಿದ ಬಿಸಿಸಿಐ

ICC ODI World Cup 2023: ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯಡಿಯಲ್ಲಿ ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಈ ಗೋಲ್ಡನ್ ಟಿಕೆಟ್ ನೀಡಿದ್ದ ಬಿಸಿಸಿಐ, ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ.

World Cup 2023: ಏಕದಿನ ವಿಶ್ವಕಪ್‌ಗಾಗಿ ಕ್ರಿಕೆಟ್ ದೇವರಿಗೆ ಗೋಲ್ಡನ್ ಟಿಕೆಟ್ ನೀಡಿದ ಬಿಸಿಸಿಐ
ಸಚಿನ್ ತೆಂಡೂಲ್ಕರ್, ಜಯ್​ ಶಾ
ಪೃಥ್ವಿಶಂಕರ
|

Updated on:Sep 08, 2023 | 12:15 PM

Share

ಮುಂದಿನ ತಿಂಗಳಿನಿಂದ ಅಂದರೆ ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ (ICC ODI World Cup 2023) ಆರಂಭವಾಗುತ್ತಿದೆ. ಕ್ರಿಕೆಟ್​ನ ಈ ಮಹಾ ಸಂಭ್ರಮಕ್ಕೆ ಬಿಸಿಸಿಐ (BCCI) ಎಲ್ಲಾ ರೀತಿಯ ತಯಾರಿಯಲ್ಲಿ ನಿರತವಾಗಿದೆ. ಈ ವಿಶ್ವ ಸಮರ ಭಾರತದ 10 ಸ್ಥಳಗಳಲ್ಲಿ ನಡೆಯಲ್ಲಿದ್ದು, ಈ ಐಸಿಸಿ ಈವೆಂಟ್​ನಲ್ಲಿ 10 ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಈ ವಿಶ್ವಕಪ್​ಗೆ ಆತಿಥ್ಯವಹಿಸುತ್ತಿದೆ. ಹೀಗಾಗಿ ಈ ಪಂದ್ಯಾವಳಿಯನ್ನು ಸ್ಮರಣೀಯಗೊಳಿಸುವ ಸಲುವಾಗಿ ಬಿಸಿಸಿಐ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಅದರಲ್ಲಿ ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯೂ ಒಂದಾಗಿದ್ದು, ಈ ಯೋಜನೆಯಡಿಯಲ್ಲಿ ಭಾರತದ ಹಲವು ಸಾಧಕರಿಗೆ ಈ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan ) ಅವರಿಗೆ ಈ ಗೋಲ್ಡನ್ ಟಿಕೆಟ್ ನೀಡಿದ್ದ ಬಿಸಿಸಿಐ, ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ.

ಅಮಿತಾಭ್ ಬಚ್ಚನ್ ಅವರಿಗೂ ಗೋಲ್ಡನ್ ಟಿಕೆಟ್

ಈ ಮಾಹಿತಿಯನ್ನು ಬಿಸಿಸಿಐ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಭಾರತೀಯ ಕ್ರಿಕೆಟ್ ಐಕಾನ್‌ಗೆ ವಿಶೇಷ ಟಿಕೆಟ್‌ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಸಚಿನ್ ತೆಂಡೂಲ್ಕರ್ ಅವರಿಗೆ ವಿಶ್ವಕಪ್ ಗೋಲ್ಡನ್ ಟಿಕೆಟ್ ನೀಡಿರುವ ಫೋಟೋವನ್ನು ಬಿಸಿಸಿಐ ಹಂಚಿಕೊಂಡಿದೆ. ಈ ವಾರದ ಆರಂಭದಲ್ಲಿ ಬಿಸಿಸಿಐ, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ಪಂದ್ಯಾವಳಿಗೆ ಆಹ್ವಾನ ನೀಡಿತ್ತು.

2015 ರ ವಿಶ್ವಕಪ್​ನ ರಾಯಭಾರಿಯಾಗಿದ್ದ ಸಚಿನ್

ಇನ್ನು 2011ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಸಚಿನ್ ತೆಂಡೂಲ್ಕರ್ ಅವರು 2015 ರ ವಿಶ್ವಕಪ್​ನ ರಾಯಭಾರಿ ಕೂಡ ಆಗಿದ್ದರು. ಹಾಗೆಯೇ ನಾಲ್ಕು ವರ್ಷಗಳ ನಂತರ ನಡೆದ 2019 ರ ವಿಶ್ವಕಪ್ ಸೆಮಿಫೈನಲ್‌ ಪಂದ್ಯದ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದ ತೆಂಡೂಲ್ಕರ್, ಆ  ಆವೃತ್ತಿಯ ರನ್ನರ್ ಅಪ್ ತಂಡವಾಗಿದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್‌ಗೆ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು ನೀಡಿದ್ದರು.

ಸಚಿನ್ ತೆಂಡೂಲ್ಕರ್ ಮನೆಯ ಮುಂದೆ ಶಾಸಕರಿಂದ ಪ್ರತಿಭಟನೆ! ಕಾರಣವೇನು ಗೊತ್ತಾ?

ಅಕ್ಟೋಬರ್ 5 ರಿಂದ ವಿಶ್ವಕಪ್ ಆರಂಭ

ಈ ಬಾರಿಯ ವಿಶ್ವಕಪ್ ಅಕ್ಟೋಬರ್ 5 ರಂದು ಅಹಮದಾಬಾದ್‌ನಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿಯ ರನ್ನರ್ ಅಪ್ ತಂಡವಾಗಿದ್ದ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯಾವಳಿಯು ರೌಂಡ್-ರಾಬಿನ್ ಮಾದರಿಯಲ್ಲಿ ನಡೆಯಲಿದ್ದು, ಲೀಗ್ ಹಂತದಲ್ಲಿ ಎಲ್ಲಾ 10 ತಂಡಗಳು ಒಮ್ಮೆ ಮುಖಾಮುಖಿಯಾಗಲಿವೆ. ಲೀಗ್ ಹಂತದಲ್ಲಿ ಅಗ್ರ ನಾಲ್ಕು ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ಗೇರಲಿವೆ. ಸೆಮಿಫೈನಲ್​ನಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಹೋರಾಡಲಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Fri, 8 September 23

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!