AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಮುಗಿದ ಕಥೆ: ಶೀಘ್ರದಲ್ಲೇ ವಿರಾಟ್ ಕೊಹ್ಲಿಗೂ ಗೇಟ್ ಪಾಸ್

India vs Australia: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ 6.20 ಸರಾಸರಿಯಲ್ಲಿ ರನ್ ಕಲೆಹಾಕಿದರೆ, ವಿರಾಟ್ ಕೊಹ್ಲಿ 8 ಏಳು ಇನಿಂಗ್ಸ್​ಗಳಲ್ಲಿ ಕೇವಲ 11.25 ರ ಸರಾಸರಿಯಲ್ಲಿ ರನ್​ಗಳಿಸಿದ್ದಾರೆ. ಅತ್ತ ಕಳಪೆ ಫಾರ್ಮ್​ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಸಿಡ್ನಿ ಟೆಸ್ಟ್​ನಿಂದ ಕೈ ಬಿಡಲಾಗಿದೆ. ಇದರ ಬೆನ್ನಲ್ಲೇ ಸತತ ವೈಫಲ್ಯ ಅನುಭವಿಸುತ್ತಿರುವ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಡಿಸಲು ಬಿಸಿಸಿಐ ನಿರ್ಧರಿಸಿದೆ.

ರೋಹಿತ್ ಶರ್ಮಾ ಮುಗಿದ ಕಥೆ: ಶೀಘ್ರದಲ್ಲೇ ವಿರಾಟ್ ಕೊಹ್ಲಿಗೂ ಗೇಟ್ ಪಾಸ್
Rohit Sharma - Virat Kohli
ಝಾಹಿರ್ ಯೂಸುಫ್
|

Updated on: Jan 05, 2025 | 1:54 PM

Share

3 ಪಂದ್ಯಗಳು, 5 ಇನಿಂಗ್ಸ್​ 31 ರನ್​ಗಳು. ಇದು ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಲೆಹಾಕಿದ ಒಟ್ಟು ರನ್​ಗಳು. 6.20 ಸರಾಸರಿಯಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿರುವ ಕಾರಣ ಇದೀಗ 5ನೇ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಕೈ ಬಿಡಲಾಗಿತ್ತು. ಅಲ್ಲಿಗೆ ಹಿಟ್​ಮ್ಯಾನ್​ನ ಟೆಸ್ಟ್ ಕೆರಿಯರ್ ಖತಂ ಆಗುವುದು ಬಹುತೇಕ ಖಚಿತವಾಗಿದೆ. ಈ ಕೆರಿಯರ್ ಖತಂ ಸುದ್ದಿ ಬೆನ್ನಲ್ಲೇ ನಾನು ಸದ್ಯ ನಿವೃತ್ತಿ ನೀಡುತ್ತಿಲ್ಲ ಎಂದು ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಆದರೆ ಅವರನ್ನು ಮುಂಬರುವ ಟೆಸ್ಟ್​ ಸರಣಿ ಆಯ್ಕೆ ಮಾಡುವುದು ಅನುಮಾನ. ಇದರ ಜೊತೆಗೆ ವಿರಾಟ್ ಕೊಹ್ಲಿ ಕೂಡ ಬಿಸಿ ಮುಟ್ಟಿಸಲು ಬಿಸಿಸಿಐ ನಿರ್ಧರಿಸಿದೆ.

ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ನೀವು ಭಾರತ ಟೆಸ್ಟ್ ತಂಡದ ಭಾಗವಾಗುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ರೋಹಿತ್ ಶರ್ಮಾಗೆ ತಿಳಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಚರ್ಚಿಸಲೆಂದೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಮೆಲ್ಬೋರ್ನ್​ಗೆ ತೆರಳಿದ್ದರು ಎಂದು ವರದಿಯಾಗಿದೆ.

ಅಜಿತ್ ಅಗರ್ಕರ್ ಅವರ ಈ ಭೇಟಿ ಬೆನ್ನಲ್ಲೇ ರೋಹಿತ್ ಶರ್ಮಾ ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ನಿರ್ಧಾರದೊಂದಿಗೆ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ಬಿಸಿಸಿಐ ಮೂಲಗಳ ಪ್ರಕಾರ, ಭಾರತ ತಂಡ ಮುಂದಿನ ಟೆಸ್ಟ್​ ಸರಣಿಗೆ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡುವುದಿಲ್ಲ. ಅಲ್ಲಿಗೆ ವೈಟ್ ಜೆರ್ಸಿಯಲ್ಲಿ ಹಿಟ್​ಮ್ಯಾನ್ ಯುಗಾಂತ್ಯ ಎಂದೇ ಹೇಳಬಹುದು.

ರೋಹಿತ್ ಶರ್ಮಾ ವಿಷಯದಲ್ಲಿ ಕಠಿಣ ನಿರ್ಧಾರ ತೆಗೆದುಕೊಂಡಿರುವ ಬಿಸಿಸಿಐ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಸಿಡ್ನಿ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿಯೊಂದಿಗೆ ಟೀಮ್ ಇಂಡಿಯಾ ಆಯ್ಕೆ ಸಮಿತಿ ಚರ್ಚಿಸಲಿದ್ದು, ಆ ಬಳಿಕ ನಿವೃತ್ತಿಗೆ ಗಡುವು ವಿಧಿಸುವ ಸಾಧ್ಯತೆಯಿದೆ.

ಅದರಂತೆ ಈ ವರ್ಷ ನಡೆಯಲಿರುವ 10 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿಯ ಟೆಸ್ಟ್ ಕೆರಿಯರ್​ನ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು. ಅದಕ್ಕೂ ಮುನ್ನ ಕಿಂಗ್ ಕೊಹ್ಲಿ ತನ್ನ ಭರ್ಜರಿ ಫಾರ್ಮ್ ಅನ್ನು ಪ್ರದರ್ಶಿಸಲೇಬೇಕು.

ಹೀಗಾಗಿ ಮುಂಬರುವ ಸರಣಿಗಳು ವಿರಾಟ್ ಕೊಹ್ಲಿ ಪಾಲಿಗೆ ಅಗ್ನಿ ಪರೀಕ್ಷೆ ಎನ್ನಬಹುದು. ಈ ಅಗ್ನಿ ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕೆರಿಯರ್​ ಅನ್ನು ವಿಸ್ತರಿಸಲಿದ್ದಾರಾ ಅಥವಾ ಶೀಘ್ರದಲ್ಲೇ ಗುಡ್ ಬೈ ಹೇಳಲಿದ್ದಾರಾ ಕಾದು ನೋಡಬೇಕಿದೆ.

ವಿರಾಟ್ ಕೊಹ್ಲಿಯ ಪ್ರಸ್ತುತ ಪ್ರದರ್ಶನ:

ಈ ಬಾರಿಯ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ವಿರಾಟ್ ಕೊಹ್ಲಿ 5 ಪಂದ್ಯಗಳನ್ನಾಡಿದ್ದಾರೆ. ಈ ಐದು ಮ್ಯಾಚ್​ನಲ್ಲಿ 9 ಇನಿಂಗ್ಸ್ ಆಡಿರುವ ಕೊಹ್ಲಿ ಒಟ್ಟು 190 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಶತಕ ಕೂಡ ಸೇರಿದೆ.

ಇದನ್ನೂ ಓದಿ: ಹೀನಾಯ ಸೋಲುಗಳ ಸರಮಾಲೆ: ಟೀಮ್ ಇಂಡಿಯಾಗೆ ‘ಗಂಭೀರ’ ಸಮಸ್ಯೆ

ಅಂದರೆ ಪರ್ತ್​ ಟೆಸ್ಟ್ ಪಂದ್ಯದಲ್ಲಿ ಬಾರಿಸಿದ 100 ರನ್​​ಗಳ ಬಳಿಕ ವಿರಾಟ್ ಕೊಹ್ಲಿಯ ಬ್ಯಾಟ್ ಸದ್ದು ಮಾಡಿಲ್ಲ. ಪರಿಣಾಮ 8 ಇನಿಂಗ್ಸ್​ಗಳಿಂದ ಕೊಹ್ಲಿ ಕಲೆಹಾಕಿರುವುದು ಕೇವಲ 90 ರನ್​​ಗಳು ಮಾತ್ರ. ಅಂದರೆ ಕಳೆದ ಏಳು ಇನಿಂಗ್ಸ್​ಗಳಿಂದ ವಿರಾಟ್ ಕೊಹ್ಲಿ ಕೇವಲ 12 ರ ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದಾರೆ. ಹೀಗಾಗಿಯೇ ಇದೀಗ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಟಿಸಲು ಬಿಸಿಸಿಐ ನಿರ್ಧರಿಸಿದೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್