AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಮುಗಿದ ಕಥೆ: ಶೀಘ್ರದಲ್ಲೇ ವಿರಾಟ್ ಕೊಹ್ಲಿಗೂ ಗೇಟ್ ಪಾಸ್

India vs Australia: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ 6.20 ಸರಾಸರಿಯಲ್ಲಿ ರನ್ ಕಲೆಹಾಕಿದರೆ, ವಿರಾಟ್ ಕೊಹ್ಲಿ 8 ಏಳು ಇನಿಂಗ್ಸ್​ಗಳಲ್ಲಿ ಕೇವಲ 11.25 ರ ಸರಾಸರಿಯಲ್ಲಿ ರನ್​ಗಳಿಸಿದ್ದಾರೆ. ಅತ್ತ ಕಳಪೆ ಫಾರ್ಮ್​ ಕಾರಣ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಸಿಡ್ನಿ ಟೆಸ್ಟ್​ನಿಂದ ಕೈ ಬಿಡಲಾಗಿದೆ. ಇದರ ಬೆನ್ನಲ್ಲೇ ಸತತ ವೈಫಲ್ಯ ಅನುಭವಿಸುತ್ತಿರುವ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಡಿಸಲು ಬಿಸಿಸಿಐ ನಿರ್ಧರಿಸಿದೆ.

ರೋಹಿತ್ ಶರ್ಮಾ ಮುಗಿದ ಕಥೆ: ಶೀಘ್ರದಲ್ಲೇ ವಿರಾಟ್ ಕೊಹ್ಲಿಗೂ ಗೇಟ್ ಪಾಸ್
Rohit Sharma - Virat Kohli
ಝಾಹಿರ್ ಯೂಸುಫ್
|

Updated on: Jan 05, 2025 | 1:54 PM

Share

3 ಪಂದ್ಯಗಳು, 5 ಇನಿಂಗ್ಸ್​ 31 ರನ್​ಗಳು. ಇದು ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಲೆಹಾಕಿದ ಒಟ್ಟು ರನ್​ಗಳು. 6.20 ಸರಾಸರಿಯಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿರುವ ಕಾರಣ ಇದೀಗ 5ನೇ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಕೈ ಬಿಡಲಾಗಿತ್ತು. ಅಲ್ಲಿಗೆ ಹಿಟ್​ಮ್ಯಾನ್​ನ ಟೆಸ್ಟ್ ಕೆರಿಯರ್ ಖತಂ ಆಗುವುದು ಬಹುತೇಕ ಖಚಿತವಾಗಿದೆ. ಈ ಕೆರಿಯರ್ ಖತಂ ಸುದ್ದಿ ಬೆನ್ನಲ್ಲೇ ನಾನು ಸದ್ಯ ನಿವೃತ್ತಿ ನೀಡುತ್ತಿಲ್ಲ ಎಂದು ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಆದರೆ ಅವರನ್ನು ಮುಂಬರುವ ಟೆಸ್ಟ್​ ಸರಣಿ ಆಯ್ಕೆ ಮಾಡುವುದು ಅನುಮಾನ. ಇದರ ಜೊತೆಗೆ ವಿರಾಟ್ ಕೊಹ್ಲಿ ಕೂಡ ಬಿಸಿ ಮುಟ್ಟಿಸಲು ಬಿಸಿಸಿಐ ನಿರ್ಧರಿಸಿದೆ.

ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ನೀವು ಭಾರತ ಟೆಸ್ಟ್ ತಂಡದ ಭಾಗವಾಗುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ರೋಹಿತ್ ಶರ್ಮಾಗೆ ತಿಳಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಚರ್ಚಿಸಲೆಂದೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಮೆಲ್ಬೋರ್ನ್​ಗೆ ತೆರಳಿದ್ದರು ಎಂದು ವರದಿಯಾಗಿದೆ.

ಅಜಿತ್ ಅಗರ್ಕರ್ ಅವರ ಈ ಭೇಟಿ ಬೆನ್ನಲ್ಲೇ ರೋಹಿತ್ ಶರ್ಮಾ ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ನಿರ್ಧಾರದೊಂದಿಗೆ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ಬಿಸಿಸಿಐ ಮೂಲಗಳ ಪ್ರಕಾರ, ಭಾರತ ತಂಡ ಮುಂದಿನ ಟೆಸ್ಟ್​ ಸರಣಿಗೆ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡುವುದಿಲ್ಲ. ಅಲ್ಲಿಗೆ ವೈಟ್ ಜೆರ್ಸಿಯಲ್ಲಿ ಹಿಟ್​ಮ್ಯಾನ್ ಯುಗಾಂತ್ಯ ಎಂದೇ ಹೇಳಬಹುದು.

ರೋಹಿತ್ ಶರ್ಮಾ ವಿಷಯದಲ್ಲಿ ಕಠಿಣ ನಿರ್ಧಾರ ತೆಗೆದುಕೊಂಡಿರುವ ಬಿಸಿಸಿಐ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಸಿಡ್ನಿ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿಯೊಂದಿಗೆ ಟೀಮ್ ಇಂಡಿಯಾ ಆಯ್ಕೆ ಸಮಿತಿ ಚರ್ಚಿಸಲಿದ್ದು, ಆ ಬಳಿಕ ನಿವೃತ್ತಿಗೆ ಗಡುವು ವಿಧಿಸುವ ಸಾಧ್ಯತೆಯಿದೆ.

ಅದರಂತೆ ಈ ವರ್ಷ ನಡೆಯಲಿರುವ 10 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿಯ ಟೆಸ್ಟ್ ಕೆರಿಯರ್​ನ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು. ಅದಕ್ಕೂ ಮುನ್ನ ಕಿಂಗ್ ಕೊಹ್ಲಿ ತನ್ನ ಭರ್ಜರಿ ಫಾರ್ಮ್ ಅನ್ನು ಪ್ರದರ್ಶಿಸಲೇಬೇಕು.

ಹೀಗಾಗಿ ಮುಂಬರುವ ಸರಣಿಗಳು ವಿರಾಟ್ ಕೊಹ್ಲಿ ಪಾಲಿಗೆ ಅಗ್ನಿ ಪರೀಕ್ಷೆ ಎನ್ನಬಹುದು. ಈ ಅಗ್ನಿ ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕೆರಿಯರ್​ ಅನ್ನು ವಿಸ್ತರಿಸಲಿದ್ದಾರಾ ಅಥವಾ ಶೀಘ್ರದಲ್ಲೇ ಗುಡ್ ಬೈ ಹೇಳಲಿದ್ದಾರಾ ಕಾದು ನೋಡಬೇಕಿದೆ.

ವಿರಾಟ್ ಕೊಹ್ಲಿಯ ಪ್ರಸ್ತುತ ಪ್ರದರ್ಶನ:

ಈ ಬಾರಿಯ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ವಿರಾಟ್ ಕೊಹ್ಲಿ 5 ಪಂದ್ಯಗಳನ್ನಾಡಿದ್ದಾರೆ. ಈ ಐದು ಮ್ಯಾಚ್​ನಲ್ಲಿ 9 ಇನಿಂಗ್ಸ್ ಆಡಿರುವ ಕೊಹ್ಲಿ ಒಟ್ಟು 190 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಶತಕ ಕೂಡ ಸೇರಿದೆ.

ಇದನ್ನೂ ಓದಿ: ಹೀನಾಯ ಸೋಲುಗಳ ಸರಮಾಲೆ: ಟೀಮ್ ಇಂಡಿಯಾಗೆ ‘ಗಂಭೀರ’ ಸಮಸ್ಯೆ

ಅಂದರೆ ಪರ್ತ್​ ಟೆಸ್ಟ್ ಪಂದ್ಯದಲ್ಲಿ ಬಾರಿಸಿದ 100 ರನ್​​ಗಳ ಬಳಿಕ ವಿರಾಟ್ ಕೊಹ್ಲಿಯ ಬ್ಯಾಟ್ ಸದ್ದು ಮಾಡಿಲ್ಲ. ಪರಿಣಾಮ 8 ಇನಿಂಗ್ಸ್​ಗಳಿಂದ ಕೊಹ್ಲಿ ಕಲೆಹಾಕಿರುವುದು ಕೇವಲ 90 ರನ್​​ಗಳು ಮಾತ್ರ. ಅಂದರೆ ಕಳೆದ ಏಳು ಇನಿಂಗ್ಸ್​ಗಳಿಂದ ವಿರಾಟ್ ಕೊಹ್ಲಿ ಕೇವಲ 12 ರ ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದಾರೆ. ಹೀಗಾಗಿಯೇ ಇದೀಗ ವಿರಾಟ್ ಕೊಹ್ಲಿಗೂ ಬಿಸಿ ಮುಟ್ಟಿಸಲು ಬಿಸಿಸಿಐ ನಿರ್ಧರಿಸಿದೆ.

Follow Us
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಇಂದು ಈ ರಾಶಿಯವರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ
ಇಂದು ಈ ರಾಶಿಯವರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ
ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್
ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್