AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾ ವಿರುದ್ದದ ಸರಣಿಯಿಂದ ಟೀಮ್ ಇಂಡಿಯಾದ ನಾಲ್ವರು ಔಟ್​..?

IND vs SL: ಆಯ್ಕೆಗಾರರು ಕೆಲವು ಹೊಸ ಮುಖಗಳನ್ನು ಪರಿಚಯಿಸಲು ಬಯಸುತ್ತಿದೆ. ಹೀಗಾಗಿ ನಾಲ್ವರು ಹಿರಿಯ ಆಟಗಾರರಿಗೆ ಪ್ರತ್ಯೇಕವಾಗಿ ಮಾಹಿತಿ ನೀಡಲಾಗಿದೆ.

IND vs SL: ಶ್ರೀಲಂಕಾ ವಿರುದ್ದದ ಸರಣಿಯಿಂದ ಟೀಮ್ ಇಂಡಿಯಾದ ನಾಲ್ವರು ಔಟ್​..?
Team India
TV9 Web
| Edited By: |

Updated on: Feb 10, 2022 | 5:12 PM

Share

ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಶ್ರೀಲಂಕಾ ವಿರುದ್ದ ಸರಣಿ ಆಡಲಿದೆ. ಫೆಬ್ರವರಿ 25 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ 3 ಟೆಸ್ಟ್ ಪಂದ್ಯ ಹಾಗೂ 2 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಆದರೆ ಈ ಸರಣಿಗಾಗಿ ಆಯ್ಕೆ ಮಾಡಲಾಗುವ ತಂಡದಿಂದ ಕೆಲ ಪ್ರಮುಖ ಆಟಗಾರರನ್ನು ಕೈ ಬಿಡುವ ಸೂಚನೆ ನೀಡಿದೆ ಬಿಸಿಸಿಐ. ಅದರಂತೆ ಶ್ರೀಲಂಕಾ ವಿರುದ್ದದ ಟೆಸ್ಟ್​ ಸರಣಿಯಲ್ಲಿ ಇಶಾಂತ್ ಶರ್ಮಾಗೆ ಅವಕಾಶ ಸಿಗುವುದು ಅನುಮಾನ. ಅಷ್ಟೇ ಅಲ್ಲದೆ ಈ ಪಟ್ಟಿಯಲ್ಲಿ ಅಜಿಂಕ್ಯ ರಹಾನೆ ಹೆಸರು ಕೂಡ ಇದ್ದು, ಹೀಗಾಗಿ ಈ ಇಬ್ಬರು ಆಟಗಾರರನ್ನು ಬಿಸಿಸಿಐ ಕೈ ಬಿಡುವ ಸಾಧ್ಯತೆಯಿದೆ.

ಇವರಲ್ಲದೆ ಈ ಪಟ್ಟಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ವೃದ್ಧಿಮಾನ್ ಸಾಹ ಹಾಗೂ ಚೇತೇಶ್ವರ ಪೂಜಾರಾ ಹೆಸರು ಕೂಡ ಇದೆ. ಈ ನಾಲ್ವರು ಆಟಗಾರರಿಗೆ ಈಗಾಗಲೇ ಬಿಸಿಸಿಐ ಸೂಚನೆ ನೀಡಿದ್ದು, ಅದರಂತೆ ಈ ಆಟಗಾರರು ರಣಜಿ ಕ್ರಿಕೆಟ್​ನಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

“ಆಯ್ಕೆಗಾರರು ಕೆಲವು ಹೊಸ ಮುಖಗಳನ್ನು ಪರಿಚಯಿಸಲು ಬಯಸುತ್ತಿದೆ. ಹೀಗಾಗಿ ನಾಲ್ವರು ಹಿರಿಯ ಆಟಗಾರರಿಗೆ ಪ್ರತ್ಯೇಕವಾಗಿ ಮಾಹಿತಿ ನೀಡಲಾಗಿದೆ. ಕೋಚ್ ರಾಹುಲ್ ದ್ರಾವಿಡ್ ಮತ್ತು ತಂಡದ ಮ್ಯಾನೇಜ್‌ಮೆಂಟ್‌ನ ಇತರ ಹಿರಿಯ ಸದಸ್ಯರೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಅದರಂತೆ ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ವೃದ್ಧಿಮಾನ್ ಸಾಹ ಹಾಗೂ ಚೇತೇಶ್ವರ ಪೂಜಾರಾ ಹೊರಬೀಳುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೆ ರಣಜಿ ಕ್ರಿಕೆಟ್ ಮೂಲಕ ತಂಡಕ್ಕೆ ಕಂಬ್ಯಾಕ್ ಮಾಡುವ ಅವಕಾಶ ಕೂಡ ಇದೆ. ಆದರೆ ಅನೇಕ ಯುವ ಆಟಗಾರರು ಟೀಮ್ ಇಂಡಿಯಾದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದು, ಅದರಂತೆ ಈ ಆಟಗಾರು ಪ್ಲೇಯಿಂಗ್ ಇಲೆವೆನ್​ನಲ್ಲಿ ಮಿಂಚಿದರೆ ಹಿರಿಯ ಆಟಗಾರರ ಕಂಬ್ಯಾಕ್ ಮತ್ತಷ್ಟು ಕಠಿಣವಾಗಲಿದೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

(BCCI Selectors ‘INFORM’ Rahane, Ishant, Saha, Pujara ‘will not be selected for Sri Lanka Series)

Follow Us
Web contact
Web contact

TV9 Kannada

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!