AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾಗೆ ಹೊಸ ನಾಯಕ-ನೂತನ ಕೋಚ್ ಆಯ್ಕೆ ಸಾಧ್ಯತೆ

Team India: ಮುಂದಿನ ವರ್ಷ ನಡೆಯಲಿರುವ ಟೀಮ್ ಇಂಡಿಯಾದ ಟಿ20 ಸರಣಿಯಲ್ಲಿ ಹೊಸ ನಾಯಕ ಹಾಗೂ ನೂತನ ಕೋಚ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

Team India: ಟೀಮ್ ಇಂಡಿಯಾಗೆ ಹೊಸ ನಾಯಕ-ನೂತನ ಕೋಚ್ ಆಯ್ಕೆ ಸಾಧ್ಯತೆ
Rohit Sharma-Rahul Dravid
TV9 Web
| Edited By: |

Updated on: Dec 05, 2022 | 8:54 PM

Share

ಟಿ20 ವಿಶ್ವಕಪ್​ನಲ್ಲಿನ ಸೋಲಿನ ಬಳಿಕ ಟೀಮ್ ಇಂಡಿಯಾದಲ್ಲಿ (Team India) ಮಹತ್ವದ ಬದಲಾವಣೆ ತರಲು ಬಿಸಿಸಿಐ (BCCI) ಮುಂದಾಗಿದೆ.  ಅದರ ಮೊದಲ ಹೆಜ್ಜೆ ಎಂಬಂತೆ ಟೀಮ್ ಇಂಡಿಯಾಗೆ ವಿಭಿನ್ನ ನಾಯಕರುಗಳ ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗಿದೆ. ಹೀಗಾಗಿ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಇಬ್ಬರು ನಾಯಕರುಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇಲ್ಲಿ ರೋಹಿತ್ ಶರ್ಮಾ (Rohit Sharma) ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವನ್ನು ಮುನ್ನಡೆಸಿದರೆ, ಹಾರ್ದಿಕ್ ಪಾಂಡ್ಯ (Hardik Pandya) ಟಿ20 ತಂಡಕ್ಕೆ ನಾಯಕರಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಟಿ20 ತಂಡಕ್ಕಾಗಿ ಹೊಸ ಕೋಚ್ ಅನ್ನು ಕೂಡ ನೇಮಕ ಮಾಡುವ ಬಗ್ಗೆ ಕೂಡ ಚಿಂತಿಸಲಾಗಿದೆ.

ಮುಂಬರುವ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ವಕಪ್​​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವು ಪ್ರಮುಖ ಬದಲಾವಣೆ ಮಾಡಿಕೊಳ್ಳಲು ಮುಂದಾಗಿದೆ. ಇಲ್ಲಿ ಮುಖ್ಯವಾಗಿ 2024 ರ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಟಿ20 ತಂಡದ ನಾಯಕ ಹಾಗೂ ಕೋಚ್ ಅನ್ನು ಬದಲಿಸಲು ಬಿಸಿಸಿಐ ಆಲೋಚಿಸಿದೆ ಎಂದು ವರದಿಯಾಗಿದೆ.

ಈ ವರದಿಯ ಪ್ರಕಾರ, ರಾಹುಲ್ ದ್ರಾವಿಡ್ ಬದಲಿಗೆ ಟಿ20 ತಂಡಕ್ಕೆ ಹೊಸ ಕೋಚ್ ನೇಮಕವಾಗಲಿದ್ದಾರೆ. ಹಾಗೆಯೇ ನಾಯಕನಾಗಿ ಹಾರ್ದಿಕ್ ಪಾಂಡ್ಯಗೆ ಜವಾಬ್ದಾರಿ ನೀಡಲಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಬಿಸಿಸಿಐ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಈಗಾಗಲೇ ವಿಭಿನ್ನ ನಾಯಕ ಹಾಗೂ ಕೋಚ್​ಗಳೊಂದಿಗೆ ಇಂಗ್ಲೆಂಡ್ ತಂಡವು ಯಶಸ್ಸು ಸಾಧಿಸಿದೆ. ಅದರಲ್ಲೂ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಇಂಗ್ಲೆಂಡ್ ಪಾರುಪತ್ಯ ಮೆರೆದಿದೆ. ಹೀಗಾಗಿ ಅಂತಹದ್ದೇ ಪ್ರಯೋಗಕ್ಕೆ ಬಿಸಿಸಿಐ ಕೂಡ ಮುಂದಾಗುತ್ತಿದೆ.

ಇಲ್ಲಿ ಇಂಗ್ಲೆಂಡ್ ತಂಡವನ್ನು ಏಕದಿನ ಹಾಗೂ ಟಿ20 ಯಲ್ಲಿ ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದರೆ, ಕೋಚ್ ಆಗಿ ಮಾಥ್ಯೂ ಮೋಟ್ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗೆಯೇ ಟೆಸ್ಟ್ ತಂಡದ ನಾಯಕನಾಗಿ ಬೆನ್ ಸ್ಟೋಕ್ಸ್ ಹಾಗೂ ಕೋಚ್ ಆಗಿ ಬ್ರೆಂಡನ್ ಮೆಕಲಂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೇ ಮಾದರಿಯಲ್ಲಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್​ ದ್ರಾವಿಡ್ ಮುಂದುವರೆಸಿದರೆ, ಟಿ20 ತಂಡಕ್ಕೆ ಹೊಸ ಕೋಚ್ ಹಾಗೂ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅದಕ್ಕೂ ಮುನ್ನ ಭಾರತ ತಂಡದ ಪ್ರಸ್ತುತ ಕೋಚ್ ಹಾಗೂ ನಾಯಕನ ಜೊತೆ ವಿಶೇಷ ಸಭೆ ನಡೆಸಲು ಬಿಸಿಸಿಐ ನಿರ್ಧರಿಸಿದೆ.

ಈ ಸಭೆಯ ಬಳಿಕ ಹೊಸ ನಾಯಕ ಹಾಗೂ ಕೋಚ್ ಯಾರೆಂಬುದು ನಿರ್ಧಾರವಾಗಲಿದೆ. ಸದ್ಯ ಮಾಹಿತಿ ಪ್ರಕಾರ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವುದು ಬಹುತೇಕ ಖಚಿತ. ಇದಾಗ್ಯೂ ಕೋಚ್ ಸ್ಥಾನದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

ಈ ಬಗ್ಗೆ ಬಿಸಿಸಿಐ ಶೀಘ್ರದಲ್ಲೇ ವಿಶೇಷ ಸಭೆ ಕರೆಯಲಿದ್ದು, ಈ ವೇಳೆ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರ ಅಭಿಪ್ರಾಯಗಳನ್ನು ಕೇಳಲಿದ್ದೇವೆ. ನಾವು ಕೂಡ ದ್ರಾವಿಡ್ ಅವರ ಕೆಲಸದ ಹೊರೆ ಕಡಿಮೆ ಮಾಡಲು ಬಯಸಿದ್ದೇವೆ. ಹೀಗಾಗಿ ಈ ಸಭೆಯ ಬಳಿಕ ಟೀಮ್ ಇಂಡಿಯಾದಲ್ಲಿನ ಮಹತ್ವದ ಬದಲಾವಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮುಂದಿನ ವರ್ಷ ನಡೆಯಲಿರುವ ಟೀಮ್ ಇಂಡಿಯಾದ ಟಿ20 ಸರಣಿಯಲ್ಲಿ ಹೊಸ ನಾಯಕ ಹಾಗೂ ನೂತನ ಕೋಚ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ