AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್ತುಳಿತದ ಎಫೆಕ್ಟ್… ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದರೆ, ಅನೇಕರು ಗಾಯಗೊಂಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ.

ಕಾಲ್ತುಳಿತದ ಎಫೆಕ್ಟ್... ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್
Chinnaswamy Stadium
ಝಾಹಿರ್ ಯೂಸುಫ್
|

Updated on:Jun 12, 2025 | 1:01 PM

Share

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಜೂನ್.4) ನಡೆದ ಕಾಲ್ತುಳಿತದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಆಡಳಿತಾತ್ಮಕ ಸ್ಥಿರತೆಯ ಬಗ್ಗೆ ಬಿಸಿಸಿಐ ಕಳವಳ ಹೊಂದಿದೆ. ಇದೇ ಕಾರಣದಿಂದಾಗಿ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ.

ಯಾವುದೇ ನಿರ್ದಿಷ್ಟ ಕಾರಣ ನೀಡದೇ ಭಾರತೀಯ ಕ್ರಿಕೆಟ್ ಮಂಡಳಿ ( ಬಿಸಿಸಿಐ ) ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಈ ಪ್ರಕಟಣೆಯಲ್ಲಿ ಬೆಂಗಳೂರಿನ ಪಂದ್ಯಗಳನ್ನು ರಾಜ್‌ಕೋಟ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಇತ್ತ ಯಾವುದೇ ಕಾರಣಗಳನ್ನು ಪ್ರಸ್ತಾಪಿಸದೇ ಇದ್ದರೂ, ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಅದರಂತೆ ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಬೆಂಗಳೂರಿನ ಬದಲು ರಾಜ್‌ಕೋಟ್‌ನಲ್ಲಿ ಆಯೋಜಿಸಲಾಗುತ್ತಿದೆ.

ಹಾಗೆಯೇ ಬೆಂಗಳೂರಿನಲ್ಲಿ ನಡೆಯಬೇಕಿರುವ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳು ಕೂಡ ಸಹ ಬೇರೆಡೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ ವುಮೆನ್ಸ್ ಒಡಿಐ ವರ್ಲ್ಡ್​ಕಪ್​ನ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಇದೀಗ ಕಾಲ್ತುಳಿತದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಮಹಿಳಾ ಏಕದಿನ ವಿಶ್ವಕಪ್​ನ ಉದ್ಘಾಟನಾ ಪಂದ್ಯವನ್ನು ಬೇರೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇನ್ನು ಮುಂಬರುವ ಟಿ20 ವಿಶ್ವಕಪ್ ಕೂಡ ಭಾರತದಲ್ಲಿ ಆಯೋಜನೆಗೊಳ್ಳಲಿದೆ. ಇತ್ತ 2026ರ ಟಿ20 ವಿಶ್ವಕಪ್​ಗೆ ಬಿಸಿಸಿಐ ನಿಗದಿಪಡಿಸಿದ ಸ್ಟೇಡಿಯಂಗಳಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕೂಡ ಒಂದು. ಆದರೆ ಇದೀಗ ಬೆಂಗಳೂರಿನ ಪಂದ್ಯಗಳನ್ನು ಶಿಫ್ಟ್ ಮಾಡುತ್ತಿರುವ ಕಾರಣ, ಟಿ20 ವಿಶ್ವಕಪ್ ಪಂದ್ಯದ ಆತಿಥ್ಯದ ಹಕ್ಕು ಕೂಡ ಕರ್ನಾಟಕ ಕ್ರಿಕೆಟ್ ಮಂಡಳಿಯ ಕೈ ತಪ್ಪಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: IPL 2026: RCB ತಂಡದಿಂದ 6 ಆಟಗಾರರಿಗೆ ಗೇಟ್ ಪಾಸ್ ಖಚಿತ

ಒಟ್ಟಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಉಂಟಾದ ದುರ್ಘಟನೆಯನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದ್ದು, ಅದರ ಮೊದಲ ಹೆಜ್ಜೆಯಾಗಿ ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿರುವ ಪಂದ್ಯಗಳನ್ನು ಸ್ಥಳಾಂತರಿಸಲು ಮುಂದಾಗಿದೆ. ಈ ಮೂಲಕ ದಾರುಣ ಘಟನೆಯ ಕಹಿ ನೆನಪು ಮಾಸುವ ತನಕ ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಯೋಜಿಸದಿರಲು ನಿರ್ಧರಿಸಿದೆ.

Published On - 11:31 am, Tue, 10 June 25

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ