AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಎರಡು ನಗರಗಳಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್

Women’s Premier League (WPL 2025): ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಈ ಟೂರ್ನಿಯ ಮೂರನೇ ಸೀಸನ್​ಗಾಗಿ ಸಿದ್ಧತೆಗಳು ಶುರುವಾಗಿದೆ.

WPL 2025: ಎರಡು ನಗರಗಳಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್
Wpl 2025
ಝಾಹಿರ್ ಯೂಸುಫ್
|

Updated on: Jan 08, 2025 | 7:23 AM

Share

ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ WPL 2025 ಬರೋಡಾ ಮತ್ತು ಲಕ್ನೋದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದಕ್ಕೂ ಮುನ್ನ 2024ರ ವುಮೆನ್ಸ್ ಪ್ರೀಮಿಯರ್ ಲೀಗ್​ ಆವೃತ್ತಿಯನ್ನು ಬೆಂಗಳೂರು ಮತ್ತು ದೆಹಲಿ ನಗರಗಳಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಮೊದಲಾರ್ಧದ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ದ್ವಿತೀಯಾರ್ಧದ ಮ್ಯಾಚ್​ಗಳು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಿತ್ತು.

ಹೀಗೆ ಎರಡು ಸ್ಟೇಡಿಯಂನಲ್ಲಿ ಟೂರ್ನಿ ಆಯೋಜಿಸಿ ಯಶಸ್ವಿಯಾಗಿರುವುದರಿಂದ ಈ ಬಾರಿ ಕೂಡ ಎರಡು ನಗರಗಳನ್ನು ಕೇಂದ್ರೀಕರಿಸಿ ಇಡೀ ಟೂರ್ನಿ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅದರಂತೆ ಮೊದಲಾರ್ಧದ ಪಂದ್ಯಗಳು ಲಕ್ನೋದಲ್ಲಿ ನಡೆಯುವ ಸಾಧ್ಯತೆಯಿದ್ದು, ಫೈನಲ್ ಸೇರಿದಂತೆ ದ್ವಿತೀಯಾರ್ಧದ ಪಂದ್ಯಗಳಿಗೆ ಬರೋಡಾ ಆತಿಥ್ಯವಹಿಸಲಿದೆ.

ಈ ಬಗ್ಗೆ ಈಗಾಗಲೇ ಭಾರತೀಯ ಕ್ರಿಕೆಟ್​ ಮಂಡಳಿಯು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ (UPCA) ಮತ್ತು ಬರೋಡಾ ಕ್ರಿಕೆಟ್ ಸಂಸ್ಥೆ (BCA) ಯೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿದೆ ಎಂದು ತಿಳಿದುಬಂದಿದೆ. ಹೀಗಾಗಿ ಈ ಎರಡು ನಗರಗಳಲ್ಲಿನ ಸ್ಟೇಡಿಯಂಗಳಲ್ಲೇ ವುಮೆನ್ಸ್ ಪ್ರೀಮಿಯರ್ ಲೀಗ್ ಜರುಗುವುದು ಖಚಿತ ಎನ್ನಬಹುದು.

ವುಮೆನ್ಸ್ ಪ್ರೀಮಿಯರ್ ಲೀಗ್ ಯಾವಾಗ ಶುರು?

ಪ್ರಸ್ತುತ ಮಾಹಿತಿ ಪ್ರಕಾರ ವುಮೆನ್ಸ್ ಪ್ರೀಮಿಯರ್ ಲೀಗ್​ನ 3ನೇ ಆವೃತ್ತಿಯನ್ನು ಫೆಬ್ರವರಿ 6 ಅಥವಾ 7 ರಂದು ಶುರು ಮಾಡಲು ಬಿಸಿಸಿಐ ಯೋಜನೆ ರೂಪಿಸಿದೆ. ಇನ್ನು ಫೈನಲ್ ಪಂದ್ಯವು ಮಾರ್ಚ್ 8 ಅಥವಾ 9 ರಂದು ನಡೆಯಲಿದೆ.

ಇದನ್ನೂ ಓದಿ: ಅವರಿಲ್ಲ, ಇವರಿಲ್ಲ… ಸಿರಾಜ್ ಬೆನ್ನು ಮೂಳೆ ಮುರಿಯುತ್ತಿರುವ ಬಿಸಿಸಿಐ

23 ಪಂದ್ಯಗಳ ವುಮೆನ್ಸ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್​ ತಂಡಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ