AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಎರಡು ನಗರಗಳಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್

Women’s Premier League (WPL 2025): ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಈ ಟೂರ್ನಿಯ ಮೂರನೇ ಸೀಸನ್​ಗಾಗಿ ಸಿದ್ಧತೆಗಳು ಶುರುವಾಗಿದೆ.

WPL 2025: ಎರಡು ನಗರಗಳಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್
Wpl 2025
ಝಾಹಿರ್ ಯೂಸುಫ್
|

Updated on: Jan 08, 2025 | 7:23 AM

Share

ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ WPL 2025 ಬರೋಡಾ ಮತ್ತು ಲಕ್ನೋದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇದಕ್ಕೂ ಮುನ್ನ 2024ರ ವುಮೆನ್ಸ್ ಪ್ರೀಮಿಯರ್ ಲೀಗ್​ ಆವೃತ್ತಿಯನ್ನು ಬೆಂಗಳೂರು ಮತ್ತು ದೆಹಲಿ ನಗರಗಳಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಮೊದಲಾರ್ಧದ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ದ್ವಿತೀಯಾರ್ಧದ ಮ್ಯಾಚ್​ಗಳು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಿತ್ತು.

ಹೀಗೆ ಎರಡು ಸ್ಟೇಡಿಯಂನಲ್ಲಿ ಟೂರ್ನಿ ಆಯೋಜಿಸಿ ಯಶಸ್ವಿಯಾಗಿರುವುದರಿಂದ ಈ ಬಾರಿ ಕೂಡ ಎರಡು ನಗರಗಳನ್ನು ಕೇಂದ್ರೀಕರಿಸಿ ಇಡೀ ಟೂರ್ನಿ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅದರಂತೆ ಮೊದಲಾರ್ಧದ ಪಂದ್ಯಗಳು ಲಕ್ನೋದಲ್ಲಿ ನಡೆಯುವ ಸಾಧ್ಯತೆಯಿದ್ದು, ಫೈನಲ್ ಸೇರಿದಂತೆ ದ್ವಿತೀಯಾರ್ಧದ ಪಂದ್ಯಗಳಿಗೆ ಬರೋಡಾ ಆತಿಥ್ಯವಹಿಸಲಿದೆ.

ಈ ಬಗ್ಗೆ ಈಗಾಗಲೇ ಭಾರತೀಯ ಕ್ರಿಕೆಟ್​ ಮಂಡಳಿಯು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ (UPCA) ಮತ್ತು ಬರೋಡಾ ಕ್ರಿಕೆಟ್ ಸಂಸ್ಥೆ (BCA) ಯೊಂದಿಗೆ ಅನೌಪಚಾರಿಕ ಚರ್ಚೆ ನಡೆಸಿದೆ ಎಂದು ತಿಳಿದುಬಂದಿದೆ. ಹೀಗಾಗಿ ಈ ಎರಡು ನಗರಗಳಲ್ಲಿನ ಸ್ಟೇಡಿಯಂಗಳಲ್ಲೇ ವುಮೆನ್ಸ್ ಪ್ರೀಮಿಯರ್ ಲೀಗ್ ಜರುಗುವುದು ಖಚಿತ ಎನ್ನಬಹುದು.

ವುಮೆನ್ಸ್ ಪ್ರೀಮಿಯರ್ ಲೀಗ್ ಯಾವಾಗ ಶುರು?

ಪ್ರಸ್ತುತ ಮಾಹಿತಿ ಪ್ರಕಾರ ವುಮೆನ್ಸ್ ಪ್ರೀಮಿಯರ್ ಲೀಗ್​ನ 3ನೇ ಆವೃತ್ತಿಯನ್ನು ಫೆಬ್ರವರಿ 6 ಅಥವಾ 7 ರಂದು ಶುರು ಮಾಡಲು ಬಿಸಿಸಿಐ ಯೋಜನೆ ರೂಪಿಸಿದೆ. ಇನ್ನು ಫೈನಲ್ ಪಂದ್ಯವು ಮಾರ್ಚ್ 8 ಅಥವಾ 9 ರಂದು ನಡೆಯಲಿದೆ.

ಇದನ್ನೂ ಓದಿ: ಅವರಿಲ್ಲ, ಇವರಿಲ್ಲ… ಸಿರಾಜ್ ಬೆನ್ನು ಮೂಳೆ ಮುರಿಯುತ್ತಿರುವ ಬಿಸಿಸಿಐ

23 ಪಂದ್ಯಗಳ ವುಮೆನ್ಸ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್​ ತಂಡಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ