AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕಿಂತ ಕ್ರಿಕೆಟ್ ದೊಡ್ಡದಲ್ಲ: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

IPL 2025 Suspended: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಭೀತಿಯಿಂದಾಗಿ 2025ರ ಐಪಿಎಲ್ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ . ಆಟಗಾರರ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಿಗೆ ಬಹಳ ನಿರಾಶೆಯನ್ನು ತಂದಿದೆ. ಆರ್ಸಿಬಿ ಅಭಿಮಾನಿಗಳು ಕೂಡ ತೀವ್ರ ನಿರಾಸೆಗೊಂಡಿದ್ದಾರೆ.

ದೇಶಕ್ಕಿಂತ ಕ್ರಿಕೆಟ್ ದೊಡ್ಡದಲ್ಲ: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ
ಐಪಿಎಲ್
Follow us
ರಾಜೇಶ್ ದುಗ್ಗುಮನೆ
|

Updated on:May 09, 2025 | 12:41 PM

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ (IPL) ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಈ ವಿಚಾರ ಕ್ರಿಕೆಟ್ ಪ್ರೇಮಿಗಳಿಗೆ ಸಾಕಷ್ಟು ನೋವನ್ನು ತಂದಿದೆ.

ಪಂಜಾಬ್​ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್​ಗೆ ಫ್ಲಡ್​ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್​ನ ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು.ಇದು ಮುಂದಿನ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಬಿಸಿಸಿಐ ಇಂದು (ಮೇ 9) ಮಹತ್ವದ ಸಭೆ ನಡೆಸಿ ಪಂದ್ಯವನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಭಾರತ ಹಾಗೂ ಪಾಕ್ ಮಧ್ಯೆ ಯುದ್ಧ ಭೀತಿ ಶುರವಾಗಿದೆ. ಪಹಲ್ಗಾಮ್​ನಲ್ಲಿ ನಡೆದ ದಾಳಿಗೆ ಭಾರತ ಪ್ರತಿ ದಾಳಿ ನಡೆಸಿ ಉಗ್ರರರ ನೆಲೆಯನ್ನು ನಾಶ ಮಾಡಿತು. ಆ ಬಳಿಕ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಎಲ್ಲಾ ಕಾರಣದಿಂದ ಯುದ್ಧ ಭೀತಿ ಶುರುವಾಗಿದ್ದು, ಬಿಸಿಸಿಐ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಇದನ್ನೂ ನೋಡಿ: ಆರ್​ಸಿಬಿ ಸೆಲೆಬ್ರೇಷನ್ ವೇಳೆ ರಾರಾಜಿಸಿತು ಕಿಚ್ಚ ಸುದೀಪ್ ಫೋಟೋ

ಈ ಬಾರಿ ಆರ್​ಸಿಬಿ ಪಾಯಿಂಟ್ ಟೇಬಲ್​​ನಲ್ಲಿ ಎರಡನೇ ಸ್ಥಾನದಲ್ಲಿ ಇತ್ತು. ಈ ಮೂಲಕ ಕಪ್ ಗೆಲ್ಲುವ ಕನಸನ್ನು ಕಾಣುತ್ತಿತ್ತು. ಈ ಮೂಲಕ 18 ವರ್ಷಗಳ ಕಪ್ ಗೆಲ್ಲುವ ಕನಸು ನನಸಾಗಲಿದೆ ಎಂದು ಆರ್​ಸಿಬಿ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಆದರೆ, ಈಗ ಐಪಿಎಲ್ ಪಂದ್ಯವೇ ರದ್ದಾಗಿ ಹೋಗಿರುವುದು ಆರ್​ಸಿಬಿ ಅಭಿಮಾನಿಗಳ ಕನಸಿಗೆ ತಣ್ಣೀರು ಎರಚಿದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:24 pm, Fri, 9 May 25

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?