AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಿಂದ ರೋಹಿತ್ ದೂರ! ನಾಯಕನಾಗಿ ಏಕದಿನದಲ್ಲೂ ಹೆಚ್ಚು ದಿನ ಉಳಿಯುವುದಿಲ್ಲ ಹಿಟ್​ಮ್ಯಾನ್

Rohit Sharma: ಚಾಂಪಿಯನ್ಸ್ ಟ್ರೋಫಿ ಮತ್ತು 2027 ರ ಏಕದಿನ ವಿಶ್ವಕಪ್ ಈ ಎರಡೂ ಟೂರ್ನಿಗಳಿಗೆ ಟೀಂ ಇಂಡಿಯಾ ಹೊಸ ನಾಯಕನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರೊಂದಿಗೆ ಬಿಳಿ ಚೆಂಡಿನ ಭವಿಷ್ಯದ ಬಗ್ಗೆ ಅಂದರೆ ಏಕದಿನ ಕ್ರಿಕೆಟ್ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದೆ .

ಟಿ20 ಕ್ರಿಕೆಟ್​ನಿಂದ ರೋಹಿತ್ ದೂರ! ನಾಯಕನಾಗಿ ಏಕದಿನದಲ್ಲೂ ಹೆಚ್ಚು ದಿನ ಉಳಿಯುವುದಿಲ್ಲ ಹಿಟ್​ಮ್ಯಾನ್
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Nov 22, 2023 | 2:17 PM

Share

ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಟೀಂ ಇಂಡಿಯಾವನ್ನು ಅಜೇಯವಾಗಿ ಫೈನಲ್​ಗೆ ಮುನ್ನಡೆಸಿದ್ದ ರೋಹಿತ್ ಶರ್ಮಾ (Rohit Sharma), ಫೈನಲ್ ಪಂದ್ಯದ ಸೋಲಿನ ಆಘಾತದೊಂದಿಗೆ ಸದ್ಯ ತಂಡದಿಂದ ದೂರ ಸರಿದಿದ್ದಾರೆ. ನಾಳೆಯಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ (India vs Australia) ವಿರುದ್ಧದ ಟಿ20 ಸರಣಿಯಿಂದ ರೋಹಿತ್ ಸೇರಿದಂತೆ ತಂಡದ ಅನೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಇದೀಗ ಕೇಳಿಬಂದಿರುವ ಸುದ್ದಿಯ ಪ್ರಕಾರ, ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಿಂದ ದೂರ ಸರಿಯುವ ನಿರ್ಧಾರ ಮಾಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಚುಟುಕು ಮಾದರಿಯಿಂದ ದೂರ ಉಳಿಯುವ ನಿಟ್ಟಿನಲ್ಲಿ ಅವರು ಈಗಾಗಲೇ ಭಾರತೀಯ ಆಯ್ಕೆದಾರರೊಂದಿಗೆ ಮಾತನಾಡಿದ್ದಾರೆ ಎಂತಲೂ ವರದಿಯಲ್ಲಿ ಹೇಳಲಾಗಿದೆ.

ಟಿ20 ಕ್ರಿಕೆಟ್​ಗೆ ರೋಹಿತ್ ಗುಡ್​ಬೈ

ವರದಿಯ ಪ್ರಕಾರ, ಟಿ20 ಮಾದರಿಯಿಂದ ದೂರ ಉಳಿಯುವ ನಿಟ್ಟಿನಲ್ಲಿ ಆಯ್ಕೆಗಾರರೊಂದಿಗೆ ರೋಹಿತ್ ಶರ್ಮಾ ಮಾತನಾಡಿದ್ದು, ಬೇಕಿದ್ದರೆ ಟಿ20 ಕ್ರಿಕೆಟ್‌ನಲ್ಲಿ ನನ್ನ ಬಿಟ್ಟು ಮುಂದೆ ಯೋಚಿಸಬಹುದು ಎಂದು ಆಯ್ಕೆದಾರರಿಗೆ ರೋಹಿತ್ ಹೇಳಿದ್ದಾರೆ ಎಂದು ವರದಿಯಾಗಿದೆ. ಹೊಸ ಆಟಗಾರರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರೋಹಿತ್ ಈ ನಿರ್ಧಾರ ಕೈಗೊಂಡಿದ್ದು, ಟಿ20 ತಂಡದಲ್ಲಿ ತನ್ನನ್ನು ಆಯ್ಕೆ ಮಾಡದಿದ್ದರೆ ತೊಂದರೆ ಇಲ್ಲ ಎಂದು ರೋಹಿತ್ ಹೇಳಿದ್ದಾರೆ ಎಂದು ವರದಿಯಾಗಿದೆ.

ರೋಹಿತ್‌ ಅವರ ಈ ಮಹತ್ವದ ನಿರ್ಧಾರದಿಂದ ಅವರ ಏಕದಿನ ವೃತ್ತಿಜೀವನದ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸಿವೆ. ಏಕೆಂದರೆ ಮುಂದಿನ ಏಕದಿನ ವಿಶ್ವಕಪ್ 2027 ರಲ್ಲಿ ನಡೆಯಲ್ಲಿದೆ. ಸದ್ಯ 36 ವರ್ಷದ ರೋಹಿತ್‌ಗೆ ಆಗ 40 ವರ್ಷ ಆಗಿರಲಿದೆ. ಹೀಗಾಗಿ ಆ ವಯಸ್ಸಿನಲ್ಲಿ ಅವರು ಆ ಟೂರ್ನಿಯಲ್ಲಿ ಆಡಲು ಸಾಧ್ಯವಾಗುತ್ತದೆಯೇ ಎಂಬುದು ಪ್ರಶ್ನೆ. ಅದಕ್ಕೂ ಮುನ್ನ 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಕೂಡ ನಡೆಯಲ್ಲಿದ್ದು, ಆ ಟೂರ್ನಿಯಲ್ಲೂ ರೋಹಿತ್ ಆಡುತ್ತಾರಾ? ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಟೀಂ ಇಂಡಿಯಾಗೆ ಹೊಸ ನಾಯಕ?

ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಮತ್ತು 2027 ರ ಏಕದಿನ ವಿಶ್ವಕಪ್ ಈ ಎರಡೂ ಟೂರ್ನಿಗಳಿಗೆ ಟೀಂ ಇಂಡಿಯಾ ಹೊಸ ನಾಯಕನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರೊಂದಿಗೆ ಬಿಳಿ ಚೆಂಡಿನ ಭವಿಷ್ಯದ ಬಗ್ಗೆ ಅಂದರೆ ಏಕದಿನ ಕ್ರಿಕೆಟ್ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದೆ . ಮುಂದಿನ 2027 ರ ಏಕದಿನ ವಿಶ್ವಕಪ್ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆಯಲ್ಲಿ ನಡೆಯಲಿದೆ. ಆಗ ರೋಹಿತ್ ಶರ್ಮಾಗೆ 40 ವರ್ಷ ವಯಸ್ಸಾಗಿರಲಿದೆ. ಟಿ20 ವಿಶ್ವಕಪ್ ಮುಂದಿನ ವರ್ಷ 2024ರಲ್ಲಿ ನಡೆಯಲಿದೆ. ಈ ವಿಶ್ವಕಪ್ ಟೂರ್ನಿ ಅಮೆರಿಕ-ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿದೆ. ಆಗ ರೋಹಿತ್ ಶರ್ಮಾಗೆ 37 ವರ್ಷ ಆಗಿರಲಿದೆ. ಅಲ್ಲಿಯವರೆಗೂ ರೋಹಿತ್ ಟೀಂ ಇಂಡಿಯಾ ಪರ ಆಡುವ ಸಾಧ್ಯತೆ ಕಡಿಮೆ. ಅವರು ಮತ್ತು ವಿರಾಟ್ ಕೊಹ್ಲಿ ಈಗಾಗಲೇ ಟಿ20 ಮಾದರಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾದಲ್ಲಿ ಬದಲಾವಣೆಯ ಪರ್ವ ಆರಂಭವಾಗಲಿದೆ.

ಏಕದಿನ ನಾಯಕನಾಗಿ ಕೊನೆಯ ಸರಣಿ

ಟಿ20 ಕ್ರಿಕೆಟ್ ಆಡಲು ಬಯಸುವುದಿಲ್ಲ ಎಂದು ರೋಹಿತ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದೀಗ ಏಕದಿನದಲ್ಲಿ ಅವರ ಭವಿಷ್ಯದ ಬಗ್ಗೆ ಆಯ್ಕೆಗಾರರು ಅವರೊಂದಿಗೆ ಚರ್ಚಿಸಲಿದ್ದಾರೆ. ಡಿಸೆಂಬರ್ 26 ರಿಂದ ದಕ್ಷಿಣ ಆಫ್ರಿಕಾದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುವ ಮೊದಲು ಟೀಂ ಇಂಡಿಯಾ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಟೆಸ್ಟ್‌ನಲ್ಲಿ ಆಡುವ ಮುನ್ನ ಸಿದ್ಧತೆಯ ದೃಷ್ಟಿಯಿಂದ ಹಿರಿಯರಿಗೆ ಏಕದಿನ ಸರಣಿ ಉತ್ತಮ ಅವಕಾಶ ಎಂದು ಬಿಸಿಸಿಐ ಆಯ್ಕೆಗಾರರು ಅಭಿಪ್ರಾಯಪಟ್ಟಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುತ್ತಿಲ್ಲ. ಹಾಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ರೋಹಿತ್ ಶರ್ಮಾಗೆ ಏಕದಿನ ನಾಯಕನಾಗಿ ಕೊನೆಯ ಸರಣಿಯಾಗಬಹುದು.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ