AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್

Team India: ಬಿಸಿಸಿಐ, ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ಅವರ ವಾರ್ಷಿಕ ವೇತನವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುತ್ತಿದೆ. ಇತ್ತೀಚೆಗೆ A+ ಗ್ರೇಡ್ ರದ್ದುಗೊಂಡಿದ್ದರಿಂದ ಬುಮ್ರಾ ವೇತನ ಕಡಿಮೆಯಾಗಿತ್ತು. ಅಕ್ಷರ್ ತಮ್ಮ ಉತ್ತಮ ಪ್ರದರ್ಶನಗಳ ಹೊರತಾಗಿಯೂ ಗ್ರೇಡ್ C ನಲ್ಲಿದ್ದಾರೆ. ಅವರ ಪ್ರದರ್ಶನಗಳನ್ನು ಗುರುತಿಸಿ, ಯುಗಾದಿ ಉಡುಗೊರೆಯಾಗಿ ವೇತನ ಹೆಚ್ಚಳದ ಸಾಧ್ಯತೆ ಇದೆ.

ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್
Jasprit Bumrah, Axar Patel
ಪೃಥ್ವಿಶಂಕರ
|

Updated on: Mar 18, 2026 | 7:13 PM

Share

ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ (Jasprit Bumrah) ಮತ್ತು ಅಕ್ಷರ್ ಪಟೇಲ್​ಗೆ ( Axar Patel) ಬಿಸಿಸಿಐನಿಂದ (BCCI) ಯುಗಾದಿ ಗಿಫ್ಟ್ ಸಿಗಲಿದೆ ಎಂದು ವರದಿಯಾಗಿದೆ. ವಾಸ್ತವವಾಗಿ ಈ ಇಬ್ಬರು ಆಟಗಾರರು ಐಸಿಸಿಯ ಪ್ರತಿಯೊಂದು ಈವೆಂಟ್​ಗಳಲ್ಲೂ ಟೀಂ ಇಂಡಿಯಾ ಪರ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ತಂಡವನ್ನು ಚಾಂಪಿಯನ್ ಮಾಡುವಲ್ಲಿಯೂ ಶ್ರಮಿಸಿದ್ದಾರೆ. ಹೀಗಾಗಿ ಇವರಿಬ್ಬರ ವಾರ್ಷಿಕ ವೇತನವನ್ನು ಹೆಚ್ಚಿಸಲು ಬಿಸಿಸಿಐ ಯೋಚಿಸಿದೆ ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ಬಿಸಿಸಿಐ ಹೊಸ ಕೇಂದ್ರ ಒಪ್ಪಂದವನ್ನು ಪ್ರಕಟಿಸಿತ್ತು. ಆ ಪಟ್ಟಿಯಲ್ಲಿ ಎ+ ಗ್ರೇಡ್ ಅನ್ನು ತೆಗೆದುಹಾಕಿ ಉಳಿದ ಮೂರು ಗ್ರೇಡ್​ಗಳನ್ನು ಮುಂದುವರೆಸಿತ್ತು. ಎ+ ಗ್ರೇಡ್ ತೆಗೆದ ಕಾರಣ ಕೆಲವು ಆಟಗಾರರ ವಾರ್ಷಿಕ ವೇತನವೂ ಕಡಿಮೆ ಆಯಿತು.

ಪ್ರಸ್ತುತ ಬಿಸಿಸಿಐನ ಕೇಂದ್ರ ಒಪ್ಪಂದ ಪ್ರಕಾರ, ಎ ಗ್ರೇಡ್‌ ಆಟಗಾರರಿಗೆ 5 ಕೋಟಿ ರೂ. ಬಿ ಗ್ರೇಡ್‌ ಆಟಗಾರರಿಗೆ 3 ಕೋಟಿ ರೂ. ಹಾಗೂ ಸಿ ಗ್ರೇಡ್ ಆಟಗಾರರಿಗೆ 1 ಕೋಟಿ ರೂ. ವೇತನ ಸಿಗಲಿದೆ. ಅದರಂತೆ ಈ ಹಿಂದೆ ಎ+ ಗ್ರೇಡ್​ನಲ್ಲಿ ಸ್ಥಾನ ಪಡೆದಿದ್ದ ಜಸ್ಪ್ರೀತ್ ಬುಮ್ರಾ ವರ್ಷಕ್ಕೆ 7 ಕೋಟಿ ರೂ. ವೇತನ ಪಡೆಯುತ್ತಿದ್ದರು. ಆದರೆ ಎ+ ಗ್ರೇಡ್ ಅನ್ನು ರದ್ದುಗೊಳಿಸಿದ ಬಳಿಕ ಎ ಗ್ರೇಡ್‌ನಲ್ಲಿ ಸ್ಥಾನ ಪಡೆದಿರುವ ಬುಮ್ರಾಗೆ 5 ಕೋಟಿ ರೂ. ವೇತನ ಸಿಗುತ್ತಿದೆ. ಅಂದರೆ ಬುಮ್ರಾ ವರ್ಷಕ್ಕೆ 2 ಕೋಟಿ ರೂ. ವೇತನ ಕಡಿಮೆ ಪಡೆಯಲಿದ್ದಾರೆ.

ಅಕ್ಷರ್, ಬುಮ್ರಾ ವೇತನ ಹೆಚ್ಚಳ

ಹೀಗಾಗಿ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಬುಮ್ರಾಗೆ ವಾರ್ಷಿಕವಾಗಿ ನೀಡುತ್ತಿರುವ ವೇತನವನ್ನು ಹೆಚ್ಚಿಸುವ ಬಗ್ಗೆ ಬಿಸಿಸಿಐ ಪರಿಶೀಲಿಸುತ್ತಿದೆ . ಬುಮ್ರಾ ಜೊತೆಗೆ ಟಿ20 ತಂಡದ ಉಪನಾಯಕ ಅಕ್ಷರ್ ಪಟೇಲ್‌ಗೂ ವೇತನ ಹೆಚ್ಚಿಸುವ ಸಾಧ್ಯತೆಗಳಿವೆ. ಪ್ರಸ್ತುತ ಅಕ್ಷರ್ ಪಟೇಲ್ ಗ್ರೇಡ್ ಸಿ ವಿಭಾಗದಲ್ಲಿದ್ದು, ಕೇವಲ 1 ಕೋಟಿ ರೂಪಾಯಿ ವೇತನ ಪಡೆಯುತ್ತಾರೆ. ಎರಡು ಟಿ20 ವಿಶ್ವಕಪ್‌ಗಳು ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡದ ಗೆಲುವಿನಲ್ಲಿ ಪಟೇಲ್ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರ ಸಂಬಳ ಕಡಿಮೆಯಾಗಿರುವ ಬಗ್ಗೆ ಅನೇಕ ಕ್ರಿಕೆಟ್ ತಜ್ಞರು ಕಳವಳ ವ್ಯಕ್ತಪಡಿಸಿದ್ದರು, ಆದರೆ ಈಗ ಬಿಸಿಸಿಐ ಅವರ ಸಂಬಳವನ್ನು ಹೆಚ್ಚಿಸಬಹುದು.

IND vs SA: ಭಾರತೀಯ ಕ್ರಿಕೆಟ್‌ನಲ್ಲಿ ಈ ದಾಖಲೆ ಬರೆದ ಮೊದಲ ವೇಗಿ ಜಸ್ಪ್ರೀತ್ ಬುಮ್ರಾ

ಬಿಸಿಸಿಐ ನೂತನ ಕೇಂದ್ರ ಒಪ್ಪಂದ

  • ‘ಎ’ ಗ್ರೇಡ್‌ನಲ್ಲಿ ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಇದ್ದಾರೆ.
  • ಬಿ ಗ್ರೇಡ್‌ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್ ಮತ್ತು ವಾಷಿಂಗ್ಟನ್ ಸುಂದರ್ ಇದ್ದಾರೆ.
  • ಗ್ರೇಡ್ ಸಿ ಯಲ್ಲಿ ಅಕ್ಷರ್ ಪಟೇಲ್, ರಿಂಕು ಸಿಂಗ್, ತಿಲಕ್ ವರ್ಮಾ, ಶಿವಂ ದುಬೆ, ಅರ್ಷದೀಪ್ ಸಿಂಗ್, ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಧ್ರುವ್ ಜುರೆಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ನಿತೀಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರವಿ ಬಿಷ್ಣೋಯ್ ಮತ್ತು ರುತುರಾಜ್ ಗಾಯಕ್ವಾಡ್.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!