AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಗಂಭೀರ್​ ಬಲಗೈ ಬಂಟರಿಗೆ ಗೇಟ್​ ಪಾಸ್?

ಗೌತಮ್ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿದ್ದ ವೇಳೆ ರಿಯಾನ್ ಟೆನ್ ದೋಸ್ಹಾಟೆ ಹಾಗೂ ಮೊರ್ನೆ ಮೊರ್ಕೆಲ್ ಕೆಕೆಆರ್ ತಂಡದ ಭಾಗವಾಗಿದ್ದರು. ಇಬ್ಬರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಗಂಭೀರ್ ಟೀಮ್ ಇಂಡಿಯಾದ ಕೋಚ್ ಆದ ಬಳಿಕ ಅವರನ್ನೇ ಸಹಾಯಕ ಕೋಚ್​ಗಳಾಗಿ ನೇಮಿಸಿಕೊಂಡಿದ್ದರು. ಆದರೀಗ ಗಂಭೀರ್ ಅವರ ಬಲಗೈ ಬಂಟರೆಂದು ಗುರುತಿಸಿಕೊಂಡಿರುವ ಇಬ್ಬರು ಸಿಬ್ಬಂದಿಗಳಿಗೆ ಗೇಟ್ ಪಾಸ್ ನೀಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

ಗೌತಮ್ ಗಂಭೀರ್​ ಬಲಗೈ ಬಂಟರಿಗೆ ಗೇಟ್​ ಪಾಸ್?
Gautam Gambhir
ಝಾಹಿರ್ ಯೂಸುಫ್
|

Updated on: Jul 29, 2025 | 10:03 AM

Share

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಮೇಜರ್ ಸರ್ಜರಿಯಾಗಲಿದೆಯಾ? ಈ ಪ್ರಶ್ನೆಗೆ ಸದ್ಯದ ಉತ್ತರ ಹೌದು. ಆದರೆ ಈ ಬಾರಿ ಸರ್ಜರಿಯಾಗಲಿರುವುದು ಸಿಬ್ಬಂದಿ ವರ್ಗದಲ್ಲಿ ಎಂಬುದಷ್ಟೇ ವ್ಯತ್ಯಾಸ. ಅಂದರೆ ಗೌತಮ್ ಗಂಭೀರ್ ಅವರೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ಬಿಸಿಸಿಐ ಸಂತುಷ್ಟರಾಗಿಲ್ಲ. ಹೀಗಾಗಿ ಏಷ್ಯಾಕಪ್​ಗೂ ಮುನ್ನ ಇಬ್ಬರ ತಲೆದಂಡವಾಗಲಿದೆ ಎಂದು ವರದಿಯಾಗಿದೆ.

ಬಿಸಿಸಿಐ, ಟೀಮ್ ಇಂಡಿಯಾದ ಸಹಾಯಕ ಕೋಚ್ ರಿಯಾನ್ ಟೆನ್ ದೋಸ್ಹಾಟೆ ಅವರನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಇವರೊಂದಿಗೆ ಬೌಲಿಂಗ್ ಕೋಚ್ ಮೊರ್ನೆ ಮೊರ್ಕೆಲ್​ಗೂ ಕೂಡ ಟೇಟ್ ಪಾಸ್ ನೀಡಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

ಕಳೆದ ವರ್ಷ ಜುಲೈನಲ್ಲಿ ಗೌತಮ್ ಗಂಭೀರ್ ಅವರನ್ನು ಭಾರತದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿತ್ತು. ಈ ವೇಳೆ ಅವರ ಕೋರಿಕೆಯಂತೆ ರಿಯಾನ್ ಟೆನ್ ದೋಸ್ಹಾಟೆ ಅವರನ್ನು ಸಹಾಯಕ ಕೋಚ್, ಮೊರ್ನೆ ಮೊರ್ಕೆಲ್ ಅವರನ್ನು ಬೌಲಿಂಗ್ ಕೋಚ್ ಆಗಿ ಆಯ್ಕೆ ಮಾಡಲಾಗಿತ್ತು. ಹಾಗೆಯೇ ಬ್ಯಾಟಿಂಗ್ ಕೋಚ್ ಆಗಿ ಅಭಿಷೇಕ್ ನಾಯರ್ ಕಾಣಿಸಿಕೊಂಡಿದ್ದರು.

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ತನ್ನ ಸಹಪಾಠಿಗಳನ್ನೇ ಸಿಬ್ಬಂದಿ ವರ್ಗದಲ್ಲಿ ನೇಮಿಸಿಕೊಂಡಿದ್ದ ಗೌತಮ್ ಗಂಭೀರ್​ಗೆ ಕೆಲ ತಿಂಗಳುಗಳ ಹಿಂದೆಯಷ್ಟೇ ಬಿಸಿಸಿಐ ಆಘಾತ ನೀಡಿದ್ದರು. ತಂಡದ ಬ್ಯಾಟಿಂಗ್ ಕೋಚ್ ಆಗಿದ್ದ ಅಭಿಷೇಕ್ ನಾಯರ್ ಅವರನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬೆನ್ನಲ್ಲೇ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

ಇದೀಗ ರಿಯಾನ್ ಟೆನ್ ದೋಸ್ಹಾಟೆ ಹಾಗೂ ಮೊರ್ನೆ ಮೊರ್ಕೆಲ್​ಗೂ ಗೇಟ್ ಪಾಸ್ ನೀಡುವ ಬಗ್ಗೆ ಬಿಸಿಸಿಐ ಚಿಂತಿಸಿದೆ. ಈ ಇಬ್ಬರ ಕಾರ್ಯ ವೈಖರಿ ಬಗ್ಗೆ ಬಿಸಿಸಿಐ ಪ್ರಭಾವಿತವಾಗಿಲ್ಲ ಎಂದು ವರದಿಯಾಗಿದ್ದು, ಇದೇ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಇಬ್ಬರನ್ನು ಟೀಮ್ ಇಂಡಿಯಾ ಹುದ್ದೆಗಳಿಂದ ಕೆಳಗಿಳಿಸುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಏಷ್ಯಾಕಪ್​ನಲ್ಲಿ ಹೊಸ ಬೌಲಿಂಗ್ ಕೋಚ್​ನೊಂದಿಗೆ ಕಣಕ್ಕಿಳಿಯಲಿದೆ ಎಂದು ವರದಿಯಾಗಿದೆ.

ಗೌತಮ್ ಗಂಭೀರ್ ಕೋಚ್ ಆದ ಬಳಿಕ ಟೀಮ್ ಇಂಡಿಯಾ ಸೀಮಿತ ಓವರ್​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಟೆಸ್ಟ್ ಕ್ರಿಕೆಟ್​ನಲ್ಲಿ ಕಳಪೆ ಪ್ರದರ್ಶನ ಮುಂದುವರೆಸಿದೆ. ಅದರಲ್ಲೂ ಮೊರ್ನೆ ಮೊರ್ಕೆಲ್ ಬೌಲಿಂಗ್ ಕೋಚ್ ಆದ ಬಳಿಕ ಭಾರತ ತಂಡದ ಬೌಲರ್​ಗಳು ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿಯೇ ಅವರನ್ನು ಕೆಳಗಿಳಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ

ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ರಿಯಾನ್ ಟೆನ್ ದೋಸ್ಹಾಟೆ ಹಾಗೂ ಮೊರ್ನೆ ಮೊರ್ಕೆಲ್ ಟೀಮ್ ಇಂಡಿಯಾದಿಂದ ಬೇರ್ಪಡುವ ಸಾಧ್ಯತೆಯಿದ್ದು, ಏಷ್ಯಾಕಪ್​ಗೂ ಮುನ್ನ ಭಾರತ ತಂಡಕ್ಕೆ ಹೊಸ ಬೌಲಿಂಗ್ ಕೋಚ್ ಹಾಗೂ ಸಹಾಯಕ ಕೋಚ್ ನೇಮಕವಾಗಲಿದ್ದಾರೆ ಎಂದು ವರದಿಯಾಗಿದೆ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್