AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಖಚಿತ

Asia cup 2025: ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್​ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್​ಗಳು ಸೂಪರ್-4 ಹಂತಕ್ಕೇರಲಿದೆ.

ಏಷ್ಯಾಕಪ್ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಖಚಿತ
Team India
ಝಾಹಿರ್ ಯೂಸುಫ್
|

Updated on: Aug 21, 2025 | 12:54 PM

Share

ಏಷ್ಯಾಕಪ್ ಮುಕ್ತಾಯದ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತವಾಗಿದೆ. ಅದು ಕೂಡ ನಾಯಕತ್ವದ ಬದಲಾವಣೆಯೊಂದಿಗೆ ಎಂಬುದು ವಿಶೇಷ. ಅಂದರೆ ಏಷ್ಯಾಕಪ್ 2025ರ ಟೂರ್ನಿಯ ಬಳಿಕ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಕಾಣಿಸಿಕೊಳ್ಳಲಿರುವುದು ಶ್ರೇಯಸ್ ಅಯ್ಯರ್.

ಬಿಸಿಸಿಐ ಮೂರು ಸ್ವರೂಪಗಳಿಗೆ 2 ನಾಯಕರುಗಳನ್ನು ಆಯ್ಕೆ ಮಾಡಲು ಚಿಂತಿಸಿದೆ. ಅದರಂತೆ ಟೆಸ್ಟ್ ಹಾಗೂ ಟಿ20 ತಂಡಗಳಿಗೆ ಒಬ್ಬ ನಾಯಕ ಮತ್ತು ಏಕದಿನ ತಂಡಕ್ಕೆ ಮತ್ತೊಬ್ಬ ಕ್ಯಾಪ್ಟನ್​ನನ್ನು ಆಯ್ಕೆ ಮಾಡಲಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ರೋಹಿತ್ ಶರ್ಮಾ ಅವರನ್ನು ಶೀಘ್ರದಲ್ಲೇ ನಾಯಕತ್ವದಿಂದ ಕೆಳಗಿಳಿಸಲಿದ್ದಾರೆ. ಅಲ್ಲದೆ ಭಾರತ ಏಕದಿನ ತಂಡದ ನೂತನ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಪಟ್ಟ ಕಟ್ಟಲಿದ್ದಾರೆ. ಇನ್ನು ಟೆಸ್ಟ್ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆಯಲಿದ್ದಾರೆ.

ಅತ್ತ ಟಿ20 ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರನ್ನು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್​ವರೆಗೆ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ. ಈ ವಿಶ್ವಕಪ್ ಬೆನ್ನಲ್ಲೇ ಶುಭ್​ಮನ್ ಗಿಲ್​ಗೆ ಟಿ20 ತಂಡದ ಸಾರಥ್ಯ ನೀಡಲಿದ್ದಾರೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾ ಬಿಗ್ ಅಪ್​ಡೇಟ್​:

  • ರೋಹಿತ್ ನಂತರ ಶ್ರೇಯಸ್ ಅಯ್ಯರ್ ಅವರನ್ನು ಏಕದಿನ ತಂಡ ನಾಯಕನನ್ನಾಗಿ ನೇಮಿಸಲಿದ್ದಾರೆ.
  • ಸೂರ್ಯಕುಮಾರ್ ಯಾದವ್ ನಂತರ ಟಿ20 ತಂಡದ ನಾಯಕತ್ವ ಶುಭ್​ಮನ್ ಗಿಲ್​ಗೆ ಒಲಿಯಲಿದೆ.
  •  ಬಿಸಿಸಿಐ ಮೂರು ಸ್ವರೂಪಗಳಲ್ಲಿ ಇಬ್ಬರು ನಾಯಕರೊಂದಿಗೆ ಮುಂದುವರಿಯಲು ನೋಡುತ್ತಿದೆ.
  • ಏಷ್ಯಾ ಕಪ್ ನಂತರ, ಏಕದಿನ ತಂಡದ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ.
  • ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ದೀರ್ಘಕಾಲದವರೆಗೆ ನಾಯಕತ್ವ ನೀಡಲು ನಿರ್ಧರಿಸಲಾಗಿದೆ.
  •  ರೋಹಿತ್ ಶರ್ಮಾ ಅವರ ಏಕದಿನ ಭವಿಷ್ಯ ಬಗ್ಗೆ ಏಷ್ಯಾಕಪ್ ಬಳಿಕ ಬಿಸಿಸಿಐ ಚರ್ಚೆ ನಡೆಸಲಿದೆ.
  • 2027ರ ಏಕದಿನ ವಿಶ್ವಕಪ್​ಗೆ ಏಷ್ಯಾಕಪ್ ಬಳಿಕ ತಂಡ ರೂಪಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್.

ಇದನ್ನೂ ಓದಿ: IPL 2026: 6 ಆಟಗಾರರನ್ನು ಕೈ ಬಿಡಲಿದೆ RCB

ಏಷ್ಯಾಕಪ್ ಯಾವಾಗ ಶುರು?

ಏಷ್ಯಾಕಪ್ 2025 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಆಡಲಿದೆ. ಇನ್ನು ಸೆಪ್ಟೆಂಬರ್ 14 ರಂದು ನಡೆಯಲಿರುವ ತನ್ನ ದ್ವಿತೀಯ ಪಂದ್ಯದಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಇನ್ನು ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾದ ಕೊನೆಯ ಎದುರಾಳಿ ಒಮಾನ್. ಈ ಪಂದ್ಯವು ಸೆಪ್ಟೆಂಬರ್ 19 ರಂದು ನಡೆಯಲಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!