AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಖಚಿತ

Asia cup 2025: ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್​ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್​ಗಳು ಸೂಪರ್-4 ಹಂತಕ್ಕೇರಲಿದೆ.

ಏಷ್ಯಾಕಪ್ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಖಚಿತ
Team India
ಝಾಹಿರ್ ಯೂಸುಫ್
|

Updated on: Aug 21, 2025 | 12:54 PM

Share

ಏಷ್ಯಾಕಪ್ ಮುಕ್ತಾಯದ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತವಾಗಿದೆ. ಅದು ಕೂಡ ನಾಯಕತ್ವದ ಬದಲಾವಣೆಯೊಂದಿಗೆ ಎಂಬುದು ವಿಶೇಷ. ಅಂದರೆ ಏಷ್ಯಾಕಪ್ 2025ರ ಟೂರ್ನಿಯ ಬಳಿಕ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಕಾಣಿಸಿಕೊಳ್ಳಲಿರುವುದು ಶ್ರೇಯಸ್ ಅಯ್ಯರ್.

ಬಿಸಿಸಿಐ ಮೂರು ಸ್ವರೂಪಗಳಿಗೆ 2 ನಾಯಕರುಗಳನ್ನು ಆಯ್ಕೆ ಮಾಡಲು ಚಿಂತಿಸಿದೆ. ಅದರಂತೆ ಟೆಸ್ಟ್ ಹಾಗೂ ಟಿ20 ತಂಡಗಳಿಗೆ ಒಬ್ಬ ನಾಯಕ ಮತ್ತು ಏಕದಿನ ತಂಡಕ್ಕೆ ಮತ್ತೊಬ್ಬ ಕ್ಯಾಪ್ಟನ್​ನನ್ನು ಆಯ್ಕೆ ಮಾಡಲಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ರೋಹಿತ್ ಶರ್ಮಾ ಅವರನ್ನು ಶೀಘ್ರದಲ್ಲೇ ನಾಯಕತ್ವದಿಂದ ಕೆಳಗಿಳಿಸಲಿದ್ದಾರೆ. ಅಲ್ಲದೆ ಭಾರತ ಏಕದಿನ ತಂಡದ ನೂತನ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಪಟ್ಟ ಕಟ್ಟಲಿದ್ದಾರೆ. ಇನ್ನು ಟೆಸ್ಟ್ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆಯಲಿದ್ದಾರೆ.

ಅತ್ತ ಟಿ20 ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರನ್ನು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್​ವರೆಗೆ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ. ಈ ವಿಶ್ವಕಪ್ ಬೆನ್ನಲ್ಲೇ ಶುಭ್​ಮನ್ ಗಿಲ್​ಗೆ ಟಿ20 ತಂಡದ ಸಾರಥ್ಯ ನೀಡಲಿದ್ದಾರೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾ ಬಿಗ್ ಅಪ್​ಡೇಟ್​:

  • ರೋಹಿತ್ ನಂತರ ಶ್ರೇಯಸ್ ಅಯ್ಯರ್ ಅವರನ್ನು ಏಕದಿನ ತಂಡ ನಾಯಕನನ್ನಾಗಿ ನೇಮಿಸಲಿದ್ದಾರೆ.
  • ಸೂರ್ಯಕುಮಾರ್ ಯಾದವ್ ನಂತರ ಟಿ20 ತಂಡದ ನಾಯಕತ್ವ ಶುಭ್​ಮನ್ ಗಿಲ್​ಗೆ ಒಲಿಯಲಿದೆ.
  •  ಬಿಸಿಸಿಐ ಮೂರು ಸ್ವರೂಪಗಳಲ್ಲಿ ಇಬ್ಬರು ನಾಯಕರೊಂದಿಗೆ ಮುಂದುವರಿಯಲು ನೋಡುತ್ತಿದೆ.
  • ಏಷ್ಯಾ ಕಪ್ ನಂತರ, ಏಕದಿನ ತಂಡದ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ.
  • ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ದೀರ್ಘಕಾಲದವರೆಗೆ ನಾಯಕತ್ವ ನೀಡಲು ನಿರ್ಧರಿಸಲಾಗಿದೆ.
  •  ರೋಹಿತ್ ಶರ್ಮಾ ಅವರ ಏಕದಿನ ಭವಿಷ್ಯ ಬಗ್ಗೆ ಏಷ್ಯಾಕಪ್ ಬಳಿಕ ಬಿಸಿಸಿಐ ಚರ್ಚೆ ನಡೆಸಲಿದೆ.
  • 2027ರ ಏಕದಿನ ವಿಶ್ವಕಪ್​ಗೆ ಏಷ್ಯಾಕಪ್ ಬಳಿಕ ತಂಡ ರೂಪಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್.

ಇದನ್ನೂ ಓದಿ: IPL 2026: 6 ಆಟಗಾರರನ್ನು ಕೈ ಬಿಡಲಿದೆ RCB

ಏಷ್ಯಾಕಪ್ ಯಾವಾಗ ಶುರು?

ಏಷ್ಯಾಕಪ್ 2025 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಆಡಲಿದೆ. ಇನ್ನು ಸೆಪ್ಟೆಂಬರ್ 14 ರಂದು ನಡೆಯಲಿರುವ ತನ್ನ ದ್ವಿತೀಯ ಪಂದ್ಯದಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಇನ್ನು ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾದ ಕೊನೆಯ ಎದುರಾಳಿ ಒಮಾನ್. ಈ ಪಂದ್ಯವು ಸೆಪ್ಟೆಂಬರ್ 19 ರಂದು ನಡೆಯಲಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?