AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England : ಚೆಂಡಿಗೆ ಎಂಜಲು ಮೆತ್ತಿ ಅಂಪೈರ್​ನಿಂದ ಎಚ್ಚರಿಕೆ ಪಡೆದ ಬೆನ್ ಸ್ಟೋಕ್ಸ್

ಸ್ಟೋಕ್ಸ್ ಆಕಸ್ಮಿಕವಾಗಿ ಎಸೆಗಿದ ಪ್ರಮಾದವನ್ನು ಗಮನಿಸಿದ ಆನ್-ಫಿಲ್ಡ್ ಅಂಪೈರ್ ವಿರೇಂದ್ರ ಶರ್ಮ ಆಂಗ್ಲರ ಆಗ್ರಮಾನ್ಯ ಆಲ್​ರೌಂಡರ್​ಗೆ ಎಚ್ಚರಿಕೆ ನೀಡಿದರು. ನೀತಿಸಂಹಿತೆ ಪ್ರಕಾರ ಆ ಬಾಲನ್ನು ಸ್ಯಾನಿಟೈಸ್ ಮಾಡಿದ ನಂತರವೇ ಪುನಃ ಉಪಯೋಗಿಸಲಾಯಿತು.

India vs England : ಚೆಂಡಿಗೆ ಎಂಜಲು ಮೆತ್ತಿ ಅಂಪೈರ್​ನಿಂದ ಎಚ್ಚರಿಕೆ ಪಡೆದ ಬೆನ್ ಸ್ಟೋಕ್ಸ್
ಚೆಂಡಿಗೆ ಎಂಜಲು ಮೆತ್ತಿ ವಿವಾದಕ್ಕೊಳಗಾದ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 26, 2021 | 8:45 PM

Share

ಪುಣೆ: ಕೊವಿಡ್-19 ಪಿಡುಗು ವಿಶ್ವದಾದ್ಯಂತ ಹಬ್ಬಿದ ನಂತರ ಕ್ರಿಕೆಟ್​ ಪಂದ್ಯಗಳಲ್ಲಿ ಚೆಂಡಿಗೆ ಆಟಗಾರರು ತಮ್ಮ ಬಾಯಿ ಎಂಜಲನ್ನು (saliva) ಹಚ್ಚಿ ಹೊಳಪು ತರುವ ಪ್ರಯತ್ನ ಮಾಡಬಾರದೆಂದು ಅಂತರರಾಷ್ಟ್ರಿಯ ಕ್ರಿಕೆಟ್ ಕೌನ್ಸಿಲ್ ಅಂತ ಎಲ್ಲಾ ಸದಸ್ಯರ ರಾಷ್ಟ್ರಗಳಿಗೆ ನಿರ್ದೇಶನ ಜಾರಿ ಮಾಡಿತು. ಆ ನಿಯಮವನ್ನು ಕೇವಲ ಅಂತರರಾಷ್ಟ್ರೀಯ ಪಂದ್ಯಗಳಲ್ಲಷ್ಟೇ ಅಲ್ಲ ಆಯಾ ದೇಶಗಳಲ್ಲಿ ನಡೆಯುವ ಡೊಮೆಸ್ಟಿಕ್ ಕ್ರಿಕೆಟ್​ನಲ್ಲೂ ಆ ನಿಯಮವನ್ನು ಆನೂಚಾನಾಗಿ ಪಾಲಿಸಲಾಗುತ್ತಿದೆ. ಆದರೆ, ಈ ನಿಯಮವನ್ನು ಉಲ್ಲಂಘಿಸುವ ಸಂದರ್ಭಗಳು ಕ್ರಿಕೆಟ್​ ಮೈದಾನಗಳಲ್ಲಿ ಆಗಾಗ ಘಟಿಸುತ್ತಿವೆ. ಇಂದು (ಶುಕ್ರವಾರ) ಭಾರತ ಮತ್ತು ಇಂಗ್ಲೆಂಡ್​ ಮಧ್ಯೆ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಒಂದು ದಿನದ ಪಂದ್ಯದ ಆರಂಭಿಕ ಹಂತದಲ್ಲಿ ನಡೆದ ಘಟನೆಯನ್ನೇ ಗಮನಿಸಿ. ಭಾರತದ ಇನ್ನಿಂಗ್ಸ್​ನ 4ನೇ ಓವರ್​ನಲ್ಲಿ ಇಂಗ್ಲೆಂಡ್ ಟೀಮಿನ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಚೆಂಡಿಗೆ ಎಂಜಲನ್ನು ಹಚ್ಚಿ ಫೀಲ್ಡ್​ ಅಂಪೈರ್​ನಿಂದ ಎಚ್ಚರಿಕೆಗೊಳಗಾದರು.

ಸ್ಟೋಕ್ಸ್ ಆಕಸ್ಮಿಕವಾಗಿ ಎಸೆಗಿದ ಪ್ರಮಾದವನ್ನು ಗಮನಿಸಿದ ಆನ್-ಫಿಲ್ಡ್ ಅಂಪೈರ್ ವಿರೇಂದ್ರ ಶರ್ಮ ಆಂಗ್ಲರ ಆಗ್ರಮಾನ್ಯ ಆಲ್​ರೌಂಡರ್​ಗೆ ಎಚ್ಚರಿಕೆ ನೀಡಿದರು. ನೀತಿಸಂಹಿತೆ ಪ್ರಕಾರ ಆ ಬಾಲನ್ನು ಸ್ಯಾನಿಟೈಸ್ ಮಾಡಿದ ನಂತರವೇ ಪುನಃ ಉಪಯೋಗಿಸಲಾಯಿತು. ಅಂಪೈರ್ ಶರ್ಮ, ಸ್ಟೋಕ್ಸ್​ಗೆ ವಾರ್ನ್​ ಮಾಡಿದ ನಂತರ ಇಂಗ್ಲೆಂಡ್​ನ ಸ್ಟ್ಯಾಂಡ್-ಇನ್ ನಾಯಕ ಜೊಸ್ ಬಟ್ಲರ್ ಅವರೊಂದಿಗೆ ಸಮಾಲೋಚನೆ ನಡೆಸಿ, ಮತ್ತೊಮ್ಮೆ ಅಂಥ ಘಟನೆ ಪುನರಾವರ್ತನೆಗೊಂಡರೆ ಅವರ ತಂಡಕ್ಕೆ 5 ರನ್​ಗಳ ದಂಡ ವಿಧಿಸಲಾಗುವುದೆಂದು ಹೇಳಿದರು.

ಇಂಗ್ಲೆಂಡ್ ಎಡಗೈ ವೇಗದ ಬೌಲರ್​ ರೀಸ್ ಟಾಪ್ಲೀ ಅವರು ಭಾರತದ ಇನ್ನಿಂಗ್ಸ್​ನ 4ನೇ ಓವರ್ ಎಸೆಯುತ್ತಿದ್ದಾಗ ಮತ್ತು ಅತಿಥೇಯರ ಸ್ಕೋರ್ ವಿಕೆಟ್​ ನಷ್ಟವಿಲ್ಲದೆ 8 ಆಗಿದ್ದಾಗ ಎಂಜಲು ಹಚ್ಚುವ ಘಟನೆ ನಡೆಯಿತು. ಆದರೆ, ಸ್ಟೋಕ್ಸ್​ ಚೆಂಡಿಗೆ ಎಂಜಲು ಹಚ್ಚಿ ಸಿಕ್ಕಿ ಬಿದ್ದರೋದು ಇದೇ ಮೊದಲ ಸಲವೇನಲ್ಲ. ಭಾರತ ಮತ್ತು ಇಂಗ್ಲೆಂಡ್​ ನಡುವೆ ಅಹಮದಾಬಾದಿನಲ್ಲಿ ನಡೆದ ಪಿಂಕ್-ಬಾಲ್​ ಟೆಸ್ಟ್​ನಲ್ಲೂ ಅವರು ಹಾಗೆ ಮಾಡಿದ್ದರು.

Eoin Morgan

ಅಂಗೈಗೆ ಗಾಯ ಮಾಡಿಕೊಂಡಯ ಸರಣಯಿಂದ ಹೊರಬಿದ್ದಿರುವ ಇಂಗ್ಲೆಂಡ್​ ನಾಯಕ ಅಯಾನ್ ಮೊರ್ಗನ್

ಪುಣೆಯಲ್ಲಿ ಶುಕ್ರವಾರ ನಡೆಯುತ್ತಿರುವ ಎರಡನೇ ಒಡಿಐ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮತ್ತೊಮ್ಮೆ ಮೊದಲು ಫೀಲ್ಡ್​ ಮಾಡುವ ನಿರ್ಧಾರ ತೆಗೆದುಕೊಂಡಿತು.

ಇದೇ ಮೈದಾನದಲ್ಲಿ ನಡೆದ ಮೊದಲ ಒಡಿಐ ಪಂದ್ಯದಲ್ಲಿ ಫೀಲ್ಡ್​ ಮಾಡುವಾಗ ಹೆಬ್ಬೆರಳು ಮತ್ತು ತೋರು ಬೆರಳಿನ ಮಧ್ಯದ ಭಾಗವನ್ನು ಹರಿದುಕೊಂಡ ಇಂಗ್ಲೆಂಡ್​ ನಾಯಕ ಆಯಾನ್ ಮೊರ್ಗನ್ ಎರಡನೇ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಅವರ ಅಂಗೈಯಲ್ಲಿ ನಾಲ್ಕು ಹೊಲಿಗೆಗಳು ಬಿದ್ದಿವೆ. ಗಮನಾರ್ಹ ಸಂಗತಿಯೆಂದರೆ, ಆ ಪರಿ ಗಾಯಗೊಂಡಿದ್ದರೂ ಅವರು ಬ್ಯಾಟಿಂಗ್ ಮಾಡಲು ಆಗಮಿಸಿದ್ದರು.

ಅದೇ ಪಂದ್ಯದಲ್ಲಿ ಸ್ಯಾಮ್ ಬಿಲ್ಲಿಂಗ್ಸ್ ಸಹ ಭುಜದ ಸಮಸ್ಯೆಗೊಳಗಾಗಿದ್ದಿರಿಂದ ಅವರ ಸ್ಥಾನದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್​ಗೆ ಪದಾರ್ಪಣೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ, ವೇಗದ ಬೌಲರ್ ಮಾರ್ಕ್​ ವುಡ್​ ಅವರ ಸ್ಥಾನದಲ್ಲಿ ಟಾಪ್ಲೀ ಆಡುತ್ತಿದ್ದಾರೆ.

ಭಾರತದ ತಂಡದಲ್ಲೂ ಒಂದು ಅನಿವಾರ್ಯತೆಯ ಬದಲಾವಣೆ ಮಾಡಲಾಗಿದೆ. ಫೀಲ್ಡಿಂಗ್ ಮಾಡುವಾಗ ಭುಜದ ಮೂಳೆ ಡಿಸ್​ಪ್ಲೇಸ್ ಮಾಡಿಕೊಂಡ ಶ್ರೇಯಸ್ ಅಯ್ಯರ್ ಚೇತರಿಸಿಕೊಳ್ಳಲು ಕನಿಷ್ಠ 4-5 ವಾರಗಳು ಬೇಕೆಂದು ಹೇಳಲಾಗುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಕೂಡ ಆಗಿರುವ ಅಯ್ಯರ್ ಇಂಡಿಯನ್ ಪ್ರಿಮೀಯರ್ ಲೀಗ್​ನ ಮೊದಲಾರ್ಧವನ್ನು ತಪ್ಪಿಸಿಕೊಳ್ಳಲಿದ್ದಾರೆ. ಅಯ್ಯರ್ ಸ್ಥಾನದಲ್ಲಿ ವಿಕೆಟ್​-ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಅವರಿಗೆ ಆಡುವ ಇಲೆವೆನ್​ನಲ್ಲಿ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: India vs England | ಸ್ಟೋಕ್ಸ್ ಆಡುವ ಉತ್ಸುಕತೆ ತೋರಿದ್ದರಿಂದ ಅವರಿಗೆ ವಿಶ್ರಾಂತಿ ನೀಡಿಲ್ಲ: ಅಯಾನ್ ಮೊರ್ಗನ್

Published On - 5:06 pm, Fri, 26 March 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!