Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಬಂಗಾಳ ರಣಜಿ ತಂಡದ 7 ಸದಸ್ಯರಿಗೆ ಕೊರೊನಾ ಸೋಂಕು! ತುರ್ತು ಸಭೆ ಕರೆದ ಸಿಎಬಿ

Ranji Trophy: ಮೂಲಗಳ ಪ್ರಕಾರ, ಆರು ಆಟಗಾರರಾದ ಸುದೀಪ್ ಚಟರ್ಜಿ, ಅನುಸ್ತುಪ್ ಮಜುಂದಾರ್, ಖಾಜಿ ಜುನೈದ್ ಸೈಫಿ, ಗೀತ್ ಪುರಿ, ಪ್ರದೀಪ್ತ ಪ್ರಮಾಣಿಕ್, ಸುರ್ಜಿತ್ ಯಾದವ್ ಮತ್ತು ಸಹಾಯಕ ಕೋಚ್ ಸೌರಶಿಶ್ ಲಾಹಿರಿ ಅವರು ವೈರಸ್ ಸೋಂಕಿಗೆ ಒಳಗಾಗಿದ್ದಾರೆ.

Ranji Trophy: ಬಂಗಾಳ ರಣಜಿ ತಂಡದ 7 ಸದಸ್ಯರಿಗೆ ಕೊರೊನಾ ಸೋಂಕು! ತುರ್ತು ಸಭೆ ಕರೆದ ಸಿಎಬಿ
ಬೆಂಗಾಲ್ ರಣಜಿ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on: Jan 03, 2022 | 4:49 PM

ಬೆಂಗಾಲ್ ರಣಜಿ ತಂಡದ ಏಳು ಸದಸ್ಯರ ಕೊರೊನಾ ಸೋಂಕು ತಗುಲಿದೆ. ಇದು ತಂಡದ ಸಿದ್ಧತೆಗಳಿಗೆ ಹೊಡೆತವನ್ನು ನೀಡಿದೆ. ವಿದರ್ಭ, ರಾಜಸ್ಥಾನ, ಕೇರಳ, ಹರಿಯಾಣ ಮತ್ತು ತ್ರಿಪುರಾ ಜೊತೆಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿರುವ ಬೆಂಗಾಲ್ ತನ್ನ ಮೊದಲ ಪಂದ್ಯವನ್ನು ಜನವರಿ 13 ರಿಂದ ಬೆಂಗಳೂರಿನಲ್ಲಿ ತ್ರಿಪುರಾ ವಿರುದ್ಧ ರಣಜಿ ಟ್ರೋಫಿಯಲ್ಲಿ ಆಡಲಿದೆ. ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ (ಸಿಎಬಿ) ಕಾರ್ಯದರ್ಶಿ ಸ್ನೇಹಶಿಶ್ ಗಂಗೂಲಿ ಹೇಳಿಕೆಯಲ್ಲಿ, “ಸಾಂಕ್ರಾಮಿಕ ರೋಗದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬಂಗಾಳ ಕ್ರಿಕೆಟ್ ಸಂಸ್ಥೆಯು ಸುರಕ್ಷತಾ ಕ್ರಮವಾಗಿ ಬಂಗಾಳದ ಎಲ್ಲಾ ಕ್ರಿಕೆಟಿಗರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಿದೆ ಎಂದು ಹೇಳಿದರು. ಈ ಪರೀಕ್ಷೆಯಲ್ಲಿ 7 ಸದಸ್ಯರಿಗೆ ಸೋಂಕು ತಗುಲಿದೆ. ಈ ನಿಟ್ಟಿನಲ್ಲಿ ಸಿಎಬಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ.

ಮೂಲಗಳ ಪ್ರಕಾರ, ಆರು ಆಟಗಾರರಾದ ಸುದೀಪ್ ಚಟರ್ಜಿ, ಅನುಸ್ತುಪ್ ಮಜುಂದಾರ್, ಖಾಜಿ ಜುನೈದ್ ಸೈಫಿ, ಗೀತ್ ಪುರಿ, ಪ್ರದೀಪ್ತ ಪ್ರಮಾಣಿಕ್, ಸುರ್ಜಿತ್ ಯಾದವ್ ಮತ್ತು ಸಹಾಯಕ ಕೋಚ್ ಸೌರಶಿಶ್ ಲಾಹಿರಿ ಅವರು ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಭಾನುವಾರ ಸಾಲ್ಟ್ ಲೇಕ್‌ನಲ್ಲಿರುವ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ತಂಡಗಳ ನಡುವೆ ನಡೆದ ಪಂದ್ಯದ ವೇಳೆ ಈ ಏಳು ಸದಸ್ಯರು ಹಾಜರಿದ್ದರು. ರಣಜಿ ಟ್ರೋಫಿಯನ್ನು ಜನವರಿ 13 ರಿಂದ ಆಯೋಜಿಸಲಾಗಿದೆ. ಆದರೆ, ಅದಕ್ಕೂ ಮೊದಲು ತಂಡದಲ್ಲಿ ಹಲವಾರು ಕೊರೊನಾ ಸೋಂಕಿಗೆ ಒಳಗಾದ ನಂತರ, ಈಗ ಬಿಸಿಸಿಐ ದೇಶೀಯ ಪಂದ್ಯಾವಳಿಯನ್ನು ಆಯೋಜಿಸುವ ಬಗ್ಗೆ ಮರುಪರಿಶೀಲನೆ ನಡೆಸಬಹುದು.

ಬಂಗಾಳದ ಅಭ್ಯಾಸ ಪಂದ್ಯ ರದ್ದು ಮೂಲಗಳು ಪ್ರಕಾರ, ಸೋಂಕಿತರು ಯಾವ ಕೋವಿಡ್‌ ಸೋಂಕಿಗೆ ಒಳಗಾಗಿದ್ದಾರೆಂದು ಇನ್ನೂ ತಿಳಿದಿಲ್ಲ, ಮಾರ್ಗಸೂಚಿಗಳ ಪ್ರಕಾರ ಅವರನ್ನು ಪ್ರತ್ಯೇಕಿಸಲಾಗಿದೆ. ಈ ಹೊಸ ಬೆಳವಣಿಗೆಯಿಂದಾಗಿ ಪೃಥ್ವಿ ಶಾ ನೇತೃತ್ವದ ಮುಂಬೈ ತಂಡದ ವಿರುದ್ಧ ಬೆಂಗಾಲ್ ನ ಎರಡು ದಿನಗಳ ಅಭ್ಯಾಸ ಪಂದ್ಯ ರದ್ದಾಗಿದೆ.ಎರಡನೇ ಅಭ್ಯಾಸ ಪಂದ್ಯದಲ್ಲಿ ಬೆಂಗಾಲ್ ಭಾಗವಹಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

CAB ತುರ್ತು ಸಭೆಯನ್ನು ಕರೆದಿದೆ ಇದಲ್ಲದೆ, CAB ಎಲ್ಲಾ ಸ್ಥಳೀಯ ಪಂದ್ಯಾವಳಿಗಳನ್ನು ನಿಲ್ಲಿಸಲು ನಿರ್ಧರಿಸಿದೆ. ಕೊರೊನಾ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಲು ಮಂಗಳವಾರ ಉನ್ನತ ಅಧಿಕಾರಿಗಳ ತುರ್ತು ಸಭೆಯನ್ನು ಕರೆದಿದೆ. ಸಿಎಬಿ ಅಧ್ಯಕ್ಷ ಅವಿಶೇಕ್ ದಾಲ್ಮಿಯಾ ಮತ್ತು ಕಾರ್ಯದರ್ಶಿ ಸ್ನೋಶಿಶ್ ಜಂಟಿ ಹೇಳಿಕೆಯಲ್ಲಿ, ಸಾಂಕ್ರಾಮಿಕ ರೋಗದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಭೆ ನಡೆಯುವವರೆಗೆ ಎಲ್ಲಾ ಸ್ಥಳೀಯ ಪಂದ್ಯಾವಳಿಗಳನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಮುಂಬೈನ ಆಲ್ ರೌಂಡರ್ ಶಿವಂ ದುಬೆ ಅವರಿಗೂ ಕೊರೊನಾ ಸೋಂಕು ತಗುಲಿದೆ ಬಂಗಾಳದ ರಣಜಿ ತಂಡದ 7 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಮುಂಬೈ ಆಲ್‌ರೌಂಡರ್ ಶಿವಂ ದುಬೆ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮುಂಬೈನ 20 ಮಂದಿಯ ರಣಜಿ ತಂಡದಲ್ಲಿ ದುಬೆ ಬದಲಿಗೆ ಸಾಯಿರಾಜ್ ಪಾಟೀಲ್ ಸೇರ್ಪಡೆಗೊಂಡಿದ್ದಾರೆ.

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ