AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯ ನಡೆಸಬೇಕೆಂದರೆ..; ಕೆಎಸ್​ಸಿಎಗೆ 17 ಷರತ್ತುಗಳನ್ನು ವಿಧಿಸಿದ ಬೆಂಗಳೂರು ಪೊಲೀಸರು

Bengaluru Police Impose 17 Conditions: ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್​ಸಿಎ)ಗೆ ಬೆಂಗಳೂರು ನಗರ ಪೊಲೀಸರು 17 ಷರತ್ತುಗಳನ್ನು ವಿಧಿಸಿದ್ದಾರೆ. ಪಾರ್ಕಿಂಗ್, ಮಹಿಳಾ ಮತ್ತು ಮಕ್ಕಳಿಗೆ ಪ್ರತ್ಯೇಕ ಮಾರ್ಗ, ಬ್ಯಾಗ್ ಸ್ಕ್ಯಾನರ್, ತುರ್ತು ನಿರ್ಗಮನ, ಪ್ರಥಮ ಚಿಕಿತ್ಸಾ ಸೌಲಭ್ಯ ಮುಂತಾದವು ಷರತ್ತುಗಳಲ್ಲಿ ಸೇರಿವೆ. 15 ದಿನಗಳೊಳಗೆ ಈ ಷರತ್ತುಗಳನ್ನು ಪೂರ್ಣಗೊಳಿಸಿದರೆ ಮಾತ್ರ ಪಂದ್ಯಕ್ಕೆ ಅನುಮತಿ ನೀಡುವ ಸೂಚನೆ ನೀಡಲಾಗಿದೆ.

ಪಂದ್ಯ ನಡೆಸಬೇಕೆಂದರೆ..; ಕೆಎಸ್​ಸಿಎಗೆ 17 ಷರತ್ತುಗಳನ್ನು ವಿಧಿಸಿದ ಬೆಂಗಳೂರು ಪೊಲೀಸರು
ಚಿನ್ನಸ್ವಾಮಿ ಕ್ರೀಡಾಂಗಣ
ಪೃಥ್ವಿಶಂಕರ
|

Updated on:Aug 22, 2025 | 7:09 PM

Share

ಕೆಲವೇ ತಿಂಗಳುಗಳ ಹಿಂದೆ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್​ಗೆ (IPL) ರಾಜಾತಿಥ್ಯ ನೀಡಿದ್ದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ ಯಾವುದೇ ಪಂದ್ಯಗಳು ನಡೆಯುವುದಿಲ್ಲವೇನೋ ಎಂಬ ಆತಂಕ ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಮೂಡಿತ್ತು. ಇದಕ್ಕೆ ಕಾರಣ ಅದೊಂದು ಘೋರ ದುರಂತ. 18 ವರ್ಷಗಳ ಬಳಿಕ ಐಪಿಎಲ್ ಪ್ರಶಸ್ತಿಯ ಬರ ನೀಗಿಸಿಕೊಂಡಿದ್ದ ಆರ್​ಸಿಬಿ (RCB), ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆ ನಡೆಸುವ ಸಲುವಾಗಿ ಸಡಗರದಿಂದಲೇ ಬೆಂಗಳೂರಿಗೆ ಬಂದಿಳಿದಿತ್ತು. ಆದರೆ ಈ ಸಂಭ್ರಮಕ್ಕೆ ಕೆಲವೇ ಗಂಟೆಗಳಲ್ಲಿ ಸೂತಕದ ಛಾಯೆ ಆವರಿಸಿತು. ತನ್ನ ನೆಚ್ಚಿನ ಆಟಗಾರರನ್ನು ಹತ್ತಿರದಿಂದ ನೋಡುವ ಆಸೆಯಿಂದ ಚಿನ್ನಸ್ವಾಮಿ (M. Chinnaswamy Stadium) ಮೈದಾನದತ್ತ ಬಂದ ಅಭಿಮಾನಿಗಳು ಸಾವಿನ ಮನೆ ಕದ ತಟ್ಟಿದ್ದರು.

2 ಪ್ರಮುಖ ಪಂದ್ಯಾವಳಿಗಳು ಶಿಫ್ಟ್

ಈ ದುರಂತದ ಬಳಿಕ ರಾಜ್ಯ ಸರ್ಕಾರ, ನ್ಯಾಯಮುರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಆ ಸಮಿತಿಯು ಚಿನ್ನಸ್ವಾಮಿ ಕ್ರೀಡಾಂಗಣ ಯಾವುದೇ ದೊಡ್ಡ ಸಮಾರಂಭಗಳ ಆಯೋಜನೆಗೆ ಯೋಗ್ಯವಾಗಿಲ್ಲ ಎಂಬ ವರದಿ ನೀಡಿತ್ತು. ಆ ಬಳಿಕ ಈ ಮೈದಾನದಲ್ಲಿ ನಡೆಯಬೇಕಿದ್ದ ಮಹಾರಾಜ ಟಿ20 ಟ್ರೋಫಿ ಆಯೋಜನೆಗೆ ನಗರದ ಪೊಲೀಸರಿಂದ ಅನುಮತಿ ಸಿಗಲಿಲ್ಲ. ಹೀಗಾಗಿ ಈ ಟೂರ್ನಿಯನ್ನು ಮೈಸೂರಿಗೆ ಸ್ಥಳಾಂತರಿಸಲಾಯಿತು. ಇದೀಗ ಇದೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಮಹಿಳೆಯ ಏಕದಿನ ವಿಶ್ವಕಪ್​ ಪಂದ್ಯಗಳನ್ನು ಸಹ ನವಿ ಮುಂಬೈಗೆ ಶಿಫ್ಟ್ ಮಾಡಲಾಗಿದೆ.

17 ಷರತ್ತು ವಿಧಿಸಿದ ಪೊಲೀಸರು

ಇದರಿಂದಾಗಿ ಇನ್ನು ಮುಂದೆ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯುವುದಿಲ್ಲವಾ ಎಂಬ ಪ್ರಶ್ನೆಗಳು ಮೂಡಿದ್ದವು. ಆದರೀಗ ನಗರದ ಪೊಲೀಸರು ಕೆಎಸ್​ಸಿಎಗೆ 17 ಷರತ್ತುಗಳನ್ನು ವಿಧಿಸಿದ್ದು, ಈ ಷರತ್ತುಗಳನ್ನು ಪೂರ್ಣಗೊಳಿಸಿದರೆ ಪಂದ್ಯ ನಡೆಸಲು ಅನುಮತಿ ನೀಡುವ ಸುಳಿವು ನೀಡಿದ್ದಾರೆ. ಅಲ್ಲದೆ 15 ದಿನದೊಳಗೆ ಷರತ್ತುಗಳನ್ನು ಪೂರೈಸುವಂತೆ ಕೆಎಸ್​ಸಿಎಗೆ ಡೆಡ್ ಲೈನ್ ಕೂಡ ನೀಡಲಾಗಿದೆ.

ನಗರ ಪೊಲೀಸರು ಕೆಎಸ್​ಸಿಎಗೆ ವಿಧಿಸಿದ 17 ಷರತ್ತುಗಳಿವು

  • ಬರುವ ವಾಹನಗಳಿಗಾಗಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.
  • ಮಹಿಳೆಯರು ಮತ್ತು ಮಕ್ಕಳಿಗೆ ಪ್ರತ್ಯೇಕವಾದ ಮಾರ್ಗ
  • ಎಲ್ಲಾ ಕಡೆಯಲ್ಲೂ ಬ್ಯಾಗ್ ಸ್ಕ್ಯಾನರ್ ಇನ್ಸ್ಟಾಲೇಷನ್ ಮಾಡಬೇಕು
  • ಅವಘಡ ಸಂಭವಿಸಿದಾಗ ತೆರಳಲು ಸುರಕ್ಷಿತ ಸ್ಥಳವನ್ನು ಗುರುತಿಸಬೇಕು
  • ಜನಸಮೂಹ ಮಾನಿಟರ್ ಮಾಡುವ ವ್ಯವಸ್ಥೆ ಇರಬೇಕು
  • ಶಾಶ್ವತವಾಗಿ ಪ್ರಥಮ ಚಿಕಿತ್ಸೆ ಸೌಲಭ್ಯ ಕಲ್ಪಿಸಬೇಕು
  • ಪ್ರತ್ಯೇಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸೊ ವ್ಯವಸ್ಥೆ
  • ಆಟಗಾರರಿಗೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ದ್ವಾರ ಇರಬೇಕು
  • ಪ್ರತಿ ಬಾರಿಯು ಪೊಲೀಸರಿಂದ ಅನುಮತಿ ಕಡ್ಡಾಯ
  • ತುರ್ತು ನಿರ್ಗಮನ ವ್ಯವಸ್ಥೆ ಕಡ್ಡಾಯವಾಗಿರಬೇಕು
  • ವಿಪತ್ತು ನಿರ್ವಹಣೆ ಮಾರ್ಗಸೂಚಿ ಫಾಲೊ ಮಾಡಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Fri, 22 August 25

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್