AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಹರಿಣಗಳ ವಿರುದ್ಧದ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾ ಬೌಲರ್​ಗಳಿವರು

IND vs SA: ಇಂದು ಕೇರಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ಈ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿದೆ.

IND vs SA: ಹರಿಣಗಳ ವಿರುದ್ಧದ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾ ಬೌಲರ್​ಗಳಿವರು
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on:Sep 28, 2022 | 2:33 PM

Share

ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ (South Africa and India) ನಡುವೆ ನಡೆಯಲಿದೆ. ಹೀಗಾಗಿ ಎರಡೂ ತಂಡಗಳು ಕೇರಳ ತಲುಪಿದ್ದು, ಇಂದು ಕೇರಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ಈ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಭಾರತ-ಆಫ್ರಿಕಾ T20 ಪಂದ್ಯದ ಎಲ್ಲಾ ಟಿಕೆಟ್‌ಗಳು ಬಹುತೇಕ ಮಾರಾಟವಾಗಿದ್ದು, ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅದಕ್ಕೂ ಮುನ್ನ ಈ ಎರಡು ತಂಡಗಳು ಹಲವು ಬಾರಿ ಮುಖಾಮುಖಿಯಾಗಿದ್ದು, ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಭರ್ಜರಿ ಪ್ರದರ್ಶನವನ್ನೇ ನೀಡಿದೆ. ಅದರಲ್ಲೂ ಬೌಲಿಂಗ್ ವಿಭಾಗದಲ್ಲಿ ವೇಗಿ ಭುವನೇಶ್ವರ್ ಕುಮಾರ್ (Bhuvneshwar Kumar) ಆಫ್ರಿಕಾ ವಿರುದ್ಧ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಸಹ ಮಾಡಿದ್ದಾರೆ.

ಹರಿಣಗಳ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳಿವರು

  1. ಭುವನೇಶ್ವರ್ ಕುಮಾರ್ ಹರಿಣಗಳ ವಿರುದ್ಧ ಆಡಿರುವ 10 ಪಂದ್ಯಗಳಲ್ಲಿ ಪ್ರಮುಖ 14 ವಿಕೆಟ್ ಪಡೆದಿದ್ದಾರೆ. ಜೊತೆಗೆ ಭುವನೇಶ್ವರ್ ಕುಮಾರ್ ಒಂದೇ ಪಂದ್ಯದಲ್ಲಿ 5 ವಿಕೆಟ್ ಪಡೆದ ಸಾಧನೆಯನ್ನು ಸಹ ಮಾಡಿದ್ದಾರೆ.
  2. ಭುವಿಯ ನಂತರದ ಸ್ಥಾನ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್​ ಆರ್ ಅಶ್ವಿನ್ ಪಾಲಾಗಿದ್ದು, ಇದುವರೆಗೆ ಈ ಕ್ಯಾರಂ ಸ್ಪಿನ್ನರ್ ದಕ್ಷಿಣ ಆಫ್ರಿಕಾ ವಿರುದ್ಧ 6 ಪಂದ್ಯಗಳನ್ನು ಆಡಿ 10 ವಿಕೆಟ್ ಪಡೆದಿದ್ದಾರೆ.
  3. ಇದನ್ನೂ ಓದಿ
    Image
    IND vs SA: ಏಕದಿನ- ಟಿ20 ಸರಣಿಗಾಗಿ ಭಾರತಕ್ಕೆ ಕಾಲಿಟ್ಟ ದಕ್ಷಿಣ ಆಫ್ರಿಕಾ ಪಡೆ; ಮೊದಲ ಪಂದ್ಯ ಯಾವಾಗ?
    Image
    IND vs SA: ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದಲ್ಲಿದ್ದ ಸಮಸ್ಯೆಗಳಿಗೆ ಸಿಕ್ಕ ಪರಿಹಾರಗಳಿವು
    Image
    IND vs SA: ಇದೇನ ಸಭ್ಯತೆ? ಸೆಲ್ಫಿ ಕೇಳಿದ ಗ್ರೌಂಡ್ಸ್‌ಮನ್ ಜೊತೆ ರುತುರಾಜ್ ಅನುಚಿತ ವರ್ತನೆ..! ವಿಡಿಯೋ ನೋಡಿ
  4. ಅಶ್ವಿನ್ ನಂತರ ಯುಜುವೇಂದ್ರ ಚಹಲ್ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಒಟ್ಟು 6 ಪಂದ್ಯಗಳನ್ನಾಡಿರುವ ಚಹಲ್ 7 ವಿಕೆಟ್ ಪಡೆದಿದ್ದಾರೆ.
  5. ಈ ಮೂವರ ಬಳಿಕ ಸ್ಥಾನ ಪಡೆದಿರುವ ಹರ್ಷಲ್ ಪಟೇಲ್ ನಾಲ್ಕು ಪಂದ್ಯಗಳಲ್ಲಿ 7 ವಿಕೆಟ್ ಪಡೆದಿದ್ದಾರೆ.
  6. ಟೀಂ ಇಂಡಿಯಾದ ವೇಗಿ ಜಹೀರ್ ಖಾನ್ ಕೂಡ ಮೂರು ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದು, ಹರಿಣಗಳ ವಿರುದ್ಧ ಮಾರಕ ಬೌಲಿಂಗ್ ಮಾಡಿದ ಟಾಪ್ 5 ಬೌಲರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಉಭಯ ತಂಡಗಳು ಹೀಗಿವೆ

ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ಕೀಪರ್), ದಿನೇಶ್ ಕಾರ್ತಿಕ್ (ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಶಹಬಾಜ್ ಅಹ್ಮದ್, ಶ್ರೇಯಸ್ ಅಯ್ಯರ್.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.

Published On - 2:33 pm, Wed, 28 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ