AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhuvneshwar Kumar: 5 ವರ್ಷ ಗೆರೆ ದಾಟದ ಟೀಮ್ ಇಂಡಿಯಾ ವೇಗಿ: ಅಪರೂಪದ ಸಾಧನೆ ಮೆರೆದ ಭುವಿ..!

ಶ್ರೀಲಂಕಾ ಪರ ಅರ್ಧಶತಕ ಬಾರಿಸಿದ ಚರಿತ್ ಅಸಲಂಕಾ ಮತ್ತು ಅವಿಷ್ಕಾ ಫರ್ನಾಂಡೊ ಅವರ ವಿಕೆಟ್ ಪಡೆದರು. ಹಾಗೆಯೇ ದುಷ್ಮಂತ್ ಚಮಿರಾ ಅವರನ್ನು ಔಟ್ ಮಾಡಿದರು.

Bhuvneshwar Kumar: 5 ವರ್ಷ ಗೆರೆ ದಾಟದ ಟೀಮ್ ಇಂಡಿಯಾ ವೇಗಿ: ಅಪರೂಪದ ಸಾಧನೆ ಮೆರೆದ ಭುವಿ..!
Bhuvneshwar Kumar
TV9 Web
| Edited By: |

Updated on: Jul 20, 2021 | 9:01 PM

Share

ಶ್ರೀಲಂಕಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ (Bhuvneshwar Kumar) ಪರಿಣಾಮಕಾರಿಯಾಗಿರಲಿಲ್ಲ. ಆದರೆ ದ್ವಿತೀಯ ಏಕದಿನ ಪಂದ್ಯದಲ್ಲಿ ಇನ್​ ಸ್ವಿಂಗ್ – ಔಟ್ ಸ್ವಿಂಗ್ ಮೂಲಕ ಲಂಕಾ ಬ್ಯಾಟ್ಸ್​ಮನ್​ಗಳನ್ನು ಕಾಡುವಲ್ಲಿ ಭುವಿ ಯಶಸ್ವಿಯಾಗಿದ್ದರು. ಅಷ್ಟೇ ಅಲ್ಲದೆ 3 ವಿಕೆಟ್ ಉರುಳಿಸಿ ಮಿಂಚಿದರು. ಆದರೆ ಇಲ್ಲಿ ವಿಶೇಷತೆ ಎಂದರೆ ಈ ಪಂದ್ಯದಲ್ಲಿ ನೋ ಬಾಲ್ ಎಸೆದಿರುವುದು. ಕ್ರಿಕೆಟ್ ಅಂಗಳದಲ್ಲಿ ನೋಬಾಲ್ ಎಂಬುದು ಸಾಮಾನ್ಯವಾಗಿ ವಿಷಯವಾಗಿದ್ದರೂ, ಭುವಿ ಪಾಲಿಗೆ ನೋ ಬಾಲ್ ಎಂಬುದು ಅತೀ ಅಪರೂಪ.

ಹೌದು, ಶ್ರೀಲಂಕಾ (Sri Lanka) ವಿರುದ್ದ 5ನೇ ಓವರ್​ನಲ್ಲಿ ಭುವನೇಶ್ವರ್ ಕುಮಾರ್ ನೋ ಬಾಲ್ ಎಸೆದರು. 2015 ರ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭುವಿ ಕೊನೆಯ ಬಾರಿ ನೋ ಬಾಲ್ ಮಾಡಿದ್ದರು. ಇದಾಗಿ 515 ಓವರ್​ಗಳನ್ನು ಮಾಡಿದ್ದಾರೆ. ಅದರಲ್ಲಿ ಒಟ್ಟು 3093 ಎಸೆತಗಳನ್ನು ಎಸೆದಿದ್ದಾರೆ. ಅಂದರೆ 3093 ಬಾಲ್​ಗಳ ಬಳಿಕ ಭುವನೇಶ್ವರ್ ಕುಮಾರ್ ನೋ ಬಾಲ್ ಮಾಡಿದ್ದಾರೆ. ಅದು ಕೂಡ 5 ವರ್ಷಗಳ ಬಳಿಕ ಎಂಬುದು ವಿಶೇಷ.

ಇನ್ನು ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ನೋ ಬಾಲ್ ಎಸೆದರೂ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಶ್ರೀಲಂಕಾ ಪರ ಅರ್ಧಶತಕ ಬಾರಿಸಿದ ಚರಿತ್ ಅಸಲಂಕಾ ಮತ್ತು ಅವಿಷ್ಕಾ ಫರ್ನಾಂಡೊ ಅವರ ವಿಕೆಟ್ ಪಡೆದರು. ಹಾಗೆಯೇ ದುಷ್ಮಂತ್ ಚಮಿರಾ ಅವರನ್ನು ಔಟ್ ಮಾಡಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 275 ರನ್ ಕಲೆಹಾಕಿತು. ಟೀಮ್ ಇಂಡಿಯಾ (Team India) ಪರ ಭುವನೇಶ್ವರ್ ಕುಮಾರ್ ಹಾಗೂ ಯುಜುವೇಂದ್ರ ಚಹಲ್ ತಲಾ 2 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡರು.

ಉಭಯ ತಂಡಗಳು ಹೀಗಿವೆ:- ಶ್ರೀಲಂಕಾ (ಪ್ಲೇಯಿಂಗ್ ಇಲೆವೆನ್): ಅವಿಷ್ಕಾ ಫರ್ನಾಂಡೊ, ಮಿನೋದ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಾಸುನ್ ಶನಕಾ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಕಸುನ್ ರಾಜಿತಾ, ದುಶಮಂತ್ ಚಮೀರಾ, ಲಕ್ಷನ್ ಸನ್ದಕನ್

ಭಾರತ (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್

ಇದನ್ನೂ ಓದಿ: ಇದಪ್ಪಾ ಸೇಡು ಅಂದ್ರೆ!; ಶ್ರೀಲಂಕಾ ವಿರುದ್ದ ಭಾರತ ಸೋತು ಎಷ್ಟು ವರ್ಷಗಳಾಗಿವೆ ಗೊತ್ತಾ..?

ಇದನ್ನೂ ಓದಿ: ಕೃನಾಲ್ ಪಾಂಡ್ಯ ವರ್ತನೆಯಲ್ಲಿ ಸಖತ್ ಬದಲಾವಣೆ! ಇದು ರಾಹುಲ್ ದ್ರಾವಿಡ್ ಎಫೆಕ್ಟ್ ಎಂದ ನೆಟ್ಟಿಗರು; ವಿಡಿಯೋ

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ