AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಪಾಲಿಗೆ ದುಃಸ್ವಪ್ನವಾಗುತ್ತಿರುವ 19ನೇ ಓವರ್..!

Bhuvneshwar Kumar: ಈ ಸೋಲಿನ ಬೆನ್ನಲ್ಲೇ ಭಾರತ ತಂಡದ ಬೌಲರ್​ಗಳ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿ ಬರುತ್ತಿದೆ. ಅದರಲ್ಲೂ ಡೆತ್ ಓವರ್​ಗಳಲ್ಲಿ ಭುವನೇಶ್ವರ್ ಕುಮಾರ್ ದುಬಾರಿಯಾಗುತ್ತಿರುವುದು ಇದೀಗ ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ.

Team India: ಟೀಮ್ ಇಂಡಿಯಾ ಪಾಲಿಗೆ ದುಃಸ್ವಪ್ನವಾಗುತ್ತಿರುವ 19ನೇ ಓವರ್..!
Rohit-Bhuvi
TV9 Web
| Updated By: ಝಾಹಿರ್ ಯೂಸುಫ್|

Updated on:Sep 21, 2022 | 1:27 PM

Share

ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿನ ಬಳಿಕ ಟೀಮ್ ಇಂಡಿಯಾ (Team India) ಮತ್ತೊಂದು ಸೋಲು ಕಂಡಿದೆ. ಅದು ಕೂಡ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಅಂದರೆ ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ 208 ರನ್​ ಕಲೆಹಾಕಿದರೂ, ಟೀಮ್ ಇಂಡಿಯಾ ಸೋತಿದೆ. ಈ ಸೋಲಿಗೆ ಮುಖ್ಯ ಕಾರಣ ಟೀಮ್ ಇಂಡಿಯಾ ಬೌಲರ್​ಗಳ ಕಳಪೆ ಪ್ರದರ್ಶನ. ಏಕೆಂದರೆ ಆಸ್ಟ್ರೇಲಿಯಾಗೆ 6 ಓವರ್​ಗಳಲ್ಲಿ 64 ರನ್​ ಬೇಕಿದ್ದ ವೇಳೆ ಟೀಮ್ ಇಂಡಿಯಾ ಬೌಲರ್​ಗಳು ಹೆಚ್ಚಿನ ರನ್ ಬಿಟ್ಟುಕೊಟ್ಟರು. ಪರಿಣಾಮ 19.2 ಓವರ್​ಗಳಲ್ಲಿ 211 ರನ್ ಬಾರಿಸುವ ಮೂಲಕ ಆಸ್ಟ್ರೇಲಿಯಾ ತಂಡ 4 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತು.

ಈ ಸೋಲಿನ ಬೆನ್ನಲ್ಲೇ ಭಾರತ ತಂಡದ ಬೌಲರ್​ಗಳ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿ ಬರುತ್ತಿದೆ. ಅದರಲ್ಲೂ ಡೆತ್ ಓವರ್​ಗಳಲ್ಲಿ ಭುವನೇಶ್ವರ್ ಕುಮಾರ್ ದುಬಾರಿಯಾಗುತ್ತಿರುವುದು ಇದೀಗ ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಹೊಸ ಚೆಂಡಿನೊಂದಿಗೆ ಮಿಂಚುವ ಭುವಿ ಡೆತ್ ಓವರ್‌ಗಳಲ್ಲಿ (17 ನೇ ಮತ್ತು 19 ನೇ ಓವರ್‌ಗಳು) ದುಬಾರಿಯಾಗುತ್ತಾ ಬರುತ್ತಿದ್ದಾರೆ. ಕಳೆದ ಮೂರು ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವನ್ನು ಕಸಿದುಕೊಂಡಿದ್ದು 19ನೇ ಓವರ್ ಎಂಬುದು ಇಲ್ಲಿ ವಿಶೇಷ. ಈ ಮೂರು ಓವರ್​ಗಳನ್ನು ಎಸೆದಿರುವುದು ಭುವನೇಶ್ವರ್ ಕುಮಾರ್ ಎಂಬುದು ಮತ್ತೊಂದು ವಿಶೇಷ.

ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ 19ನೇ ಓವರ್ ಎಸೆದಿದ್ದ ಭುವನೇಶ್ವರ್​ ಕುಮಾರ್ 19 ರನ್​ ನೀಡಿದ್ದರು. ಇದರಿಂದ ಆ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಬೇಕಾಯಿತು. ಇನ್ನು ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲೂ 19ನೇ ಓವರ್​ನಲ್ಲಿ 14 ರನ್ ಬಿಟ್ಟುಕೊಟ್ಟಿದ್ದರು. ಆ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಪರಾಜಯಗೊಂಡಿತು.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದೀಗ ಆಸ್ಟ್ರೇಲಿಯಾ ವಿರುದ್ಧ 19ನೇ ಓವರ್​ನಲ್ಲಿ 16 ರನ್​ ನೀಡುವ ಮೂಲಕ ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್ ವಿಲನ್ ಆಗಿ ಹೊರಹೊಮ್ಮಿದ್ದಾರೆ. ಅಂದರೆ ಡೆತ್ ಓವರ್​ಗಳಲ್ಲಿ ಭುವಿ ಕಳಪೆ ದಾಖಲೆ ಹೊಂದಿದ್ದಾರೆ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

ಏಕೆಂದರೆ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ದ ಅಂತಿಮ ಹಂತದಲ್ಲಿ 2 ಓವರ್​ ಎಸೆದಿದ್ದ ಭುವಿ ನೀಡಿದ್ದು ಬರೋಬ್ಬರಿ 26 ರನ್​ಗಳು. ಹಾಗೆಯೇ ಶ್ರೀಲಂಕಾಗೆ ಗೆಲ್ಲಲು ಕೊನೆಯ ಎರಡು ಓವರ್‌ಗಳಲ್ಲಿ 21 ರನ್‌ಗಳ ಅಗತ್ಯವಿದ್ದಾಗ ಭುವನೇಶ್ವರ್ ಕುಮಾರ್‌ 19ನೇ ಓವರ್​ನಲ್ಲಿ 14 ರನ್ ನೀಡಿದರು. ಇದೀಗ ಆಸ್ಟ್ರೇಲಿಯಾ ವಿರುದ್ದ 4 ಓವರ್​ಗಳಲ್ಲಿ 52 ರನ್​ ಚಚ್ಚಿಸಿಕೊಳ್ಳುವ ಮೂಲಕ ಭುವಿ ಮತ್ತೊಮ್ಮೆ ಟೀಮ್ ಇಂಡಿಯಾ ಸೋಲಿಗೆ ಪ್ರಮುಖ ಕಾರಣರಾಗಿದ್ದಾರೆ.

ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಭುವನೇಶ್ವರ್​ ಕುಮಾರ್ ಪವರ್​ಪ್ಲೇ ವೇಳೆ 5.66 ರ ಸರಾಸರಿಯಲ್ಲಿ ನೀಡಿದ್ದರೆ, ಡೆತ್ ಓವರ್​ ವೇಳೆ 9.26 ಸರಾಸರಿಯಲ್ಲಿ ರನ್ ಬಿಟ್ಟುಕೊಡುತ್ತಾ ಬಂದಿದ್ದಾರೆ. ಅಂದರೆ ಡೆತ್​ ಓವರ್​ಗಳಲ್ಲಿ ಭುವಿ  10 ರನ್​ಗಳ ಅಸುಪಾಸಿನ ಸರಾಸರಿಯಲ್ಲಿ ರನ್ ನೀಡುತ್ತಿದ್ದಾರೆ. ಇದಾಗ್ಯೂ ಭುವನೇಶ್ವರ್ ಕುಮಾರ್ ಅವರನ್ನು ಡೆತ್​ ಓವರ್​ನಲ್ಲಿ ಬಳಸಿಕೊಳ್ಳುತ್ತಿರುವುದು ಏಕೆ ಎಂಬುದೇ ದೊಡ್ಡ ಪ್ರಶ್ನೆ.

Published On - 1:25 pm, Wed, 21 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?