AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಟಿ20 ವಿಶ್ವಕಪ್​ಗೆ ಹಾರ್ದಿಕ್ ಪಾಂಡ್ಯ ಆಯ್ಕೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಬೌಲಿಂಗ್ ಕೋಚ್

Team India: ಬೆನ್ನು ನೋವಿನಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ 2019 ರ ವಿಶ್ವಕಪ್ ಬಳಿಕ ಬೌಲಿಂಗ್ ಮಾಡುತ್ತಿರಲಿಲ್ಲ. ಇದಾಗ್ಯೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಒಂದೆರೆಡು ಓವರ್​ಗಳನ್ನು ಎಸೆದಿದ್ದರು.

Hardik Pandya: ಟಿ20 ವಿಶ್ವಕಪ್​ಗೆ ಹಾರ್ದಿಕ್ ಪಾಂಡ್ಯ ಆಯ್ಕೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಬೌಲಿಂಗ್ ಕೋಚ್
Hardik Pandya
TV9 Web
| Updated By: ಝಾಹಿರ್ ಯೂಸುಫ್|

Updated on:Aug 22, 2021 | 5:58 PM

Share

ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಮ್ ಇಂಡಿಯಾ (Team India) ಆಟಗಾರರು ಪ್ರಸ್ತುತ ಇಂಗ್ಲೆಂಡ್ (England) ಪ್ರವಾಸದಲ್ಲಿದ್ದಾರೆ. ಈ ಸರಣಿ ಬೆನ್ನಲ್ಲೇ ಐಪಿಎಲ್ (IPL 2021) ಆಟಗಾರರು ಯುಎಇಗೆ ಪ್ರಯಾಣ ಬೆಳೆಸಲಿದ್ದಾರೆ. ಇದರ ಬೆನ್ನಲ್ಲೇ ಟಿ20 ವಿಶ್ವಕಪ್ (T20 World Cup)​ ಕೂಡ ಆರಂಭವಾಗಲಿದೆ. ಹೀಗಾಗಿ ತಂಡದ ಪ್ರಮುಖ ಆಟಗಾರರು ಫಿಟ್​ನೆಸ್​ ಮೇಲೆ ಗಮನಹರಿಸಿದ್ದಾರೆ. ಇನ್ನು ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ 18 ಸದಸ್ಯರ ಟೀಮ್ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಎಂಬುದು ಕೂಡ ಈಗ ಚರ್ಚಾ ವಿಷಯವಾಗಿದೆ. ಏಕೆಂದರೆ ಒಂದೆಡೆ ಶ್ರೇಯಸ್ ಅಯ್ಯರ್ (Shreyas Iyer) ಗಾಯದಿಂದ ಈಗಷ್ಟೇ ಚೇತರಿಸಿಕೊಂಡಿದ್ದರೆ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ (Hardik Pandya) ಫಿಟ್​ನೆಸ್ ಮೇಲೆ ಅನುಮಾನಗಳಿವೆ. ಅದರಲ್ಲೂ ಪಾಂಡ್ಯ ಶ್ರೀಲಂಕಾ ವಿರುದ್ದದ ಸರಣಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಸಹ ಸಾಧ್ಯವಾಗಿರಲಿಲ್ಲ. ಇದಾಗ್ಯೂ ಟೀಮ್ ಇಂಡಿಯಾ ಟಿ20 ತಂಡಕ್ಕೆ ಆಲ್​ರೌಂಡರ್ ಸ್ಥಾನದಲ್ಲಿ ಪಾಂಡ್ಯ ಅನಿವಾರ್ಯ.

ಇತ್ತ ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿ ಸ್ಥಾನ ಪಡೆಯಲು ಕಸರತ್ತನ್ನು ಆರಂಭಿಸಿದ್ದಾರೆ. ಅದರಂತೆ ಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಆಗಿದ್ದ ಪರಸ್ ಮಾಂಬ್ರೆ ಸಲಹೆಯಂತೆ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ವಿಶ್ವಕಪ್​ಗೆ ಇನ್ನೂ ಕೂಡ ದಿನಗಳಿದ್ದು, ಇದೀಗ ಪಾಂಡ್ಯ ಬ್ಯಾಟಿಂಗ್ ಜೊತೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಇದಾಗ್ಯೂ ಅವರ ಓವರ್‌ಗಳ ಸಂಖ್ಯೆಯಲ್ಲಿ ಯಾವುದೇ ಒತ್ತಡ ಹೇರಲಾಗುತ್ತಿಲ್ಲ ಎಂದು ಮಾಂಬ್ರೆ ತಿಳಿಸಿದ್ದಾರೆ.

ಬೌಲಿಂಗ್​ನಲ್ಲಿ ಪಾಂಡ್ಯ ನಿಧಾನವಾಗಿ ಟ್ರ್ಯಾಕ್​ಗೆ ಮರಳುತ್ತಿದ್ದು, ಬ್ಯಾಟಿಂಗ್ ಜೊತೆ ಬೌಲಿಂಗ್ ಪ್ರದರ್ಶನ ಸೇರಿದರೆ ಆತ ಬೇರೆ ಮಟ್ಟ ಆಟಗಾರನಾಗುತ್ತಾನೆ. ಹೀಗಾಗಿ ಪ್ರತಿಯೊಂದು ಅಂಶವನ್ನು ಇಲ್ಲಿ ಕೇಂದ್ರಿಕರಿಸಿ ಅಭ್ಯಾಸ ನಡೆಸಲಾಗುತ್ತಿದೆ. ಖಂಡಿತವಾಗಿಯೂ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವಿದೆ ಎಂದು ಮಾಂಬ್ರೆ ತಿಳಿಸಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ 2019 ರ ವಿಶ್ವಕಪ್ ಬಳಿಕ ಬೌಲಿಂಗ್ ಮಾಡುತ್ತಿರಲಿಲ್ಲ. ಇದಾಗ್ಯೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಒಂದೆರೆಡು ಓವರ್​ಗಳನ್ನು ಎಸೆದಿದ್ದರು. ಇದೀಗ ಬೌಲಿಂಗ್ ಮಾಡದ ಕಾರಣ ಟೆಸ್ಟ್ ತಂಡದಿಂದ ಪಾಂಡ್ಯ ಸ್ಥಾನ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ 3 ಪಂದ್ಯಗಳಲ್ಲಿ ಮಾಡಿದ್ದು ಕೇವಲ 14 ಓವರ್ ಮಾತ್ರ. ಹಾಗೆಯೇ ಟಿ20ಯಲ್ಲಿ  ಬೌಲಿಂಗ್ ಮಾಡಿದರೂ, ಸಂಪೂರ್ಣ 4 ಓವರ್ ಎಸೆಯುವ ಪ್ರಯತ್ನ ಮಾಡಿರಲಿಲ್ಲ. ಇದೀಗ ಟಿ20 ವಿಶ್ವಕಪ್​ ತಂಡಕ್ಕೆ ಪಾಂಡ್ಯ ಆಯ್ಕೆ ಆಗಬೇಕಿದ್ದರೆ ಆಲ್​ರೌಂಡರ್ ಪ್ರದರ್ಶನ ನೀಡಲೇಬೇಕು. ಹೀಗಾಗಿ ಮತ್ತೆ ಬೌಲಿಂಗ್​ನತ್ತ ಹೆಚ್ಚು ಗಮನಹರಿಸುತ್ತಿದ್ದು, ಈ ಮೂಲಕ ಆಲ್​ರೌಂಡರ್ ಆಗಿ ಮತ್ತೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾ ಹಾರ್ದಿಕ್ ಪಾಂಡ್ಯ.

ಇದನ್ನೂ ಓದಿ:Afghanistan Crisis: ತಾಲಿಬಾನ್ ಗ್ಯಾಂಗ್​ ಜೊತೆ ಕಾಣಿಸಿಕೊಂಡ ಅಫ್ಘಾನಿಸ್ತಾನ್ ಕ್ರಿಕೆಟಿಗ 

ಇದನ್ನೂ ಓದಿ: 17 ವರ್ಷದ ಹುಡುಗಿಗೆ 35 ವರ್ಷದವನ ಜೊತೆ ಲವ್ವಿ-ಡವ್ವಿ: ಲಾಡ್ಜ್​ನಲ್ಲಿ ಇಬ್ಬರನ್ನು ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

ಇದನ್ನೂ ಓದಿ: Tim David: Rcb ತಂಡ ಸಿಂಗಾಪೂರ್ ಕ್ರಿಕೆಟಿಗನನ್ನು ಆಯ್ಕೆ ಮಾಡಿದ್ದು ಯಾಕೆ? ಇಲ್ಲಿದೆ ಉತ್ತರ

Published On - 5:55 pm, Sun, 22 August 21

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ