AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಮೋಘ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

India vs South Africa: 117 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಯುವ ದಾಂಡಿಗ ಸಾಯಿ ಸುದರ್ಶನ್ (55) ಅಜೇಯ ಅರ್ಧಶತಕ ಬಾರಿಸಿದರೆ, ಶ್ರೇಯಸ್ ಅಯ್ಯರ್ 52 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಕೇವಲ 16.4 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

IND vs SA: ಅಮೋಘ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Team India
TV9 Web
| Edited By: |

Updated on:Dec 18, 2023 | 8:06 AM

Share

ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಯುವ ವೇಗಿಗಳಾದ ಅರ್ಷದೀಪ್ ಸಿಂಗ್ ಹಾಗೂ ಅವೇಶ್ ಖಾನ್ ದಾಳಿಗೆ ತತ್ತರಿಸಿತು.

ಎಡಗೈ ವೇಗಿ ಅರ್ಷದೀಪ್ ಸಿಂಗ್ ನೀಡಿದ ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಅವೇಶ್ ಖಾನ್ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ್ದರು. ಇದರಿಂದ ಕೇವಲ 27.3 ಓವರ್​ಗಳಲ್ಲಿ 116 ರನ್​ಗಳಿಸಿ ಸೌತ್ ಆಫ್ರಿಕಾ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಅರ್ಷದೀಪ್ ಸಿಂಗ್ 10 ಓವರ್​ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದರೆ, ಅವೇಶ್ ಖಾನ್ 8 ಓವರ್​ಗಳಲ್ಲಿ 27 ರನ್ ನೀಡಿ 4 ವಿಕೆಟ್ ಕಬಳಿಸಿದರು. ಹಾಗೆಯೇ ಒಂದು ವಿಕೆಟ್ ಕುಲ್ದೀಪ್ ಯಾದವ್ ಪಾಲಾಯಿತು.

ಇನ್ನು 117 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಯುವ ದಾಂಡಿಗ ಸಾಯಿ ಸುದರ್ಸನ್ (55) ಅಜೇಯ ಅರ್ಧಶತಕ ಬಾರಿಸಿದರೆ, ಶ್ರೇಯಸ್ ಅಯ್ಯರ್ 52 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಕೇವಲ 16.4 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ:

ಇದು ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾಗೆ ಲಭಿಸಿದ ಅತ್ಯುತ್ತಮ ಗೆಲುವುಗಳಲ್ಲಿ ಒಂದು. ಏಕೆಂದರೆ ಈ ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು 200 ಎಸೆತಗಳನ್ನು ಬಾಕಿಯಿರಿಸಿ ಜಯ ಸಾಧಿಸಿದೆ. ಇದಕ್ಕೂ ಮುನ್ನ 2022 ರಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ 185 ಎಸೆತಗಳನ್ನು ಬಾಕಿಯಿರಿಸಿ ಗೆದ್ದಿದ್ದು ಸಾಧನೆಯಾಗಿತ್ತು. ಇದೀಗ ಮೊದಲ ಬಾರಿಗೆ 200 ಎಸೆತಗಳು ಬಾಕಿ ಇರುವಂತೆ ಭರ್ಜರಿ ಜಯ ಸಾಧಿಸಿರುವುದು ವಿಶೇಷ.

ಇನ್ನು ಸೌತ್ ಆಫ್ರಿಕಾ ತಂಡವನ್ನು ಅತೀ ಹೆಚ್ಚು ಬಾಲ್​ಗಳ ಅಂತರದಲ್ಲಿ ಸೋಲಿಸಿದ ಖ್ಯಾತಿ ಈಗಲೂ ಇಂಗ್ಲೆಂಡ್ ತಂಡದ ಹೆಸರಿನಲ್ಲಿದೆ. 2008 ರಲ್ಲಿ ಇಂಗ್ಲೆಂಡ್ ತಂಡವು ಸೌತ್ ಆಫ್ರಿಕಾವನ್ನು 215 ಎಸೆತಗಳನ್ನು ಬಾಕಿಯಿರಿಸಿ ಸೋಲಿಸಿತ್ತು.

ಆದರೆ ಸೌತ್ ಆಫ್ರಿಕಾವನ್ನು ತವರಿನಲ್ಲಿಯೇ 200 ಎಸೆತಗಳನ್ನು ಬಾಕಿ ಇರಿಸಿ ಸೋಲಿಸಿದ ಮೊದಲ ತಂಡವಾಗಿ ಟೀಮ್ ಇಂಡಿಯಾ ಹೊರಹೊಮ್ಮಿರುವುದು ವಿಶೇಷ.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ರೀಝ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್ , ಆಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ.

ಇದನ್ನೂ ಓದಿ: IPL 2024: ಈ ಬಾರಿಯ ಐಪಿಎಲ್​ನೊಂದಿಗೆ 3 ಆಟಗಾರರು ವಿದಾಯ..!

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

Published On - 7:08 am, Mon, 18 December 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ