AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟ್ ಲಾಕ್ ಮಾಡಿದ ಕೀಪರ್: ಟೀಮ್ ಇಂಡಿಯಾ ಆಟಗಾರ ರನೌಟ್!

Sri Lanka A vs India A: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 277 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 48.5 ಓವರ್​ಗಳಲ್ಲಿ 269 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ಎ ತಂಡ 8 ರನ್​ಗಳ ರೋಚಕ ಜಯ ಸಾಧಿಸಿದೆ.

ಬ್ಯಾಟ್ ಲಾಕ್ ಮಾಡಿದ ಕೀಪರ್: ಟೀಮ್ ಇಂಡಿಯಾ ಆಟಗಾರ ರನೌಟ್!
Priyansh Arya - Niroshan DickwellaImage Credit source: Sonyliv.com
ಝಾಹಿರ್ ಯೂಸುಫ್
|

Updated on: Jun 10, 2026 | 12:20 PM

Share

ಕ್ರಿಕೆಟ್ ಮೈದಾನದಲ್ಲಿ ರನೌಟ್​ಗಳು ಸಾಮಾನ್ಯ. ಆದರೆ ಶ್ರೀಲಂಕಾ ‘ಎ’ ವಿರುದ್ಧದ ಪಂದ್ಯದಲ್ಲಿ ಭಾರತ ‘ಎ’ ತಂಡದ ಯುವ ಬ್ಯಾಟರ್ ಪ್ರಿಯಾಂಶ್ ಆರ್ಯ ಔಟ್ ಆದ ರೀತಿ ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿಕೆಟ್ ಕೀಪರ್ ಕಾಲಿನ ಕೆಳಗೆ ಬ್ಯಾಟ್ ಸಿಲುಕಿಕೊಂಡ ಕಾರಣ, ಕ್ರೀಸ್ ತಲುಪಲು ಸಾಧ್ಯವಾಗದೆ ಅವರು ವಿಚಿತ್ರವಾಗಿ ವಿಕೆಟ್ ಕೈಚೆಲ್ಲಿದ್ದಾರೆ.

ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಆರಂಭಿಕ ಪಂದ್ಯದಲ್ಲಿ ಈ ಅನಿರೀಕ್ಷಿತ ಹಾಗೂ ವಿವಾದಾತ್ಮಕ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಪ್ರಿಯಾಂಶ್ ಆರ್ಯ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

ಭಾರತ ಇನಿಂಗ್ಸ್‌ನ 13ನೇ ಓವರ್‌ನಲ್ಲಿ ರುತುರಾಜ್ ಗಾಯಕ್ವಾಡ್ ಲಾಂಗ್-ಆಫ್ ಕಡೆಗೆ ಚೆಂಡನ್ನು ಬಾರಿಸಿ, ಎರಡನೇ ರನ್ ಗಳಿಸಲು ಪ್ರಿಯಾಂಶ್ ಆರ್ಯ ಅವರಿಗೆ ಕರೆ ನೀಡಿದರು. ಆದರೆ ಆರ್ಯ ಆರಂಭದಲ್ಲಿ ಓಡಲು ಹಿಂಜರಿದರು. ಅಷ್ಟರಲ್ಲಾಗಲೇ ಗಾಯಕ್ವಾಡ್ ಪಿಚ್‌ನ ಮಧ್ಯಭಾಗವನ್ನು ದಾಟಿ ವೇಗವಾಗಿ ಧಾವಿಸಿ ಬಂದಿದ್ದರು.

ಈ ಗೊಂದಲದಿಂದಾಗಿ ಇಬ್ಬರೂ ಬ್ಯಾಟರ್‌ಗಳು ರನ್ ಔಟ್‌ನಿಂದ ಬಲಿಯಾಗುವುದನ್ನು ತಪ್ಪಿಸಿಕೊಳ್ಳಲು ಒಂದೇ ತುದಿಯ (ಸ್ಟ್ರೈಕರ್ ಎಂಡ್) ಕ್ರೀಸ್‌ನತ್ತ ಓಡಿದರು.

ವಿಚಿತ್ರ ರನೌಟ್!

ಸ್ಟ್ರೈಕರ್ ಎಂಡ್​ನಲ್ಲಿದ್ದ ಪ್ರಿಯಾಂಶ್ ಆರ್ಯ ತಿರುಗಿ ನಿಂತು ಕ್ರೀಸ್​ಗೆ ಬ್ಯಾಟ್ ಹಿಡಲು ಮುಂದಾದಾಗ, ಚೆಂಡನ್ನು ಹಿಡಿಯಲು ನಿಂತಿದ್ದ ಶ್ರೀಲಂಕಾದ ವಿಕೆಟ್ ಕೀಪರ್ ನಿರೋಶನ್ ಡಿಕ್ವೆಲ್ಲಾ ಕಾಲಿನಲ್ಲಿ ಬ್ಯಾಟ್ ಅನ್ನು ಲಾಕ್ ಮಾಡಿದರು.

ಡಿಕ್ವೆಲ್ಲಾ ಕಾಲು ಅಡ್ಡ ಬಂದಿದ್ದರಿಂದ ಆರ್ಯ ಅವರಿಗೆ ಬ್ಯಾಟನ್ನು ಕ್ರೀಸ್‌ನ ಗೆರೆಯ ಒಳಗೆ ಸ್ಲೈಡ್ ಮಾಡಲು ಸಾಧ್ಯವಾಗಲಿಲ್ಲ. ಅಷ್ಟರಲ್ಲಾಗಲೇ ರುತುರಾಜ್ ಗಾಯಕ್ವಾಡ್ ಮೊದಲಿಗನಾಗಿ ಕ್ರೀಸ್‌ನೊಳಗೆ ಬ್ಯಾಟ್ ಇಟ್ಟು ಸುರಕ್ಷಿತರಾದರು.  ತಕ್ಷಣವೇ ಎಚ್ಚೆತ್ತ ವಿಕೆಟ್ ಕೀಪರ್ ಡಿಕ್ವೆಲ್ಲಾ, ಚೆಂಡನ್ನು ನಾನ್-ಸ್ಟ್ರೈಕರ್ ತುದಿಗೆ ಎಸೆದು ಸ್ಟಂಪ್ ಉರುಳಿಸಿದರು.

ಥರ್ಡ್ ಅಂಪೈರ್ ತೀರ್ಪು ಮತ್ತು ವಿವಾದ:

ಮೂರನೇ ಅಂಪೈರ್ ದೃಶ್ಯಗಳನ್ನು ಪರಿಶೀಲಿಸಿದಾಗ, ಇಬ್ಬರೂ ಬ್ಯಾಟರ್‌ಗಳು ಒಂದೇ ಕ್ರೀಸ್‌ನತ್ತ ಓಡಿ ಬಂದಾಗ ಗಾಯಕ್ವಾಡ್ ಮೊದಲು ಗೆರೆ ದಾಟಿದ್ದು ಸ್ಪಷ್ಟವಾಗಿ ತಿಳಿಯಿತು. ಹೀಗಾಗಿ ನಿಯಮದ ಪ್ರಕಾರ ಪ್ರಿಯಾಂಶ್ ಆರ್ಯ (32 ರನ್) ಔಟ್ ಎಂದು ಘೋಷಿಸಲಾಯಿತು. ಆದರೆ ಈ ತೀರ್ಪು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಏಕೆಂದರೆ ವಿಕೆಟ್ ಕೀಪರ್ ಕಾಲು ಅಡ್ಡ ಇಟ್ಟು ಬ್ಯಾಟನ್ನು ತಡೆದಿದ್ದರಿಂದ ಇದು ಕ್ರಿಕೆಟ್‌ನ ‘ಎಂಸಿಸಿ ನಿಯಮ 37’ ಅಡಿಯಲ್ಲಿ ಬರುತ್ತದೆ ಎಂದು ಅನೇಕ ಅಭಿಮಾನಿಗಳು ವಾದಿಸಿದ್ದಾರೆ. ಅಂದರೆ ಫೀಲ್ಡಿಂಗ್​ ಅಥವಾ ಬ್ಯಾಟಿಂಗ್​ಗೆ ಅಡ್ಡಿಪಡಿಸಿದ ನಿಯಮದಡಿಯಲ್ಲಿ ಇದನ್ನು ನಾಟೌಟ್​ ಎಂದು ಪರಿಗಣಿಸಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಇದೇ ಮೊದಲ ಬಾರಿ… ‘ಲಾರ್ಡ್ಸ್’ ಪಿಚ್​ಗೆ ಡಿಮೆರಿಟ್ ಪಾಯಿಂಟ್!

ಮೇಲ್ನೋಟಕ್ಕೆ  ಡಿಕ್ವೆಲ್ಲಾ ಉದ್ದೇಶಪೂರ್ವಕವಾಗಿ ಕಾಲು ಇಟ್ಟಿರಲಿಲ್ಲ, ಅದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಅಂಪೈರ್‌ಗಳು ಪರಿಗಣಿಸಿದ್ದರಿಂದ ಪ್ರಿಯಾಂಶ್ ಆರ್ಯ ಪೆವಿಲಿಯನ್ ಹಾದಿ ಹಿಡಿಯಬೇಕಾಯಿತು. ಈ ವಿಚಿತ್ರ ಗೊಂದಲದ ಹೊರತಾಗಿಯೂ ಭಾರತ ‘ಎ’ ತಂಡ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದೆ.

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್