AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!

Clash On Cricket Pitch: ಕ್ರಿಕೆಟ್ ಪಂದ್ಯದ ವೇಳೆ ಇಬ್ಬರು ಆಟಗಾರರು ಕೈ ಕೈ ಮಿಲಾಯಿಸಿದ ಅಹಿತಕರ ಘಟನೆ ಯುಎಇ ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ. ಇದೀಗ ಈ ಹೊಡೆದಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆಟಗಾರರ ಈ ನಡೆಗೆ ಕ್ರಿಕೆಟ್​ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 28, 2024 | 1:28 PM

Share

ಕ್ರಿಕೆಟ್ ಪಂದ್ಯದ ನಡುವೆ ವಾಕ್ಸಮರ ನಡೆಯುವುದು ನೀವು ನೋಡಿರುತ್ತೀರಿ… ಇನ್ನೂ ಕೆಲ ಬಾರಿ ವಾಗ್ವಾದ ತಾರಕ್ಕೇರಿ ಹೊಡೆದಾಟದ ಹಂತಕ್ಕೂ ಹೋಗಿರುವುದನ್ನು ನೀವು ವೀಕ್ಷಿಸುತ್ತೀರಿ… ಆದರೆ ಇಲ್ಲೊಂದು ಲೀಗ್​ನಲ್ಲಿ ಆಟಗಾರರು ಪಿಚ್​ನಲ್ಲೇ ಹೊಡೆದಾಡಿಕೊಂಡಿದ್ದಾರೆ. ಯುಎಇ ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಪಂದ್ಯಾವಳಿ ಇಂತಹದೊಂದು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಅಜ್ಮಾನ್​ನಲ್ಲಿ ನಡೆಯುತ್ತಿರುವ ಎಸಿಸಿ ವೀಕ್​ಡೇಸ್ ಬ್ಯಾಷ್ ಪಂದ್ಯಾವಳಿಯಲ್ಲಿ ಏರೋವಿಸಾ ಕ್ರಿಕೆಟ್ ಕ್ಲಬ್ ಮತ್ತು ರಬ್ಡಾನ್ ಕ್ರಿಕೆಟ್ ಕ್ಲಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ 13ನೇ ಓವರ್​ನಲ್ಲಿ ರಬ್ಡಾನ್ ಬ್ಯಾಟರ್ ಕಾಶಿಫ್ ಮುಹಮ್ಮದ್ ಅವರನ್ನು ಔಟ್ ಮಾಡಿದ ಮತ್ತು ಏರೋವಿಸಾ ಬೌಲರ್ ನಾಸಿರ್ ಅಲಿ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದಾರೆ.

ಅಷ್ಟೇ ಅಲ್ಲದೆ ಬ್ಯಾಟರ್​ ಪೆವಿಲಿಯನ್​ನತ್ತ ಸಾಗುವ ವೇಳೆ ನಾಲಿಗೆ ಹರಿಬಿಟ್ಟಿದ್ದಾರೆ. ಇದರಿಂದ ಕುಪಿತರಾದ ಕಾಶಿಫ್ ಮುಹಮ್ಮದ್, ನಾಸಿರ್ ಅಲಿ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಅಷ್ಟೇ… ವಾಕ್ಸಮರ ಶುರುವಾಗುತ್ತಿದ್ದಂತೆ ಇಬ್ಬರು ಹೊಡೆದಾಟವನ್ನೂ ಸಹ ಆರಂಭಿಸಿದ್ದಾರೆ. ಪಿಚ್​ನಲ್ಲಿ ಹೊರಳಾಡಿ ಹೊಡೆದಾಟಿಕೊಳ್ಳುತ್ತಿದ್ದ ಕಾಶಿಫ್ ಹಾಗೂ ನಾಸಿರ್​ನನ್ನು ಸಹ ಆಟಗಾರರು ಹಾಗೂ ಅಂಪೈರ್​ಗಳು ಬೇರ್ಪಡಿಸಲು ಪ್ರಯತ್ನಿಸುವುದು ವಿಡಿಯೋದಲ್ಲಿ ಕಾಣಬಹುದು. ಇದೀಗ ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರೀಡಾಸ್ಪೂರ್ತಿಯೇ ಇಲ್ಲದೆ ಮೈದಾನದಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರಿಗೂ ನೆಟ್ಟಿಗರು ಪ್ರತಿಕ್ರಿಯೆಯ ಮೂಲಕ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ