AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!

Clash On Cricket Pitch: ಕ್ರಿಕೆಟ್ ಪಂದ್ಯದ ವೇಳೆ ಇಬ್ಬರು ಆಟಗಾರರು ಕೈ ಕೈ ಮಿಲಾಯಿಸಿದ ಅಹಿತಕರ ಘಟನೆ ಯುಎಇ ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ. ಇದೀಗ ಈ ಹೊಡೆದಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆಟಗಾರರ ಈ ನಡೆಗೆ ಕ್ರಿಕೆಟ್​ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 28, 2024 | 1:28 PM

Share

ಕ್ರಿಕೆಟ್ ಪಂದ್ಯದ ನಡುವೆ ವಾಕ್ಸಮರ ನಡೆಯುವುದು ನೀವು ನೋಡಿರುತ್ತೀರಿ… ಇನ್ನೂ ಕೆಲ ಬಾರಿ ವಾಗ್ವಾದ ತಾರಕ್ಕೇರಿ ಹೊಡೆದಾಟದ ಹಂತಕ್ಕೂ ಹೋಗಿರುವುದನ್ನು ನೀವು ವೀಕ್ಷಿಸುತ್ತೀರಿ… ಆದರೆ ಇಲ್ಲೊಂದು ಲೀಗ್​ನಲ್ಲಿ ಆಟಗಾರರು ಪಿಚ್​ನಲ್ಲೇ ಹೊಡೆದಾಡಿಕೊಂಡಿದ್ದಾರೆ. ಯುಎಇ ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಪಂದ್ಯಾವಳಿ ಇಂತಹದೊಂದು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಅಜ್ಮಾನ್​ನಲ್ಲಿ ನಡೆಯುತ್ತಿರುವ ಎಸಿಸಿ ವೀಕ್​ಡೇಸ್ ಬ್ಯಾಷ್ ಪಂದ್ಯಾವಳಿಯಲ್ಲಿ ಏರೋವಿಸಾ ಕ್ರಿಕೆಟ್ ಕ್ಲಬ್ ಮತ್ತು ರಬ್ಡಾನ್ ಕ್ರಿಕೆಟ್ ಕ್ಲಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ 13ನೇ ಓವರ್​ನಲ್ಲಿ ರಬ್ಡಾನ್ ಬ್ಯಾಟರ್ ಕಾಶಿಫ್ ಮುಹಮ್ಮದ್ ಅವರನ್ನು ಔಟ್ ಮಾಡಿದ ಮತ್ತು ಏರೋವಿಸಾ ಬೌಲರ್ ನಾಸಿರ್ ಅಲಿ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದಾರೆ.

ಅಷ್ಟೇ ಅಲ್ಲದೆ ಬ್ಯಾಟರ್​ ಪೆವಿಲಿಯನ್​ನತ್ತ ಸಾಗುವ ವೇಳೆ ನಾಲಿಗೆ ಹರಿಬಿಟ್ಟಿದ್ದಾರೆ. ಇದರಿಂದ ಕುಪಿತರಾದ ಕಾಶಿಫ್ ಮುಹಮ್ಮದ್, ನಾಸಿರ್ ಅಲಿ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಅಷ್ಟೇ… ವಾಕ್ಸಮರ ಶುರುವಾಗುತ್ತಿದ್ದಂತೆ ಇಬ್ಬರು ಹೊಡೆದಾಟವನ್ನೂ ಸಹ ಆರಂಭಿಸಿದ್ದಾರೆ. ಪಿಚ್​ನಲ್ಲಿ ಹೊರಳಾಡಿ ಹೊಡೆದಾಟಿಕೊಳ್ಳುತ್ತಿದ್ದ ಕಾಶಿಫ್ ಹಾಗೂ ನಾಸಿರ್​ನನ್ನು ಸಹ ಆಟಗಾರರು ಹಾಗೂ ಅಂಪೈರ್​ಗಳು ಬೇರ್ಪಡಿಸಲು ಪ್ರಯತ್ನಿಸುವುದು ವಿಡಿಯೋದಲ್ಲಿ ಕಾಣಬಹುದು. ಇದೀಗ ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರೀಡಾಸ್ಪೂರ್ತಿಯೇ ಇಲ್ಲದೆ ಮೈದಾನದಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರಿಗೂ ನೆಟ್ಟಿಗರು ಪ್ರತಿಕ್ರಿಯೆಯ ಮೂಲಕ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ