AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!

Clash On Cricket Pitch: ಕ್ರಿಕೆಟ್ ಪಂದ್ಯದ ವೇಳೆ ಇಬ್ಬರು ಆಟಗಾರರು ಕೈ ಕೈ ಮಿಲಾಯಿಸಿದ ಅಹಿತಕರ ಘಟನೆ ಯುಎಇ ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ. ಇದೀಗ ಈ ಹೊಡೆದಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆಟಗಾರರ ಈ ನಡೆಗೆ ಕ್ರಿಕೆಟ್​ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 28, 2024 | 1:28 PM

Share

ಕ್ರಿಕೆಟ್ ಪಂದ್ಯದ ನಡುವೆ ವಾಕ್ಸಮರ ನಡೆಯುವುದು ನೀವು ನೋಡಿರುತ್ತೀರಿ… ಇನ್ನೂ ಕೆಲ ಬಾರಿ ವಾಗ್ವಾದ ತಾರಕ್ಕೇರಿ ಹೊಡೆದಾಟದ ಹಂತಕ್ಕೂ ಹೋಗಿರುವುದನ್ನು ನೀವು ವೀಕ್ಷಿಸುತ್ತೀರಿ… ಆದರೆ ಇಲ್ಲೊಂದು ಲೀಗ್​ನಲ್ಲಿ ಆಟಗಾರರು ಪಿಚ್​ನಲ್ಲೇ ಹೊಡೆದಾಡಿಕೊಂಡಿದ್ದಾರೆ. ಯುಎಇ ನಲ್ಲಿ ನಡೆದ ಕ್ಲಬ್ ಕ್ರಿಕೆಟ್ ಪಂದ್ಯಾವಳಿ ಇಂತಹದೊಂದು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಅಜ್ಮಾನ್​ನಲ್ಲಿ ನಡೆಯುತ್ತಿರುವ ಎಸಿಸಿ ವೀಕ್​ಡೇಸ್ ಬ್ಯಾಷ್ ಪಂದ್ಯಾವಳಿಯಲ್ಲಿ ಏರೋವಿಸಾ ಕ್ರಿಕೆಟ್ ಕ್ಲಬ್ ಮತ್ತು ರಬ್ಡಾನ್ ಕ್ರಿಕೆಟ್ ಕ್ಲಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ 13ನೇ ಓವರ್​ನಲ್ಲಿ ರಬ್ಡಾನ್ ಬ್ಯಾಟರ್ ಕಾಶಿಫ್ ಮುಹಮ್ಮದ್ ಅವರನ್ನು ಔಟ್ ಮಾಡಿದ ಮತ್ತು ಏರೋವಿಸಾ ಬೌಲರ್ ನಾಸಿರ್ ಅಲಿ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದಾರೆ.

ಅಷ್ಟೇ ಅಲ್ಲದೆ ಬ್ಯಾಟರ್​ ಪೆವಿಲಿಯನ್​ನತ್ತ ಸಾಗುವ ವೇಳೆ ನಾಲಿಗೆ ಹರಿಬಿಟ್ಟಿದ್ದಾರೆ. ಇದರಿಂದ ಕುಪಿತರಾದ ಕಾಶಿಫ್ ಮುಹಮ್ಮದ್, ನಾಸಿರ್ ಅಲಿ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಅಷ್ಟೇ… ವಾಕ್ಸಮರ ಶುರುವಾಗುತ್ತಿದ್ದಂತೆ ಇಬ್ಬರು ಹೊಡೆದಾಟವನ್ನೂ ಸಹ ಆರಂಭಿಸಿದ್ದಾರೆ. ಪಿಚ್​ನಲ್ಲಿ ಹೊರಳಾಡಿ ಹೊಡೆದಾಟಿಕೊಳ್ಳುತ್ತಿದ್ದ ಕಾಶಿಫ್ ಹಾಗೂ ನಾಸಿರ್​ನನ್ನು ಸಹ ಆಟಗಾರರು ಹಾಗೂ ಅಂಪೈರ್​ಗಳು ಬೇರ್ಪಡಿಸಲು ಪ್ರಯತ್ನಿಸುವುದು ವಿಡಿಯೋದಲ್ಲಿ ಕಾಣಬಹುದು. ಇದೀಗ ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರೀಡಾಸ್ಪೂರ್ತಿಯೇ ಇಲ್ಲದೆ ಮೈದಾನದಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರಿಗೂ ನೆಟ್ಟಿಗರು ಪ್ರತಿಕ್ರಿಯೆಯ ಮೂಲಕ ಫುಲ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ